<p><strong>ಮಂಗಳೂರು:</strong> ನಗರ ಹೊರವಲಯದ ಪಡೀಲ್ ಹೋಂ ಸ್ಟೇ ದಾಳಿ ಪ್ರಕರಣ ಸಂಬಂಧ ಬಂಧನದಲ್ಲಿರುವ ಪತ್ರಕರ್ತ ನವೀನ್ ಸೂರಿಂಜೆ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಗರದ ಮೂರನೇ ಜೆಎಂಎಫ್ ನ್ಯಾಯಾಲಯ ಮುಂದೂಡಿದೆ. <br /> <br /> ಬುಧವಾರ ರಾತ್ರಿ ಬಂಧನಕ್ಕೊಳಗಾದ ಹೋಂ ಸ್ಟೇ ದಾಳಿ ಆರೋಪಿ ನವೀನ್ ಅವರಿಗೆ ಜಾಮೀನು ನೀಡಬೇಕು ಎಂದು ಅವರ ವಕೀಲ ಸತೀಶ್ ಬಂಟ್ವಾಳ್ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. <br /> <br /> ಶುಕ್ರವಾರ ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯವು ಆರೋಪಿ ಪರ ವಾದವನ್ನು ಆಲಿಸಿತು. ಸರ್ಕಾರಿ ವಕೀಲರು ಜಾಮೀನು ನೀಡದಂತೆ ಆಕ್ಷೇಪ ಸಲ್ಲಿಸಿದ್ದು, ಅವರ ವಾದ ಆಲಿಸುವುದು ಬಾಕಿ ಇದೆ. ಹಾಗಾಗಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. `<br /> <br /> ಇನ್ನು ಮೂರು ದಿನಗಳ ಕಾಲ ನ್ಯಾಯಾಲಯದ ಕಲಾಪ ನಡೆಯುವುದಿಲ್ಲ. ಇದೇ 13ರಂದು ಅರ್ಜಿಯ ವಿಚಾರಣೆ ನಡೆಯಲಿದೆ~ ಎಂದು ಆರೋಪಿ ಪರ ವಕೀಲ ಸತೀಶ್ ಬಂಟ್ವಾಳ್ `ಪ್ರಜಾವಾಣಿ~ಗೆ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರ ಹೊರವಲಯದ ಪಡೀಲ್ ಹೋಂ ಸ್ಟೇ ದಾಳಿ ಪ್ರಕರಣ ಸಂಬಂಧ ಬಂಧನದಲ್ಲಿರುವ ಪತ್ರಕರ್ತ ನವೀನ್ ಸೂರಿಂಜೆ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಗರದ ಮೂರನೇ ಜೆಎಂಎಫ್ ನ್ಯಾಯಾಲಯ ಮುಂದೂಡಿದೆ. <br /> <br /> ಬುಧವಾರ ರಾತ್ರಿ ಬಂಧನಕ್ಕೊಳಗಾದ ಹೋಂ ಸ್ಟೇ ದಾಳಿ ಆರೋಪಿ ನವೀನ್ ಅವರಿಗೆ ಜಾಮೀನು ನೀಡಬೇಕು ಎಂದು ಅವರ ವಕೀಲ ಸತೀಶ್ ಬಂಟ್ವಾಳ್ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. <br /> <br /> ಶುಕ್ರವಾರ ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯವು ಆರೋಪಿ ಪರ ವಾದವನ್ನು ಆಲಿಸಿತು. ಸರ್ಕಾರಿ ವಕೀಲರು ಜಾಮೀನು ನೀಡದಂತೆ ಆಕ್ಷೇಪ ಸಲ್ಲಿಸಿದ್ದು, ಅವರ ವಾದ ಆಲಿಸುವುದು ಬಾಕಿ ಇದೆ. ಹಾಗಾಗಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. `<br /> <br /> ಇನ್ನು ಮೂರು ದಿನಗಳ ಕಾಲ ನ್ಯಾಯಾಲಯದ ಕಲಾಪ ನಡೆಯುವುದಿಲ್ಲ. ಇದೇ 13ರಂದು ಅರ್ಜಿಯ ವಿಚಾರಣೆ ನಡೆಯಲಿದೆ~ ಎಂದು ಆರೋಪಿ ಪರ ವಕೀಲ ಸತೀಶ್ ಬಂಟ್ವಾಳ್ `ಪ್ರಜಾವಾಣಿ~ಗೆ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>