<p><strong>ದಾವಣಗೆರೆ:</strong> ನಗರೋತ್ಥಾನ ಯೋಜನೆಯ ಅಡಿ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ 1,720 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು.<br /> <br /> ಇಲ್ಲಿನ ಕರೂರು ಪ್ರದೇಶದಲ್ಲಿ 22.75 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾಡಳಿತ ಭವನ, ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ ಹಾಗೂ ವಿವಿಧೆಡೆ ಶಾಲಾ- ಕಾಲೇಜುಗಳಿಗೆ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `1994ರಿಂದಲೂ ವಿಧಾನಸಭೆಯಲ್ಲಿದ್ದೇನೆ. ಯಾವುದೇ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ವಿಶೇಷ ಅನುದಾನ ಕೊಟ್ಟಿರಲಿಲ್ಲ. ವಿಶೇಷ ಅನುದಾನಕ್ಕಾಗಿ ದಂಬಾಲು ಬೀಳಬೇಕಿತ್ತು. ಆದರೆ, ಬಿಜೆಪಿ ಸರ್ಕಾರ ಪ್ರತಿ ನಗರಪಾಲಿಕೆಗೆ ವರ್ಷಕ್ಕೆ ರೂ 100 ಕೋಟಿ ವಿಶೇಷ ಅನುದಾನ ನೀಡುತ್ತಿದೆ. <br /> <br /> ನಗರಸಭೆ, ಪುರಸಭೆಗೆ ಕನಿಷ್ಠ ರೂ 5ರಿಂದ 30 ಕೋಟಿವರೆಗೆ ವಿಶೇಷ ಅನುದಾನ ಕೊಟ್ಟಿದ್ದೇವೆ. ಮಾದರಿ ರಾಜ್ಯ ಮಾಡಲು ಸರ್ಕಾರ ಅಭಿವೃದ್ಧಿ ಕಾರ್ಯ ಮುಂದುವರಿಸಲಿದೆ~ ಎಂದರು.<br /> <br /> ಇಡೀ ರಾಷ್ಟ್ರದಲ್ಲಿಯೇ ಮೊದಲಿಗೆ ಕರ್ನಾಟಕ ಬಿಜೆಪಿ ಸರ್ಕಾರ `ಸುವರ್ಣ ಗ್ರಾಮ~ ಯೋಜನೆ ಜಾರಿಗೊಳಿಸಿದೆ. ಆಯ್ಕೆಯಾದ ಗ್ರಾಮಕ್ಕೆ ಸರಾಸರಿ 1 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. 3,330 ಗ್ರಾಮ ಆಯ್ಕೆಯಾಗಿದ್ದು, ಈ ವರೆಗೆ ರೂ 3 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ಇದೀಗ 5ನೇ ಹಂತದಲ್ಲಿ ಒಂದು ಸಾವಿರ ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಕಾಮಗಾರಿಗಳು ಶೀಘ್ರವೇ ಆರಂಭವಾಗಲಿವೆ ಎಂದು ತಿಳಿಸಿದರು.<br /> <br /> ಒಂದು ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಕನಿಷ್ಠ ರೂ 30 ಲಕ್ಷದಂತೆ ಹಣ ಒದಗಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈವರೆಗೆ ಒಟ್ಟು 50 ಕಿ.ಮೀ. ರಸ್ತೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ, ಸರ್ಕಾರ ಜನರ ಪ್ರೀತಿಗೆ ಪಾತ್ರವಾಗಿದೆ ಎಂದು ವಿಶ್ವಾಸದಿಂದ ಹೇಳಿದರು.<br /> <br /> ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರಕ್ಕೆ ರೂ 3,600 ಕೋಟಿ ಹೊರೆಯಾದರೂ ಸಹ ರೈತರ ಹಿತದೃಷ್ಟಿಯಿಂದ ಸಹಕಾರ ಬ್ಯಾಂಕ್ಗಳಲ್ಲಿ ರೂ 25 ಸಾವಿರದವರೆಗಿನ ಸಾಲ ಮನ್ನಾ ಮಾಡುವ ದಿಟ್ಟ ಕ್ರಮ ಕೈಗೊಂಡಿದೆ. ಎಲ್ಲ ವರ್ಗದವರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.<br /> <br /> ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 4 ರಿಂದ 6 ಸಾವಿರ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ. ಹಿಂದಿನ ಯಾವುದೇ ಸರ್ಕಾರ ಈ ಕೆಲಸ ಮಾಡಿರಲಿಲ್ಲ. ಇದೀಗ, ವಸತಿ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚುವರಿಯಾಗಿ ರೂ 1 ಸಾವಿರ ಕೋಟಿ ಅನುದಾನವನ್ನು ವಸತಿ ಇಲಾಖೆಗೆ ನೀಡಲಾಗಿದೆ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ನಗರೋತ್ಥಾನ ಯೋಜನೆಯ ಅಡಿ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ 1,720 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು.<br /> <br /> ಇಲ್ಲಿನ ಕರೂರು ಪ್ರದೇಶದಲ್ಲಿ 22.75 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾಡಳಿತ ಭವನ, ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ ಹಾಗೂ ವಿವಿಧೆಡೆ ಶಾಲಾ- ಕಾಲೇಜುಗಳಿಗೆ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `1994ರಿಂದಲೂ ವಿಧಾನಸಭೆಯಲ್ಲಿದ್ದೇನೆ. ಯಾವುದೇ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ವಿಶೇಷ ಅನುದಾನ ಕೊಟ್ಟಿರಲಿಲ್ಲ. ವಿಶೇಷ ಅನುದಾನಕ್ಕಾಗಿ ದಂಬಾಲು ಬೀಳಬೇಕಿತ್ತು. ಆದರೆ, ಬಿಜೆಪಿ ಸರ್ಕಾರ ಪ್ರತಿ ನಗರಪಾಲಿಕೆಗೆ ವರ್ಷಕ್ಕೆ ರೂ 100 ಕೋಟಿ ವಿಶೇಷ ಅನುದಾನ ನೀಡುತ್ತಿದೆ. <br /> <br /> ನಗರಸಭೆ, ಪುರಸಭೆಗೆ ಕನಿಷ್ಠ ರೂ 5ರಿಂದ 30 ಕೋಟಿವರೆಗೆ ವಿಶೇಷ ಅನುದಾನ ಕೊಟ್ಟಿದ್ದೇವೆ. ಮಾದರಿ ರಾಜ್ಯ ಮಾಡಲು ಸರ್ಕಾರ ಅಭಿವೃದ್ಧಿ ಕಾರ್ಯ ಮುಂದುವರಿಸಲಿದೆ~ ಎಂದರು.<br /> <br /> ಇಡೀ ರಾಷ್ಟ್ರದಲ್ಲಿಯೇ ಮೊದಲಿಗೆ ಕರ್ನಾಟಕ ಬಿಜೆಪಿ ಸರ್ಕಾರ `ಸುವರ್ಣ ಗ್ರಾಮ~ ಯೋಜನೆ ಜಾರಿಗೊಳಿಸಿದೆ. ಆಯ್ಕೆಯಾದ ಗ್ರಾಮಕ್ಕೆ ಸರಾಸರಿ 1 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. 3,330 ಗ್ರಾಮ ಆಯ್ಕೆಯಾಗಿದ್ದು, ಈ ವರೆಗೆ ರೂ 3 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ಇದೀಗ 5ನೇ ಹಂತದಲ್ಲಿ ಒಂದು ಸಾವಿರ ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಕಾಮಗಾರಿಗಳು ಶೀಘ್ರವೇ ಆರಂಭವಾಗಲಿವೆ ಎಂದು ತಿಳಿಸಿದರು.<br /> <br /> ಒಂದು ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಕನಿಷ್ಠ ರೂ 30 ಲಕ್ಷದಂತೆ ಹಣ ಒದಗಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈವರೆಗೆ ಒಟ್ಟು 50 ಕಿ.ಮೀ. ರಸ್ತೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ, ಸರ್ಕಾರ ಜನರ ಪ್ರೀತಿಗೆ ಪಾತ್ರವಾಗಿದೆ ಎಂದು ವಿಶ್ವಾಸದಿಂದ ಹೇಳಿದರು.<br /> <br /> ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರಕ್ಕೆ ರೂ 3,600 ಕೋಟಿ ಹೊರೆಯಾದರೂ ಸಹ ರೈತರ ಹಿತದೃಷ್ಟಿಯಿಂದ ಸಹಕಾರ ಬ್ಯಾಂಕ್ಗಳಲ್ಲಿ ರೂ 25 ಸಾವಿರದವರೆಗಿನ ಸಾಲ ಮನ್ನಾ ಮಾಡುವ ದಿಟ್ಟ ಕ್ರಮ ಕೈಗೊಂಡಿದೆ. ಎಲ್ಲ ವರ್ಗದವರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.<br /> <br /> ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 4 ರಿಂದ 6 ಸಾವಿರ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ. ಹಿಂದಿನ ಯಾವುದೇ ಸರ್ಕಾರ ಈ ಕೆಲಸ ಮಾಡಿರಲಿಲ್ಲ. ಇದೀಗ, ವಸತಿ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚುವರಿಯಾಗಿ ರೂ 1 ಸಾವಿರ ಕೋಟಿ ಅನುದಾನವನ್ನು ವಸತಿ ಇಲಾಖೆಗೆ ನೀಡಲಾಗಿದೆ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>