<p><strong>ನವದೆಹಲಿ(ಪಿಟಿಐ):</strong> ಬ್ಯಾಂಕ್ನ ನಷ್ಟಕ್ಕೆ ಕಾರಣವಾಗುತ್ತಿರುವ ಶಾಖೆಗಳನ್ನು ಮುಚ್ಚುವಂತೆಯೂ, ಸಿಬ್ಬಂದಿ ಸಂಖ್ಯೆಯಲ್ಲಿ ಸಹ ಕಡಿತ ಮಾಡುವಂತೆಯೂ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಕೇಂದ್ರ ಸರ್ಕಾರ ಸದ್ಯದಲ್ಲಿಯೇ ನಿರ್ದೇಶನ ನೀಡುವ ಸಾಧ್ಯತೆ ದಟ್ಟವಾಗಿದೆ.<br /> <br /> ಅನುತ್ಪಾದಕ ಆಸ್ತಿ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗಿರುವ ಶಾಖೆಗಳನ್ನು ಮುಚ್ಚುವ ಮೂಲಕ ಬ್ಯಾಂಕ್ನ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಯಲ್ಲಿಡಲು ಈ ಕ್ರಮ ಅಗತ್ಯ. ಅಲ್ಲದೆ, ಸಿಬ್ಬಂದಿ ಸಂಖ್ಯೆ ಬ್ಯಾಂಕ್ಗೆ ಹೊರೆಯಾಗುವ ಪ್ರಮಾಣದಲ್ಲಿದ್ದರೆ ಕಡಿತ ಮಾಡುವುದೂ ಅನಿವಾರ್ಯವಾಗಲಿದೆ.<br /> <br /> ಈ ಬಗ್ಗೆ ನಿರಂತರ ಮಾತುಕತೆ ನಡೆದಿದೆ ಎಂದು ಕೇಂದ್ರ ಹಣಕಾಸು ಸೇವೆಗಳ ಕಾರ್ಯದರ್ಶಿ ಡಿ.ಕೆ.ಮಿತ್ತಲ್ ಹೇಳಿದರು. ಸಿಐಐ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ನಂತರ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ಬ್ಯಾಂಕ್ಗಳಿಗಷ್ಟೇ ಅಲ್ಲ, ವಿಮಾ ಕಂಪನಿಗಳೂ ಈ ಕ್ರಮ ಅನಿವಾರ್ಯವಾಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ):</strong> ಬ್ಯಾಂಕ್ನ ನಷ್ಟಕ್ಕೆ ಕಾರಣವಾಗುತ್ತಿರುವ ಶಾಖೆಗಳನ್ನು ಮುಚ್ಚುವಂತೆಯೂ, ಸಿಬ್ಬಂದಿ ಸಂಖ್ಯೆಯಲ್ಲಿ ಸಹ ಕಡಿತ ಮಾಡುವಂತೆಯೂ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಕೇಂದ್ರ ಸರ್ಕಾರ ಸದ್ಯದಲ್ಲಿಯೇ ನಿರ್ದೇಶನ ನೀಡುವ ಸಾಧ್ಯತೆ ದಟ್ಟವಾಗಿದೆ.<br /> <br /> ಅನುತ್ಪಾದಕ ಆಸ್ತಿ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗಿರುವ ಶಾಖೆಗಳನ್ನು ಮುಚ್ಚುವ ಮೂಲಕ ಬ್ಯಾಂಕ್ನ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಯಲ್ಲಿಡಲು ಈ ಕ್ರಮ ಅಗತ್ಯ. ಅಲ್ಲದೆ, ಸಿಬ್ಬಂದಿ ಸಂಖ್ಯೆ ಬ್ಯಾಂಕ್ಗೆ ಹೊರೆಯಾಗುವ ಪ್ರಮಾಣದಲ್ಲಿದ್ದರೆ ಕಡಿತ ಮಾಡುವುದೂ ಅನಿವಾರ್ಯವಾಗಲಿದೆ.<br /> <br /> ಈ ಬಗ್ಗೆ ನಿರಂತರ ಮಾತುಕತೆ ನಡೆದಿದೆ ಎಂದು ಕೇಂದ್ರ ಹಣಕಾಸು ಸೇವೆಗಳ ಕಾರ್ಯದರ್ಶಿ ಡಿ.ಕೆ.ಮಿತ್ತಲ್ ಹೇಳಿದರು. ಸಿಐಐ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ನಂತರ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ಬ್ಯಾಂಕ್ಗಳಿಗಷ್ಟೇ ಅಲ್ಲ, ವಿಮಾ ಕಂಪನಿಗಳೂ ಈ ಕ್ರಮ ಅನಿವಾರ್ಯವಾಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>