<p><strong>ಬೆಂಗಳೂರು:</strong> `ಕುಮುದ್ವತಿ ನದಿಯನ್ನು ಪುನಶ್ಚೇತನಗೊಳಿಸಿದರೆ ಬೆಂಗಳೂರಿಗೆ ಸಾಕಷ್ಟು ಪ್ರಮಾಣದ ಕುಡಿಯುವ ನೀರನ್ನು ಒದಗಿಸಲು ಸಾಧ್ಯವಿದೆ' ಎಂದು ಆರ್ಟ್ ಆಫ್ ಲಿವಿಂಗ್ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಹೇಳಿದರು.<br /> <br /> ಕುಮುದ್ವತಿ ನದಿಯ ಪುನಶ್ಚೇತನದ ಬಗ್ಗೆ ಅರಿವು ಮೂಡಿಸಲು ಆರ್ಟ್ ಆಫ್ ಲಿವಿಂಗ್ ನಗರದಲ್ಲಿ ಶನಿವಾರ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.<br /> <br /> `ನದಿಗಳನ್ನು ರಕ್ಷಿಸಲು ಜನರು ಮುಂದಾಗಬೇಕು. ನದಿ ಪಾತ್ರಗಳಲ್ಲಿ ನಡೆಯುವ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸಲು ಸರ್ಕಾರ ಮುಂದಾಗಬೇಕು. ನದಿಗಳನ್ನು ಉಳಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಸಬೇಕು' ಎಂದರು.<br /> <br /> `ವಿಜ್ಞಾನಿಗಳ ಹಾಗೂ ತಜ್ಞರ ತಂಡವು ಕಳೆದ ಎರಡು ತಿಂಗಳಿಂದ ನಡೆಸಿದ ಸತತ ಪ್ರಯತ್ನದಿಂದ ಕುಮುದ್ವತಿ ನದಿ ಪಾತ್ರದ ಎಂಟು ಹಳ್ಳಿಗಳ ಕಲ್ಯಾಣಿ ಹಾಗೂ ಬಾವಿಗಳನ್ನು ಪುನಶ್ಚೇತನಗೊಳಿಸಲಾಗಿದೆ' ಎಂದು ಅವರು ತಿಳಿಸಿದರು.<br /> <br /> `ಮೂರು ವರ್ಷಗಳ ಕುಮುದ್ವತಿ ನದಿ ಪುನಶ್ಚೇತನ ಯೋಜನೆಯಡಿ ಕಳೆದ ಮೂರು ತಿಂಗಳಲ್ಲಿ 78 ಚೆಕ್ ಡ್ಯಾಮ್ಗಳು, 5 ಇಂಗು ಗುಂಡಿಗಳು ಹಾಗೂ 17 ಕಲ್ಯಾಣಿಗಳನ್ನು ಅಭಿವೃದ್ಧಿಗೊಳಿಸಲಾಗಿದೆ' ಎಂದು ಯೋಜನೆಯ ಮೇಲ್ವಿಚಾರಕ ನಾಗರಾಜ್ ಗಂಗೊಳ್ಳಿ ಹೇಳಿದರು.<br /> <br /> ಜಾಗೃತಿ ಜಾಥಾ ಮಹಾತ್ಮ ಗಾಂಧಿ ರಸ್ತೆಯಿಂದ ಆರಂಭಗೊಂಡು ಕ್ವೀನ್ಸ್ ರಸ್ತೆ, ಕಬ್ಬನ್ ಉದ್ಯಾನ, ಕೆ.ಆರ್. ವೃತ್ತದ ಮಾರ್ಗವಾಗಿ ಸಾಗಿ ಸ್ವಾತಂತ್ರ್ಯ ಉದ್ಯಾನ ತಲುಪಿತು. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಕುಮುದ್ವತಿ ನದಿಯ ದಡದ ಗ್ರಾಮಗಳ ಜನರು, ಹಾಗೂ ಸ್ವಯಂ ಸೇವಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕುಮುದ್ವತಿ ನದಿಯನ್ನು ಪುನಶ್ಚೇತನಗೊಳಿಸಿದರೆ ಬೆಂಗಳೂರಿಗೆ ಸಾಕಷ್ಟು ಪ್ರಮಾಣದ ಕುಡಿಯುವ ನೀರನ್ನು ಒದಗಿಸಲು ಸಾಧ್ಯವಿದೆ' ಎಂದು ಆರ್ಟ್ ಆಫ್ ಲಿವಿಂಗ್ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಹೇಳಿದರು.<br /> <br /> ಕುಮುದ್ವತಿ ನದಿಯ ಪುನಶ್ಚೇತನದ ಬಗ್ಗೆ ಅರಿವು ಮೂಡಿಸಲು ಆರ್ಟ್ ಆಫ್ ಲಿವಿಂಗ್ ನಗರದಲ್ಲಿ ಶನಿವಾರ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.<br /> <br /> `ನದಿಗಳನ್ನು ರಕ್ಷಿಸಲು ಜನರು ಮುಂದಾಗಬೇಕು. ನದಿ ಪಾತ್ರಗಳಲ್ಲಿ ನಡೆಯುವ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸಲು ಸರ್ಕಾರ ಮುಂದಾಗಬೇಕು. ನದಿಗಳನ್ನು ಉಳಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಸಬೇಕು' ಎಂದರು.<br /> <br /> `ವಿಜ್ಞಾನಿಗಳ ಹಾಗೂ ತಜ್ಞರ ತಂಡವು ಕಳೆದ ಎರಡು ತಿಂಗಳಿಂದ ನಡೆಸಿದ ಸತತ ಪ್ರಯತ್ನದಿಂದ ಕುಮುದ್ವತಿ ನದಿ ಪಾತ್ರದ ಎಂಟು ಹಳ್ಳಿಗಳ ಕಲ್ಯಾಣಿ ಹಾಗೂ ಬಾವಿಗಳನ್ನು ಪುನಶ್ಚೇತನಗೊಳಿಸಲಾಗಿದೆ' ಎಂದು ಅವರು ತಿಳಿಸಿದರು.<br /> <br /> `ಮೂರು ವರ್ಷಗಳ ಕುಮುದ್ವತಿ ನದಿ ಪುನಶ್ಚೇತನ ಯೋಜನೆಯಡಿ ಕಳೆದ ಮೂರು ತಿಂಗಳಲ್ಲಿ 78 ಚೆಕ್ ಡ್ಯಾಮ್ಗಳು, 5 ಇಂಗು ಗುಂಡಿಗಳು ಹಾಗೂ 17 ಕಲ್ಯಾಣಿಗಳನ್ನು ಅಭಿವೃದ್ಧಿಗೊಳಿಸಲಾಗಿದೆ' ಎಂದು ಯೋಜನೆಯ ಮೇಲ್ವಿಚಾರಕ ನಾಗರಾಜ್ ಗಂಗೊಳ್ಳಿ ಹೇಳಿದರು.<br /> <br /> ಜಾಗೃತಿ ಜಾಥಾ ಮಹಾತ್ಮ ಗಾಂಧಿ ರಸ್ತೆಯಿಂದ ಆರಂಭಗೊಂಡು ಕ್ವೀನ್ಸ್ ರಸ್ತೆ, ಕಬ್ಬನ್ ಉದ್ಯಾನ, ಕೆ.ಆರ್. ವೃತ್ತದ ಮಾರ್ಗವಾಗಿ ಸಾಗಿ ಸ್ವಾತಂತ್ರ್ಯ ಉದ್ಯಾನ ತಲುಪಿತು. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಕುಮುದ್ವತಿ ನದಿಯ ದಡದ ಗ್ರಾಮಗಳ ಜನರು, ಹಾಗೂ ಸ್ವಯಂ ಸೇವಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>