<p>ಬೆಂಗಳೂರು: ಬಿಬಿಎಂಪಿಯ ನಗರ ಯೋಜನೆ ವಿಭಾಗದಲ್ಲಿನ ಅವ್ಯವಸ್ಥೆಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾನೂನು ಜಾರಿಗೊಳಿಸುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.<br /> -ಇದು ಮೇಯರ್ ಪಿ. ಶಾರದಮ್ಮ ಅವರ ಖಡಕ್ ನುಡಿ.<br /> <br /> `ಅಕ್ರಮ ನಿರ್ಮಾಣ- ಇಲ್ಲ ನಿಯಂತ್ರಣ~ ಸರಣಿ ಲೇಖನಮಾಲೆ ಹಿನ್ನೆಲೆಯಲ್ಲಿ `ಪ್ರಜಾವಾಣಿ~ಗೆ ಸಂದರ್ಶನ ನೀಡಿದ ಅವರು, `ಅಕ್ರಮ ಕಟ್ಟಡಗಳ ನಿರ್ಮಾಣ ಕುರಿತು ಸಾರ್ವಜನಿಕರು ನೀಡುವ ದೂರನ್ನಾಧರಿಸಿ ಕ್ರಮ ಜರುಗಿಸದ ಅಧಿಕಾರಿಗಳ ಬಗ್ಗೆ ಲಿಖಿತ ದೂರು ಬಂದಲ್ಲಿ ಖಂಡಿತಾ ಕ್ರಮ ಜರುಗಿಸಲಾಗುವುದು~ ಎಂದು ಭರವಸೆ ನೀಡಿದ್ದಾರೆ. ಸಂದರ್ಶನದ ವಿವರ ಇಲ್ಲಿದೆ.<br /> <br /> <strong>ಪ್ರಶ್ನೆ: ಅಕ್ರಮ ಕಟ್ಟಡಗಳ ಬಗ್ಗೆ ಇದುವರೆಗೆ ನಿಮಗೆ ದೂರು ಬಂದಿಲ್ಲವೇ?</strong><br /> <strong>ಮೇ</strong>: ಕಟ್ಟಡ ನಿರ್ಮಾಣ ಉಪವಿಧಿಗಳನ್ನು ಉಲ್ಲಂಘಿಸಿ ಅನೇಕ ಕಟ್ಟಡಗಳು ನಗರದಲ್ಲಿ ತಲೆಯೆತ್ತಿರುವ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್ಗಳಿಗೆ ದೂರು ಬಂದಿರಬಹುದು. ಆದರೆ ನನಗೆ ಇದುವರೆಗೆ ಲಿಖಿತವಾಗಿ ಯಾವುದೇ ದೂರು ಬಂದಿಲ್ಲ. ದೂರು ಬಂದಲ್ಲಿ ಖಂಡಿತಾ ಪರಿಶೀಲಿಸುತ್ತೇನೆ.<br /> <br /> <strong>ಪ್ರಶ್ನೆ: ಪಾಲಿಕೆ ಎಂಜಿನಿಯರ್ಗಳ ಬಗ್ಗೆಯೇ ವ್ಯಾಪಕ ದೂರುಗಳಿವೆಯಲ್ಲಾ?</strong><br /> <strong>ಮೇ</strong>: ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುವ ಮಾಲೀಕರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಿದರೆ ಎಂಜಿನಿಯರ್ಗಳು ದೂರು ಸ್ವೀಕರಿಸಲೇಬೇಕು. ಇಲ್ಲದಿದ್ದರೆ ಅಂತಹ ಹುದ್ದೆಗಳ ಅಗತ್ಯವೇನಿದೆ? ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ಅಂತಹ ಅಧಿಕಾರಿಗಳ ಅವಶ್ಯಕತೆಯೂ ಪಾಲಿಕೆಗೆ ಇಲ್ಲ. ಪಾಲಿಕೆಗೆ ಕಳಂಕ ತರುವ ಅಧಿಕಾರಿಗಳ ಸೇವೆ ಬೇಕಿಲ್ಲ.<br /> <br /> <strong>ಪ್ರಶ್ನೆ: ಎರವಲು ಸೇವೆ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಹೆಚ್ಚು ನಡೆಯುತ್ತಿದೆ ಎಂಬ ಸಾರ್ವತ್ರಿಕ ಆರೋಪದ ಬಗ್ಗೆ ಏನು ಹೇಳುತ್ತೀರಿ?</strong><br /> <strong>ಮೇ: </strong>ದಕ್ಷ ಅಧಿಕಾರಿಗಳ ಸೇವೆ ಪಾಲಿಕೆಗೆ ಅಗತ್ಯವಿದೆ. ಆದರೆ, ಭ್ರಷ್ಟ ಅಧಿಕಾರಿಗಳು ಬೇಕಾಗಿಲ್ಲ. ಇಂತಹ ಅಧಿಕಾರಿಗಳನ್ನು ಮಾತೃ ಇಲಾಖೆಗೆ ವಾಪಸು ಕಳಿಸಲು ಆಯುಕ್ತರು ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧ.<br /> <br /> <strong>ಪ್ರಶ್ನೆ: ಕಟ್ಟಡ ನಿರ್ಮಾಣ ಉಪವಿಧಿಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ಬಗ್ಗೆ ಪಾಲಿಕೆಯ ಮುಂದಿನ ಕಾರ್ಯ ಯೋಜನೆ ಏನು? </strong><br /> <strong>ಮೇ:</strong> ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ ದಂಡ ವಿಧಿಸಲು ಈಗಾಗಲೇ ಸಂಬಂಧಪಟ್ಟ ಎಂಜಿನಿಯರ್ಗಳಿಗೆ ಸೂಚನೆ ನೀಡಲಾಗಿದೆ. ಆ ಮೂಲಕ ತೆರಿಗೆ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ.<br /> <br /> <strong>ಪ್ರಶ್ನೆ: ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾದಂತಹ ಪ್ರದೇಶಗಳಲ್ಲಿ ಯದ್ವಾತದ್ವ ಅಕ್ರಮ ಕಟ್ಟಡಗಳು ತಲೆಯೆತ್ತುತ್ತಿವೆಯಲ್ಲಾ?<br /> ಮೇ: </strong>ಇದುವರೆಗೆ ಈ ಪ್ರದೇಶ ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿದ್ದವು. ಹೀಗಾಗಿ, ಬಿಬಿಎಂಪಿಯ ನಿಯಂತ್ರಣ ಇರಲಿಲ್ಲ. ಇನ್ನು ಮುಂದೆ ಗಮನಹರಿಸುತ್ತೇವೆ.<br /> <br /> <strong>ಪ್ರಶ್ನೆ: ರೆವಿನ್ಯೂ ನಿವೇಶನಗಳಲ್ಲಿ ಮನೆ ಕಟ್ಟಿದವರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ?</strong><br /> <strong>ಮೇ:</strong> ಇಂತಹ ಕಟ್ಟಡಗಳನ್ನು ಸಕ್ರಮಗೊಳಿಸಲು ಸರ್ಕಾರದ ಅಕ್ರಮ-ಸಕ್ರಮ ಯೋಜನೆ ಜಾರಿಗೆ ಕಾಯುತ್ತಿದ್ದೇವೆ. ಸರ್ಕಾರದ ತೀರ್ಮಾನವೇ ಅಂತಿಮ. ಮಾನವೀಯತೆ ದೃಷ್ಟಿಯಿಂದ ಯಾವುದೇ ಅಕ್ರಮ ಕಟ್ಟಡಗಳನ್ನು ಒಡೆಯಲು ಪಾಲಿಕೆ ಮುಂದಾಗುವುದಿಲ್ಲ.<br /> <br /> <strong>ಪ್ರಶ್ನೆ: ಅಕ್ರಮ- ಸಕ್ರಮ ಯೋಜನೆ ಶೀಘ್ರ ಜಾರಿಗೆ ಸರ್ಕಾರದ ಮೇಲೆ ಒತ್ತಡ ತರಲು ಪಾಲಿಕೆ ಪ್ರಯತ್ನಿಸಲಿದೆಯೇ?</strong><br /> <strong>ಮೇ:</strong> ಈ ಬಗ್ಗೆ ಸರ್ಕಾರದ ಮಟ್ಟದಲ್ಲಿಯೂ ಚರ್ಚೆ ನಡೆದಿದೆ. ಈಗಾಗಲೇ ನಗರ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆಯಲಾಗಿದೆ. ರಾಜ್ಯಪಾಲರ ಬಳಿ ಕಡತ ಇದೆ. ಈ ಸಂಬಂಧ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಪಾಲಿಕೆ ಬದ್ಧ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಬಿಎಂಪಿಯ ನಗರ ಯೋಜನೆ ವಿಭಾಗದಲ್ಲಿನ ಅವ್ಯವಸ್ಥೆಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾನೂನು ಜಾರಿಗೊಳಿಸುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.<br /> -ಇದು ಮೇಯರ್ ಪಿ. ಶಾರದಮ್ಮ ಅವರ ಖಡಕ್ ನುಡಿ.<br /> <br /> `ಅಕ್ರಮ ನಿರ್ಮಾಣ- ಇಲ್ಲ ನಿಯಂತ್ರಣ~ ಸರಣಿ ಲೇಖನಮಾಲೆ ಹಿನ್ನೆಲೆಯಲ್ಲಿ `ಪ್ರಜಾವಾಣಿ~ಗೆ ಸಂದರ್ಶನ ನೀಡಿದ ಅವರು, `ಅಕ್ರಮ ಕಟ್ಟಡಗಳ ನಿರ್ಮಾಣ ಕುರಿತು ಸಾರ್ವಜನಿಕರು ನೀಡುವ ದೂರನ್ನಾಧರಿಸಿ ಕ್ರಮ ಜರುಗಿಸದ ಅಧಿಕಾರಿಗಳ ಬಗ್ಗೆ ಲಿಖಿತ ದೂರು ಬಂದಲ್ಲಿ ಖಂಡಿತಾ ಕ್ರಮ ಜರುಗಿಸಲಾಗುವುದು~ ಎಂದು ಭರವಸೆ ನೀಡಿದ್ದಾರೆ. ಸಂದರ್ಶನದ ವಿವರ ಇಲ್ಲಿದೆ.<br /> <br /> <strong>ಪ್ರಶ್ನೆ: ಅಕ್ರಮ ಕಟ್ಟಡಗಳ ಬಗ್ಗೆ ಇದುವರೆಗೆ ನಿಮಗೆ ದೂರು ಬಂದಿಲ್ಲವೇ?</strong><br /> <strong>ಮೇ</strong>: ಕಟ್ಟಡ ನಿರ್ಮಾಣ ಉಪವಿಧಿಗಳನ್ನು ಉಲ್ಲಂಘಿಸಿ ಅನೇಕ ಕಟ್ಟಡಗಳು ನಗರದಲ್ಲಿ ತಲೆಯೆತ್ತಿರುವ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್ಗಳಿಗೆ ದೂರು ಬಂದಿರಬಹುದು. ಆದರೆ ನನಗೆ ಇದುವರೆಗೆ ಲಿಖಿತವಾಗಿ ಯಾವುದೇ ದೂರು ಬಂದಿಲ್ಲ. ದೂರು ಬಂದಲ್ಲಿ ಖಂಡಿತಾ ಪರಿಶೀಲಿಸುತ್ತೇನೆ.<br /> <br /> <strong>ಪ್ರಶ್ನೆ: ಪಾಲಿಕೆ ಎಂಜಿನಿಯರ್ಗಳ ಬಗ್ಗೆಯೇ ವ್ಯಾಪಕ ದೂರುಗಳಿವೆಯಲ್ಲಾ?</strong><br /> <strong>ಮೇ</strong>: ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುವ ಮಾಲೀಕರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಿದರೆ ಎಂಜಿನಿಯರ್ಗಳು ದೂರು ಸ್ವೀಕರಿಸಲೇಬೇಕು. ಇಲ್ಲದಿದ್ದರೆ ಅಂತಹ ಹುದ್ದೆಗಳ ಅಗತ್ಯವೇನಿದೆ? ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ಅಂತಹ ಅಧಿಕಾರಿಗಳ ಅವಶ್ಯಕತೆಯೂ ಪಾಲಿಕೆಗೆ ಇಲ್ಲ. ಪಾಲಿಕೆಗೆ ಕಳಂಕ ತರುವ ಅಧಿಕಾರಿಗಳ ಸೇವೆ ಬೇಕಿಲ್ಲ.<br /> <br /> <strong>ಪ್ರಶ್ನೆ: ಎರವಲು ಸೇವೆ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಹೆಚ್ಚು ನಡೆಯುತ್ತಿದೆ ಎಂಬ ಸಾರ್ವತ್ರಿಕ ಆರೋಪದ ಬಗ್ಗೆ ಏನು ಹೇಳುತ್ತೀರಿ?</strong><br /> <strong>ಮೇ: </strong>ದಕ್ಷ ಅಧಿಕಾರಿಗಳ ಸೇವೆ ಪಾಲಿಕೆಗೆ ಅಗತ್ಯವಿದೆ. ಆದರೆ, ಭ್ರಷ್ಟ ಅಧಿಕಾರಿಗಳು ಬೇಕಾಗಿಲ್ಲ. ಇಂತಹ ಅಧಿಕಾರಿಗಳನ್ನು ಮಾತೃ ಇಲಾಖೆಗೆ ವಾಪಸು ಕಳಿಸಲು ಆಯುಕ್ತರು ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧ.<br /> <br /> <strong>ಪ್ರಶ್ನೆ: ಕಟ್ಟಡ ನಿರ್ಮಾಣ ಉಪವಿಧಿಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ಬಗ್ಗೆ ಪಾಲಿಕೆಯ ಮುಂದಿನ ಕಾರ್ಯ ಯೋಜನೆ ಏನು? </strong><br /> <strong>ಮೇ:</strong> ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ ದಂಡ ವಿಧಿಸಲು ಈಗಾಗಲೇ ಸಂಬಂಧಪಟ್ಟ ಎಂಜಿನಿಯರ್ಗಳಿಗೆ ಸೂಚನೆ ನೀಡಲಾಗಿದೆ. ಆ ಮೂಲಕ ತೆರಿಗೆ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ.<br /> <br /> <strong>ಪ್ರಶ್ನೆ: ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾದಂತಹ ಪ್ರದೇಶಗಳಲ್ಲಿ ಯದ್ವಾತದ್ವ ಅಕ್ರಮ ಕಟ್ಟಡಗಳು ತಲೆಯೆತ್ತುತ್ತಿವೆಯಲ್ಲಾ?<br /> ಮೇ: </strong>ಇದುವರೆಗೆ ಈ ಪ್ರದೇಶ ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿದ್ದವು. ಹೀಗಾಗಿ, ಬಿಬಿಎಂಪಿಯ ನಿಯಂತ್ರಣ ಇರಲಿಲ್ಲ. ಇನ್ನು ಮುಂದೆ ಗಮನಹರಿಸುತ್ತೇವೆ.<br /> <br /> <strong>ಪ್ರಶ್ನೆ: ರೆವಿನ್ಯೂ ನಿವೇಶನಗಳಲ್ಲಿ ಮನೆ ಕಟ್ಟಿದವರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ?</strong><br /> <strong>ಮೇ:</strong> ಇಂತಹ ಕಟ್ಟಡಗಳನ್ನು ಸಕ್ರಮಗೊಳಿಸಲು ಸರ್ಕಾರದ ಅಕ್ರಮ-ಸಕ್ರಮ ಯೋಜನೆ ಜಾರಿಗೆ ಕಾಯುತ್ತಿದ್ದೇವೆ. ಸರ್ಕಾರದ ತೀರ್ಮಾನವೇ ಅಂತಿಮ. ಮಾನವೀಯತೆ ದೃಷ್ಟಿಯಿಂದ ಯಾವುದೇ ಅಕ್ರಮ ಕಟ್ಟಡಗಳನ್ನು ಒಡೆಯಲು ಪಾಲಿಕೆ ಮುಂದಾಗುವುದಿಲ್ಲ.<br /> <br /> <strong>ಪ್ರಶ್ನೆ: ಅಕ್ರಮ- ಸಕ್ರಮ ಯೋಜನೆ ಶೀಘ್ರ ಜಾರಿಗೆ ಸರ್ಕಾರದ ಮೇಲೆ ಒತ್ತಡ ತರಲು ಪಾಲಿಕೆ ಪ್ರಯತ್ನಿಸಲಿದೆಯೇ?</strong><br /> <strong>ಮೇ:</strong> ಈ ಬಗ್ಗೆ ಸರ್ಕಾರದ ಮಟ್ಟದಲ್ಲಿಯೂ ಚರ್ಚೆ ನಡೆದಿದೆ. ಈಗಾಗಲೇ ನಗರ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆಯಲಾಗಿದೆ. ರಾಜ್ಯಪಾಲರ ಬಳಿ ಕಡತ ಇದೆ. ಈ ಸಂಬಂಧ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಪಾಲಿಕೆ ಬದ್ಧ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>