<p>ಬೀದರ್: ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆಯತ್ತ ಚಪ್ಪಲಿ ಎಸೆಯಲಾಗಿದೆ. ಆದರೆ, ನನ್ನನ್ನು ಗುರಿ ಮಾಡಿಕೊಂಡು ಚಪ್ಪಲಿ ಎಸೆಯಲಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದರ ಹಿಂದೆ ಷಡ್ಯಂತ್ರ ಇದೆ ಎಂದು ಶಾಸಕ ರಹೀಮ್ಖಾನ್ ಹೇಳಿದರು.<br /> <br /> ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದ ಅರಳಿ ಅವರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿಯೇ ಹಲ್ಲೆ ನಡೆಸಲಾಗಿದೆ ಎಂದು ಆಪಾದಿಸಿದರು.<br /> <br /> ಬೀದರ್ನಲ್ಲಿ ಶಾಂತಿಗೆ ಭಂಗ ಉಂಟು ಮಾಡುವುದಕ್ಕಾಗಿ ಪ್ರತಿ ಕಾಲೋನಿಯಲ್ಲಿ ಜಾತಿಯತೆ, ಗುಂಪುಗಾರಿಕೆ ಉಂಟು ಮಾಡಲಾಗುತ್ತಿದೆ ಎಂದು ಆಪಾದಿಸಿದರು.<br /> <br /> ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿದ್ದಾಗಿ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ತಮ್ಮ ಕಾರ್ಯಕರ್ತರಿಗೇ ಕೆಲಸ ಕೊಡುವಂತೆ ಅಧಿಕಾರಿಗಳಿಗೆ ಕಿರುಕುಳ ಕೊಡುತ್ತಿದ್ದಾರೆ ಎಂದು ಆಪಾದಿಸಿದರು.<br /> <br /> ರಸ್ತೆ ಅಭಿವೃದ್ಧಿಗಾಗಿ 6 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದಾಗಿ ಹೇಳಿಕೆ ನೀಡಿದ್ದಾರೆ. ಯೋಜನೆ ಇಲ್ಲದೇ ಅಷ್ಟು ಹಣ ಮಂಜೂರಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗಾಗಿ 5 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದಾಗಿ ಹೇಳಿಕೊಂಡಿದ್ದಾರೆ. ಇದಕ್ಕಾಗಿ ಎಲ್ಲ ಶಾಸಕರು ಒತ್ತಡ ಹಾಕಿದ್ದಾರೆ ಎಂದು ತಿಳಿಸಿದರು.<br /> <br /> 2008 ರ ವಿಧಾನಸಭೆ ಚುನಾವಣೆ ಪ್ರಾಮಾಣಿಕವಾಗಿ ನಡೆದಿದ್ದರೆ ನಾನೇ ಗೆಲ್ಲುತ್ತಿದೆ. ಚುನಾವಣೆಯಲ್ಲಿ ಗುರುತಿನ ಚೀಟಿ ಖರೀದಿಸದಿದ್ದರೆ ನಾನು ಸೋಲುತಿರಲಿಲ್ಲ ಎಂದು ಹೇಳಿದರು.<br /> <br /> ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತಮ್ಮ ಮೇಲೆ ಹಲ್ಲೆಗೆ ಯತ್ನಿಸಿರುವ ಪ್ರಕರಣಕ್ಕೆ ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಕಾರಣರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ ಅರಳಿ ಆಪಾದಿಸಿದರು.<br /> <br /> ಶಿಷ್ಟಾಚಾರದ ಹಿನ್ನೆಲೆಯಲ್ಲಿ ಸೂರ್ಯಕಾಂತ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಅದನ್ನೇ ಅವಮಾನ ಎಂದು ಭಾವಿಸಿ ಹಲ್ಲೆಗೆ ಪ್ರಚೋಚನೆ ನೀಡಿದ್ದಾರೆ ಎಂದು ಆರೋಪಿಸಿದರು.<br /> <br /> ತಾವು ದೂರು ನೀಡಿದರೂ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿಲ್ಲ. ಸೂರ್ಯಕಾಂತ ಶಾಸಕ ಅಥವಾ ಲೋಕಸಭಾ ಸದಸ್ಯರಲ್ಲ. ಮಾಜಿ ಸಚಿವರ ಪುತ್ರ. ಆದರೆ, ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಎಂದು ಆಪಾದಿಸಿದರು.<br /> <br /> ದೂರಿನಲ್ಲಿ ಸೂರ್ಯಕಾಂತ ಅವರ ಹೆಸರು ಸೇರಿದ್ದರೂ ಒತ್ತಡಕ್ಕೆ ಮಣಿದು ಅವರ ಹೆಸರು ಕೈಬಿಟ್ಟಿದ್ದಾರೆ ಎಂದು ಆಪಾದಿಸಿದರು. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ದೂರು ಕೊಟ್ಟಿದ್ದನ್ನೇ ಎಫ್ಐಆರ್ನಲ್ಲಿ ಸೇರಿಸಬೇಕು. ಆದರೆ, ಸೂರ್ಯಕಾಂತ ಅವರ ಹೆಸರು ಕೈಬಿಟ್ಟಿರುವುದು ಕಾನೂನು ಬಾಹೀರ ಎಂದು ವಿಧಾನ ಪರಿಷತ್ ಸದಸ್ಯ ಕಾಜಿ ಅರ್ಷದ್ ಅಲಿ ಆಪಾದಿಸಿದರು. ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆನಂದ ದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆಯತ್ತ ಚಪ್ಪಲಿ ಎಸೆಯಲಾಗಿದೆ. ಆದರೆ, ನನ್ನನ್ನು ಗುರಿ ಮಾಡಿಕೊಂಡು ಚಪ್ಪಲಿ ಎಸೆಯಲಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದರ ಹಿಂದೆ ಷಡ್ಯಂತ್ರ ಇದೆ ಎಂದು ಶಾಸಕ ರಹೀಮ್ಖಾನ್ ಹೇಳಿದರು.<br /> <br /> ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದ ಅರಳಿ ಅವರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿಯೇ ಹಲ್ಲೆ ನಡೆಸಲಾಗಿದೆ ಎಂದು ಆಪಾದಿಸಿದರು.<br /> <br /> ಬೀದರ್ನಲ್ಲಿ ಶಾಂತಿಗೆ ಭಂಗ ಉಂಟು ಮಾಡುವುದಕ್ಕಾಗಿ ಪ್ರತಿ ಕಾಲೋನಿಯಲ್ಲಿ ಜಾತಿಯತೆ, ಗುಂಪುಗಾರಿಕೆ ಉಂಟು ಮಾಡಲಾಗುತ್ತಿದೆ ಎಂದು ಆಪಾದಿಸಿದರು.<br /> <br /> ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿದ್ದಾಗಿ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ತಮ್ಮ ಕಾರ್ಯಕರ್ತರಿಗೇ ಕೆಲಸ ಕೊಡುವಂತೆ ಅಧಿಕಾರಿಗಳಿಗೆ ಕಿರುಕುಳ ಕೊಡುತ್ತಿದ್ದಾರೆ ಎಂದು ಆಪಾದಿಸಿದರು.<br /> <br /> ರಸ್ತೆ ಅಭಿವೃದ್ಧಿಗಾಗಿ 6 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದಾಗಿ ಹೇಳಿಕೆ ನೀಡಿದ್ದಾರೆ. ಯೋಜನೆ ಇಲ್ಲದೇ ಅಷ್ಟು ಹಣ ಮಂಜೂರಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗಾಗಿ 5 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದಾಗಿ ಹೇಳಿಕೊಂಡಿದ್ದಾರೆ. ಇದಕ್ಕಾಗಿ ಎಲ್ಲ ಶಾಸಕರು ಒತ್ತಡ ಹಾಕಿದ್ದಾರೆ ಎಂದು ತಿಳಿಸಿದರು.<br /> <br /> 2008 ರ ವಿಧಾನಸಭೆ ಚುನಾವಣೆ ಪ್ರಾಮಾಣಿಕವಾಗಿ ನಡೆದಿದ್ದರೆ ನಾನೇ ಗೆಲ್ಲುತ್ತಿದೆ. ಚುನಾವಣೆಯಲ್ಲಿ ಗುರುತಿನ ಚೀಟಿ ಖರೀದಿಸದಿದ್ದರೆ ನಾನು ಸೋಲುತಿರಲಿಲ್ಲ ಎಂದು ಹೇಳಿದರು.<br /> <br /> ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತಮ್ಮ ಮೇಲೆ ಹಲ್ಲೆಗೆ ಯತ್ನಿಸಿರುವ ಪ್ರಕರಣಕ್ಕೆ ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಕಾರಣರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ ಅರಳಿ ಆಪಾದಿಸಿದರು.<br /> <br /> ಶಿಷ್ಟಾಚಾರದ ಹಿನ್ನೆಲೆಯಲ್ಲಿ ಸೂರ್ಯಕಾಂತ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಅದನ್ನೇ ಅವಮಾನ ಎಂದು ಭಾವಿಸಿ ಹಲ್ಲೆಗೆ ಪ್ರಚೋಚನೆ ನೀಡಿದ್ದಾರೆ ಎಂದು ಆರೋಪಿಸಿದರು.<br /> <br /> ತಾವು ದೂರು ನೀಡಿದರೂ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿಲ್ಲ. ಸೂರ್ಯಕಾಂತ ಶಾಸಕ ಅಥವಾ ಲೋಕಸಭಾ ಸದಸ್ಯರಲ್ಲ. ಮಾಜಿ ಸಚಿವರ ಪುತ್ರ. ಆದರೆ, ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಎಂದು ಆಪಾದಿಸಿದರು.<br /> <br /> ದೂರಿನಲ್ಲಿ ಸೂರ್ಯಕಾಂತ ಅವರ ಹೆಸರು ಸೇರಿದ್ದರೂ ಒತ್ತಡಕ್ಕೆ ಮಣಿದು ಅವರ ಹೆಸರು ಕೈಬಿಟ್ಟಿದ್ದಾರೆ ಎಂದು ಆಪಾದಿಸಿದರು. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ದೂರು ಕೊಟ್ಟಿದ್ದನ್ನೇ ಎಫ್ಐಆರ್ನಲ್ಲಿ ಸೇರಿಸಬೇಕು. ಆದರೆ, ಸೂರ್ಯಕಾಂತ ಅವರ ಹೆಸರು ಕೈಬಿಟ್ಟಿರುವುದು ಕಾನೂನು ಬಾಹೀರ ಎಂದು ವಿಧಾನ ಪರಿಷತ್ ಸದಸ್ಯ ಕಾಜಿ ಅರ್ಷದ್ ಅಲಿ ಆಪಾದಿಸಿದರು. ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆನಂದ ದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>