<p>ನವದೆಹಲಿ (ಪಿಟಿಐ): ಪ್ರಜಾಪ್ರಭುತ್ವದಲ್ಲಿ ನಕ್ಸಲೀಯ ಹಿಂಸಾಚಾರಕ್ಕೆ ಅವಕಾಶವಿಲ್ಲ. ಮಾವೋವಾದಿಗಳ ಹಿಂಸಾಚಾರವನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯಗಳು ಪರಸ್ಪರ ಕೈಜೋಡಿಸಬೇಕು ಎಂದು ಪ್ರಧಾನಿ ಮನಮೋಹನ್ ಸಿಂಗ್ ಬುಧವಾರ ಇಲ್ಲಿ ಕರೆ ನೀಡಿದರು.<br /> <br /> ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಇಲ್ಲಿ ನಡೆದ ಮುಖ್ಯಮಂತ್ರಿಗಳ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.<br /> <br /> 'ಪ್ರಜಾಪ್ರಭುತ್ವದಲ್ಲಿ ನಕ್ಸಲೀಯ ಹಿಂಸಾಚಾರಕ್ಕೆ ಸ್ಥಾನವಿಲ್ಲ. ಸಂವಿಧಾನದ ಚೌಕಟ್ಟಿನೊಳಗೆಯೇ ಎಲ್ಲ ಉಗ್ರಗಾಮಿ ಗುಂಪುಗಳ ಜೊತೆಗೂ ಮಾತುಕತೆ ನಡೆಸಲು ಸರ್ಕಾರ ಬಯಸಿದೆ' ಎಂದು ಅವರು ನುಡಿದರು.<br /> <br /> 2012ರಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತೆಯಲ್ಲಿ ಮಹತ್ವದ ಸುಧಾರಣೆಯಾಗಿದೆ ಎಂದು ಅವರು ಹೇಳಿದರು.<br /> <br /> ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ನಿಟ್ಟಿನಲ್ಲಿ ಸಾಂಸ್ಥಿಕ ವ್ಯವಸ್ಥೆಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕರಿಸಬೇಕು ಎಂದೂ ಅವರು ನುಡಿದರು.<br /> <br /> ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮಾತನಾಡಿ ಪಂಜಾಬಿನಲ್ಲಿ ಸಿಖ್ ಉಗ್ರವಾದದ ಪುನಶ್ಚೇತನಕ್ಕೆ ಐಎಸ್ಐ ಪ್ರಯತ್ನಿಸುತ್ತಿದೆ ಎಂದು ಆಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಪ್ರಜಾಪ್ರಭುತ್ವದಲ್ಲಿ ನಕ್ಸಲೀಯ ಹಿಂಸಾಚಾರಕ್ಕೆ ಅವಕಾಶವಿಲ್ಲ. ಮಾವೋವಾದಿಗಳ ಹಿಂಸಾಚಾರವನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯಗಳು ಪರಸ್ಪರ ಕೈಜೋಡಿಸಬೇಕು ಎಂದು ಪ್ರಧಾನಿ ಮನಮೋಹನ್ ಸಿಂಗ್ ಬುಧವಾರ ಇಲ್ಲಿ ಕರೆ ನೀಡಿದರು.<br /> <br /> ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಇಲ್ಲಿ ನಡೆದ ಮುಖ್ಯಮಂತ್ರಿಗಳ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.<br /> <br /> 'ಪ್ರಜಾಪ್ರಭುತ್ವದಲ್ಲಿ ನಕ್ಸಲೀಯ ಹಿಂಸಾಚಾರಕ್ಕೆ ಸ್ಥಾನವಿಲ್ಲ. ಸಂವಿಧಾನದ ಚೌಕಟ್ಟಿನೊಳಗೆಯೇ ಎಲ್ಲ ಉಗ್ರಗಾಮಿ ಗುಂಪುಗಳ ಜೊತೆಗೂ ಮಾತುಕತೆ ನಡೆಸಲು ಸರ್ಕಾರ ಬಯಸಿದೆ' ಎಂದು ಅವರು ನುಡಿದರು.<br /> <br /> 2012ರಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತೆಯಲ್ಲಿ ಮಹತ್ವದ ಸುಧಾರಣೆಯಾಗಿದೆ ಎಂದು ಅವರು ಹೇಳಿದರು.<br /> <br /> ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ನಿಟ್ಟಿನಲ್ಲಿ ಸಾಂಸ್ಥಿಕ ವ್ಯವಸ್ಥೆಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕರಿಸಬೇಕು ಎಂದೂ ಅವರು ನುಡಿದರು.<br /> <br /> ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮಾತನಾಡಿ ಪಂಜಾಬಿನಲ್ಲಿ ಸಿಖ್ ಉಗ್ರವಾದದ ಪುನಶ್ಚೇತನಕ್ಕೆ ಐಎಸ್ಐ ಪ್ರಯತ್ನಿಸುತ್ತಿದೆ ಎಂದು ಆಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>