<p><strong>ನವದೆಹಲಿ (ಪಿಟಿಐ): </strong>ನಕ್ಸಲ್ ಪೀಡಿತ ಜಿಲ್ಲೆಗಳ ಯುವಕರನ್ನು ಗುರಿಯಾಗಿಟ್ಟುಕೊಂಡು, ಅವರಿಗೆ ಕೌಶಲ ಅಭಿವೃದ್ಧಿ ತರಬೇತಿ ನೀಡುವ `ರೋಶನಿ' ಯೋಜನೆಗೆ ಕೇಂದ್ರ ಸರ್ಕಾರ ಶುಕ್ರವಾರ ಚಾಲನೆ ನೀಡಿದೆ.<br /> <br /> `ಈ ಯೋಜನೆಯಡಿ ತರಬೇತಿ ಪಡೆಯುವವರ ಪೈಕಿ ಶೇ 50ರಷ್ಟು ಮಹಿಳೆಯರು ಇರುತ್ತಾರೆ. ಬುಡಕಟ್ಟು ಗುಂಪುಗಳಿಗೂ ಆದ್ಯತೆ ಕೊಡಲಾಗುತ್ತದೆ' ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ ತಿಳಿಸಿದರು.<br /> <br /> ಮಾವೋವಾದಿಗಳು ಯುವಕರನ್ನು ಸೆಳೆಯುತ್ತಿರುವ ಹಿನ್ನೆಲೆಯಲ್ಲಿ ಈ ವಿನೂತನ ಯೋಜನೆ ರೂಪಿಸಲಾಗಿದ್ದು, ಇದು ಯುವಪೀಳಿಗೆಗೆ ಹೊಸ ದಾರಿ ತೋರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ನಕ್ಸಲ್ ಪೀಡಿತ ಒಂಬತ್ತು ರಾಜ್ಯಗಳ 24 ಜಿಲ್ಲೆಗಳಲ್ಲಿ ಒಟ್ಟು 50 ಸಾವಿರ ಯುವಕರಿಗೆ ಕೌಶಲ ತರಬೇತಿ ನೀಡಿ, ಉದ್ಯೋಗಾವಕಾಶ ಕಲ್ಪಿಸುವುದು ಮೂರು ವರ್ಷಗಳ ಅವಧಿಯ ಈ ಯೋಜನೆಯಲ್ಲಿ ಸೇರಿದೆ. ಸರ್ಕಾರ, ಖಾಸಗಿ ಉದ್ದಿಮೆಗಳು, ಸ್ವಯಂಸೇವಾ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಅಭ್ಯರ್ಥಿಗಳಿಗೆ ಅವರು ಬಯಸಿದ ವಿಭಾಗಗಳಲ್ಲಿ ತರಬೇತಿ ಕೊಡಲಾಗುವುದು ಎಂದು ವಿವರಿಸಿದರು.<br /> <br /> ಯವಕರು, ಶಾಲೆ ತೊರೆದವರು ಹಾಗೂ ಕಾಲೇಜು ವ್ಯಾಸಂಗ ಪೂರ್ಣಗೊಳಿಸಿದವರಿಗೆ ಕೌಶಲ ತರಬೇತಿ ಕೊಡಲು ವಿವಿಧ ಕಾರ್ಯತಂತ್ರ ರೂಪಿಸಲಾಗುವುದು. ಇದಕ್ಕೆ ತಗಲುವ ವೆಚ್ಚವನ್ನು 75: 25ರ ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭರಿಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ನಕ್ಸಲ್ ಪೀಡಿತ ಜಿಲ್ಲೆಗಳ ಯುವಕರನ್ನು ಗುರಿಯಾಗಿಟ್ಟುಕೊಂಡು, ಅವರಿಗೆ ಕೌಶಲ ಅಭಿವೃದ್ಧಿ ತರಬೇತಿ ನೀಡುವ `ರೋಶನಿ' ಯೋಜನೆಗೆ ಕೇಂದ್ರ ಸರ್ಕಾರ ಶುಕ್ರವಾರ ಚಾಲನೆ ನೀಡಿದೆ.<br /> <br /> `ಈ ಯೋಜನೆಯಡಿ ತರಬೇತಿ ಪಡೆಯುವವರ ಪೈಕಿ ಶೇ 50ರಷ್ಟು ಮಹಿಳೆಯರು ಇರುತ್ತಾರೆ. ಬುಡಕಟ್ಟು ಗುಂಪುಗಳಿಗೂ ಆದ್ಯತೆ ಕೊಡಲಾಗುತ್ತದೆ' ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ ತಿಳಿಸಿದರು.<br /> <br /> ಮಾವೋವಾದಿಗಳು ಯುವಕರನ್ನು ಸೆಳೆಯುತ್ತಿರುವ ಹಿನ್ನೆಲೆಯಲ್ಲಿ ಈ ವಿನೂತನ ಯೋಜನೆ ರೂಪಿಸಲಾಗಿದ್ದು, ಇದು ಯುವಪೀಳಿಗೆಗೆ ಹೊಸ ದಾರಿ ತೋರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ನಕ್ಸಲ್ ಪೀಡಿತ ಒಂಬತ್ತು ರಾಜ್ಯಗಳ 24 ಜಿಲ್ಲೆಗಳಲ್ಲಿ ಒಟ್ಟು 50 ಸಾವಿರ ಯುವಕರಿಗೆ ಕೌಶಲ ತರಬೇತಿ ನೀಡಿ, ಉದ್ಯೋಗಾವಕಾಶ ಕಲ್ಪಿಸುವುದು ಮೂರು ವರ್ಷಗಳ ಅವಧಿಯ ಈ ಯೋಜನೆಯಲ್ಲಿ ಸೇರಿದೆ. ಸರ್ಕಾರ, ಖಾಸಗಿ ಉದ್ದಿಮೆಗಳು, ಸ್ವಯಂಸೇವಾ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಅಭ್ಯರ್ಥಿಗಳಿಗೆ ಅವರು ಬಯಸಿದ ವಿಭಾಗಗಳಲ್ಲಿ ತರಬೇತಿ ಕೊಡಲಾಗುವುದು ಎಂದು ವಿವರಿಸಿದರು.<br /> <br /> ಯವಕರು, ಶಾಲೆ ತೊರೆದವರು ಹಾಗೂ ಕಾಲೇಜು ವ್ಯಾಸಂಗ ಪೂರ್ಣಗೊಳಿಸಿದವರಿಗೆ ಕೌಶಲ ತರಬೇತಿ ಕೊಡಲು ವಿವಿಧ ಕಾರ್ಯತಂತ್ರ ರೂಪಿಸಲಾಗುವುದು. ಇದಕ್ಕೆ ತಗಲುವ ವೆಚ್ಚವನ್ನು 75: 25ರ ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭರಿಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>