<p><strong>ಹಾವೇರಿ: </strong>ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ತಿರುಮಲದೇವರಕೊಪ್ಪದಲ್ಲಿ ನವೆಂಬರ್ನಲ್ಲಿ ನಡೆದ ದಲಿತ ಯುವಕ ಬಸವರಾಜ ಕಡೇಮನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.<br /> <br /> ಆರೋಪಿಗಳಾದ ನಿಂಗನಗೌಡ ಹಾಗೂ ಹುಚ್ಚಪ್ಪ ಎಂಬುವವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.<br /> ದೋಷಾರೋಪ ಪಟ್ಟಿಯಲ್ಲಿ ಅಕ್ರಮ ಸಂಬಂಧ ಕೊಲೆಗೆ ಕಾರಣ ಎಂದು ತಿಳಿಸಲಾಗಿದೆ. <br /> <br /> ಆದರೆ, ಇದರಿಂದ ಬೇಸರಗೊಂಡಿರುವ ಯುವಕನ ತಂದೆ ಭರಮಪ್ಪ, ತಾಯಿ ಮಂಜವ್ವ ಕಡೇಮನಿ ಹಾಗೂ ವಿವಿಧ ಸಂಘಟನೆಗಳು ಮುಖಂಡರು ಈ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡಬೇಕೆಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಅವರಿಗೆ ಪತ್ರ ಬರೆದಿದ್ದಾರೆ.<br /> <br /> ತಿರುಮಲದೇವರಕೊಪ್ಪದ ಬಸನಗೌಡ ನಿಂಗನಗೌಡ ಗೌಡರ ನಿರ್ಮಿಸಿದ ನೂತನ ಮನೆಯ ವಾಸ್ತು ದೋಷ ನಿವಾರಣೆಗೆ ಬಸವರಾಜನನ್ನು ಬಲಿ ಕೊಡಲಾಗಿದೆ ಎಂದು ಆರೋಪಿಸಿ, ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ತಿರುಮಲದೇವರಕೊಪ್ಪದಲ್ಲಿ ನವೆಂಬರ್ನಲ್ಲಿ ನಡೆದ ದಲಿತ ಯುವಕ ಬಸವರಾಜ ಕಡೇಮನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.<br /> <br /> ಆರೋಪಿಗಳಾದ ನಿಂಗನಗೌಡ ಹಾಗೂ ಹುಚ್ಚಪ್ಪ ಎಂಬುವವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.<br /> ದೋಷಾರೋಪ ಪಟ್ಟಿಯಲ್ಲಿ ಅಕ್ರಮ ಸಂಬಂಧ ಕೊಲೆಗೆ ಕಾರಣ ಎಂದು ತಿಳಿಸಲಾಗಿದೆ. <br /> <br /> ಆದರೆ, ಇದರಿಂದ ಬೇಸರಗೊಂಡಿರುವ ಯುವಕನ ತಂದೆ ಭರಮಪ್ಪ, ತಾಯಿ ಮಂಜವ್ವ ಕಡೇಮನಿ ಹಾಗೂ ವಿವಿಧ ಸಂಘಟನೆಗಳು ಮುಖಂಡರು ಈ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡಬೇಕೆಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಅವರಿಗೆ ಪತ್ರ ಬರೆದಿದ್ದಾರೆ.<br /> <br /> ತಿರುಮಲದೇವರಕೊಪ್ಪದ ಬಸನಗೌಡ ನಿಂಗನಗೌಡ ಗೌಡರ ನಿರ್ಮಿಸಿದ ನೂತನ ಮನೆಯ ವಾಸ್ತು ದೋಷ ನಿವಾರಣೆಗೆ ಬಸವರಾಜನನ್ನು ಬಲಿ ಕೊಡಲಾಗಿದೆ ಎಂದು ಆರೋಪಿಸಿ, ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>