<p>ಬೆಂಗಳೂರು: `ನಗರದಲ್ಲಿ ನಾಗರಿಕರಿಗೆ ಭೂಮಿ ಕಂಪಿಸಿದ ಅನುಭವ ಆಗಿರಬಹುದು. ಆದರೆ ಅದು ಭೂಕಂಪನ ಅಲ್ಲ; ದೂರದ ಸುಮಾತ್ರದಲ್ಲಿ ಸಂಭವಿಸಿದ ಭೂಕಂಪನದ ಪರಿಣಾಮವಷ್ಟೆ~ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದರು.<br /> <br /> ವರದಿಗಾರರೊಂದಿಗೆ ಮಾತನಾಡಿದ ಅವರು, `ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ಕಡಿಮೆ ತೀವ್ರತೆಯ ಭೂಕಂಪನವಾಗಿದೆ. ಇದರಿಂದ ಯಾವುದೇ ಹಾನಿ ಆಗಲು ಸಾಧ್ಯವಿಲ್ಲ~ ಎಂದರು.<br /> <br /> `ರಾಜ್ಯದ ಕರಾವಳಿಯಲ್ಲಿ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮಂಗಳೂರು, ಉಡುಪಿ ಮೊದಲಾದ ಪ್ರದೇಶಗಳ ಜನರು ಕಟ್ಟೆಚ್ಚರ ವಹಿಸುವ ಅಗತ್ಯವಿದೆ. ಮುಂಜಾಗ್ರತಾ ಕ್ರಮವಾಗಿ ಸಮುದ್ರದ ತೀರ ಪ್ರದೇಶಗಳಿಗೆ ಸಾರ್ವಜನಿಕರು ಹೋಗಬಾರದು~ ಎಂದು ಅವರು ತಿಳಿಸಿದರು.<br /> <br /> ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ವಿ.ಎಸ್.ಪ್ರಕಾಶ್, `ನಗರಕ್ಕೆ 2,200 ಕಿ.ಮೀ. ದೂರದಲ್ಲಿರುವ ಸುಮಾತ್ರ ದ್ವೀಪದಲ್ಲಿ ಭೂಕಂಪನವಾಗಿದೆ. ಆ ಕಂಪನ ಉಂಟು ಮಾಡಿದ ಆಘಾತದ ಅಲೆಗಳಿಗೆ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳು ನಡುಗಿವೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ನಗರದಲ್ಲಿ ನಾಗರಿಕರಿಗೆ ಭೂಮಿ ಕಂಪಿಸಿದ ಅನುಭವ ಆಗಿರಬಹುದು. ಆದರೆ ಅದು ಭೂಕಂಪನ ಅಲ್ಲ; ದೂರದ ಸುಮಾತ್ರದಲ್ಲಿ ಸಂಭವಿಸಿದ ಭೂಕಂಪನದ ಪರಿಣಾಮವಷ್ಟೆ~ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದರು.<br /> <br /> ವರದಿಗಾರರೊಂದಿಗೆ ಮಾತನಾಡಿದ ಅವರು, `ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ಕಡಿಮೆ ತೀವ್ರತೆಯ ಭೂಕಂಪನವಾಗಿದೆ. ಇದರಿಂದ ಯಾವುದೇ ಹಾನಿ ಆಗಲು ಸಾಧ್ಯವಿಲ್ಲ~ ಎಂದರು.<br /> <br /> `ರಾಜ್ಯದ ಕರಾವಳಿಯಲ್ಲಿ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮಂಗಳೂರು, ಉಡುಪಿ ಮೊದಲಾದ ಪ್ರದೇಶಗಳ ಜನರು ಕಟ್ಟೆಚ್ಚರ ವಹಿಸುವ ಅಗತ್ಯವಿದೆ. ಮುಂಜಾಗ್ರತಾ ಕ್ರಮವಾಗಿ ಸಮುದ್ರದ ತೀರ ಪ್ರದೇಶಗಳಿಗೆ ಸಾರ್ವಜನಿಕರು ಹೋಗಬಾರದು~ ಎಂದು ಅವರು ತಿಳಿಸಿದರು.<br /> <br /> ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ವಿ.ಎಸ್.ಪ್ರಕಾಶ್, `ನಗರಕ್ಕೆ 2,200 ಕಿ.ಮೀ. ದೂರದಲ್ಲಿರುವ ಸುಮಾತ್ರ ದ್ವೀಪದಲ್ಲಿ ಭೂಕಂಪನವಾಗಿದೆ. ಆ ಕಂಪನ ಉಂಟು ಮಾಡಿದ ಆಘಾತದ ಅಲೆಗಳಿಗೆ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳು ನಡುಗಿವೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>