<p>ಬೆಂಗಳೂರು: `ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂಬುದಕ್ಕೆ ಶುಕ್ರವಾರ ನಡೆದ ಮುತ್ತುಲಕ್ಷ್ಮೀ ಅವರ ಪತ್ರಿಕಾಗೋಷ್ಠಿಯೇ ನಿದರ್ಶನ~ ಎಂದು ಶಂಕರ್ ಬಿದರಿ ತಿಳಿಸಿದ್ದಾರೆ.<br /> <br /> ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀ ಅವರು ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಂಕರ್ ಬಿದರಿ ಅವರು, `ವೀರಪ್ಪನ್ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮುತ್ತುಲಕ್ಷ್ಮೀ ಅವರು ಹಲವು ವರ್ಷಗಳಿಂದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅವರು ಈ ಹಿಂದೆ ಎಂದೂ ನನ್ನ ವಿರುದ್ಧ ಆರೋಪ ಮಾಡಿರಲಿಲ್ಲ. ಆದರೆ, ಡಿಜಿ ಹುದ್ದೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಹೊರಬಿದ್ದ ನಂತರ ಮುತ್ತುಲಕ್ಷ್ಮೀ ಅವರನ್ನು ಕರೆದುಕೊಂಡು ಬಂದು ಪತ್ರಿಕಾಗೋಷ್ಠಿ ನಡೆಸಲಾಗುತ್ತಿದ್ದು, ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ನನಗೆ ಗೊತ್ತಿದೆ~ ಎಂದರು. <br /> <br /> `ಕಳೆದ ಐದೂವರೆ ತಿಂಗಳಿನಿಂದ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಮುತ್ತುಲಕ್ಷ್ಮೀ ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ಪತ್ರಿಕಾಗೋಷ್ಠಿ ನಡೆಸುತ್ತಾರೆ ಎಂದು ಐದು ದಿನಗಳ ಹಿಂದೆಯೇ ನನಗೆ ಗೊತ್ತಿತ್ತು. ಮುತ್ತುಲಕ್ಷ್ಮೀ ನನ್ನ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು~ ಎಂದು ಶಂಕರ್ ಬಿದರಿ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂಬುದಕ್ಕೆ ಶುಕ್ರವಾರ ನಡೆದ ಮುತ್ತುಲಕ್ಷ್ಮೀ ಅವರ ಪತ್ರಿಕಾಗೋಷ್ಠಿಯೇ ನಿದರ್ಶನ~ ಎಂದು ಶಂಕರ್ ಬಿದರಿ ತಿಳಿಸಿದ್ದಾರೆ.<br /> <br /> ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀ ಅವರು ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಂಕರ್ ಬಿದರಿ ಅವರು, `ವೀರಪ್ಪನ್ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮುತ್ತುಲಕ್ಷ್ಮೀ ಅವರು ಹಲವು ವರ್ಷಗಳಿಂದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅವರು ಈ ಹಿಂದೆ ಎಂದೂ ನನ್ನ ವಿರುದ್ಧ ಆರೋಪ ಮಾಡಿರಲಿಲ್ಲ. ಆದರೆ, ಡಿಜಿ ಹುದ್ದೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಹೊರಬಿದ್ದ ನಂತರ ಮುತ್ತುಲಕ್ಷ್ಮೀ ಅವರನ್ನು ಕರೆದುಕೊಂಡು ಬಂದು ಪತ್ರಿಕಾಗೋಷ್ಠಿ ನಡೆಸಲಾಗುತ್ತಿದ್ದು, ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ನನಗೆ ಗೊತ್ತಿದೆ~ ಎಂದರು. <br /> <br /> `ಕಳೆದ ಐದೂವರೆ ತಿಂಗಳಿನಿಂದ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಮುತ್ತುಲಕ್ಷ್ಮೀ ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ಪತ್ರಿಕಾಗೋಷ್ಠಿ ನಡೆಸುತ್ತಾರೆ ಎಂದು ಐದು ದಿನಗಳ ಹಿಂದೆಯೇ ನನಗೆ ಗೊತ್ತಿತ್ತು. ಮುತ್ತುಲಕ್ಷ್ಮೀ ನನ್ನ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು~ ಎಂದು ಶಂಕರ್ ಬಿದರಿ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>