<p>ನವದೆಹಲಿ (ಐಎಎನ್ಎಸ್): 2010ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಕ್ರೀಡಾಕೂಟ ಸಂಘಟನಾ ಸಮಿತಿಯ ಮಾಜಿ ಮುಖ್ಯಸ್ಥ, ಸಂಸತ್ ಸದಸ್ಯ ಸುರೇಶ ಕಲ್ಮಾಡಿ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತು.<br /> <br /> ಕಲ್ಮಾಡಿ ಅವರ ಸಹಾಯಕ ವಿ.ಕೆ. ವರ್ಮಾ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ರೂಪಾಯಿಗಳ ವೈಯಕ್ತಿಕ ಖಾತರಿ ಮತ್ತು ಅಷ್ಟೇ ಮೊತ್ತದ ಭದ್ರತಾ ಖಾತರಿ ಆಧಾರದಲ್ಲಿ ಜಾಮೀನು ನೀಡಲು ನ್ಯಾಯಾಲಯ ಅನುಮತಿ ನೀಡಿತು.<br /> <br /> ಕಲ್ಮಾಡಿ ಅವರನ್ನು ಕಳೆದ ವರ್ಷ ಏಪ್ರಿಲ್ 26ರಂದು 141 ಕೋಟಿ ರೂಪಾಯಿಗಳ ಭಾರಿ ವೆಚ್ಚದಲ್ಲಿ ಸ್ವಿಸ್ ಟೈಮ್ಸ್ ಒಮೆಗಾ ಸಂಸ್ಥೆಗೆ ಟೈಮಿಂಗ್ ಸ್ಕೋರಿಂಗ್ ರಿಸಲ್ಟ್ ಸಿಸ್ಟಮ್ ಅಳವಡಿಕೆ ಗುತ್ತಿಗೆ ನೀಡಿಕೆಯಲ್ಲಿ ವಹಿಸಿದ ಪಾತ್ರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಈ ಗುತ್ತಿಗೆಯಿಂದಾಗಿ ಸರ್ಕಾರಿ ಬೊಕ್ಕಸಕ್ಕೆ 95 ಕೋಟಿ ರೂಪಾಯಿಗಳಿಗೂ ಹೆಚ್ಚಿನ ನಷ್ಟವಾಗಿದೆ ಎಂದು ಆಪಾದಿಸಲಾಗಿತ್ತು.<br /> <br /> ಕೇಂದ್ರೀಯ ತನಿಖಾ ದಳವು (ಸಿಬಿಐ) ಕಲ್ಮಾಡಿ ಮತ್ತು ಅವರ ಸಹಾಯಕ ವರ್ಮಾ ಅವರಿಗೆ ಜಾಮೀನು ಮಂಜೂರಿಗೆ ತೀವ್ರ ವಿರೋಧ ವ್ಯಕ್ತ ಪಡಿಸಿತ್ತು.<br /> <br /> 2ಜಿ ತರಂಗಾಂತರ ಪ್ರಕರಣದಲ್ಲಿ ~ಜಾಮೀನು ನಿಯಮವಾಗಬೇಕು ಮತ್ತು ಸೆರೆವಾಸ ಅಪವಾದವಾಗಬೇಕು~ ಎಂಬುದಾಗಿ ಸುಪ್ರೀಂಕೋರ್ಟ್ ವಿಶ್ಲೇಷಿಸಿದ್ದನ್ನು ಆಧರಿಸಿ ಕಲ್ಮಾಡಿ ಮತ್ತು ವರ್ಮಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.<br /> <br /> ವಿಚಾರಣಾ ನ್ಯಾಯಾಲಯವು ಕಳೆದ ವರ್ಷ ಜೂನ್ ತಿಂಗಳಲ್ಲಿ ಕಲ್ಮಾಡಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಆ ಬಳಿಕ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.<br /> <br /> ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಧಿಗಳ ಅಡಿಯಲ್ಲಿ ಆಪಾದಿತರು ಮತ್ತು ಎರಡು ಕಂಪೆನಿಗಳ ವಿರುದ್ಧ ವಂಚನೆ, ಕ್ರಿಮಿನಲ್ ಒಳಸಂಚು, ಫೋರ್ಜರಿ ಆರೋಪಗಳಿಗಾಗಿ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): 2010ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಕ್ರೀಡಾಕೂಟ ಸಂಘಟನಾ ಸಮಿತಿಯ ಮಾಜಿ ಮುಖ್ಯಸ್ಥ, ಸಂಸತ್ ಸದಸ್ಯ ಸುರೇಶ ಕಲ್ಮಾಡಿ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತು.<br /> <br /> ಕಲ್ಮಾಡಿ ಅವರ ಸಹಾಯಕ ವಿ.ಕೆ. ವರ್ಮಾ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ರೂಪಾಯಿಗಳ ವೈಯಕ್ತಿಕ ಖಾತರಿ ಮತ್ತು ಅಷ್ಟೇ ಮೊತ್ತದ ಭದ್ರತಾ ಖಾತರಿ ಆಧಾರದಲ್ಲಿ ಜಾಮೀನು ನೀಡಲು ನ್ಯಾಯಾಲಯ ಅನುಮತಿ ನೀಡಿತು.<br /> <br /> ಕಲ್ಮಾಡಿ ಅವರನ್ನು ಕಳೆದ ವರ್ಷ ಏಪ್ರಿಲ್ 26ರಂದು 141 ಕೋಟಿ ರೂಪಾಯಿಗಳ ಭಾರಿ ವೆಚ್ಚದಲ್ಲಿ ಸ್ವಿಸ್ ಟೈಮ್ಸ್ ಒಮೆಗಾ ಸಂಸ್ಥೆಗೆ ಟೈಮಿಂಗ್ ಸ್ಕೋರಿಂಗ್ ರಿಸಲ್ಟ್ ಸಿಸ್ಟಮ್ ಅಳವಡಿಕೆ ಗುತ್ತಿಗೆ ನೀಡಿಕೆಯಲ್ಲಿ ವಹಿಸಿದ ಪಾತ್ರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಈ ಗುತ್ತಿಗೆಯಿಂದಾಗಿ ಸರ್ಕಾರಿ ಬೊಕ್ಕಸಕ್ಕೆ 95 ಕೋಟಿ ರೂಪಾಯಿಗಳಿಗೂ ಹೆಚ್ಚಿನ ನಷ್ಟವಾಗಿದೆ ಎಂದು ಆಪಾದಿಸಲಾಗಿತ್ತು.<br /> <br /> ಕೇಂದ್ರೀಯ ತನಿಖಾ ದಳವು (ಸಿಬಿಐ) ಕಲ್ಮಾಡಿ ಮತ್ತು ಅವರ ಸಹಾಯಕ ವರ್ಮಾ ಅವರಿಗೆ ಜಾಮೀನು ಮಂಜೂರಿಗೆ ತೀವ್ರ ವಿರೋಧ ವ್ಯಕ್ತ ಪಡಿಸಿತ್ತು.<br /> <br /> 2ಜಿ ತರಂಗಾಂತರ ಪ್ರಕರಣದಲ್ಲಿ ~ಜಾಮೀನು ನಿಯಮವಾಗಬೇಕು ಮತ್ತು ಸೆರೆವಾಸ ಅಪವಾದವಾಗಬೇಕು~ ಎಂಬುದಾಗಿ ಸುಪ್ರೀಂಕೋರ್ಟ್ ವಿಶ್ಲೇಷಿಸಿದ್ದನ್ನು ಆಧರಿಸಿ ಕಲ್ಮಾಡಿ ಮತ್ತು ವರ್ಮಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.<br /> <br /> ವಿಚಾರಣಾ ನ್ಯಾಯಾಲಯವು ಕಳೆದ ವರ್ಷ ಜೂನ್ ತಿಂಗಳಲ್ಲಿ ಕಲ್ಮಾಡಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಆ ಬಳಿಕ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.<br /> <br /> ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಧಿಗಳ ಅಡಿಯಲ್ಲಿ ಆಪಾದಿತರು ಮತ್ತು ಎರಡು ಕಂಪೆನಿಗಳ ವಿರುದ್ಧ ವಂಚನೆ, ಕ್ರಿಮಿನಲ್ ಒಳಸಂಚು, ಫೋರ್ಜರಿ ಆರೋಪಗಳಿಗಾಗಿ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>