<p><strong>ಚಿಕ್ಕಮಗಳೂರು: </strong>ಸಕಾಲ ಸೇವೆಯಿಂದ ಜನರಿಗೆ ತ್ವರಿತ ಸೇವೆ ಸಿಗಲಿದೆ. ನಾಗರಿಕರ ಕೆಲಸಗಳಿಗೆ ವಿಳಂಬವಾಗಲು ಇಲ್ಲಿ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಿ.ಕೆ.ರಂಗಸ್ವಾಮಿ ಹೇಳಿದರು.<br /> <br /> ನಗರದಲ್ಲಿ ಸೋಮವಾರ `ಕರ್ನಾಟಕ ನಾಗರಿಕ ಸೇವೆಗಳ ಖಾತರಿ~ ವ್ಯವಸ್ಥೆ `ಸಕಾಲ~ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಕಾಲ ಇಂದಿನಿಂದ ಜಾರಿಗೊಂಡಿದೆ. ಜನಸಾಮಾನ್ಯರಿಗೆ ಅಗತ್ಯವಿರುವ ವಿವಿಧ ಇಲಾಖೆಗಳ ಹಲವು ಸೇವೆಗಳನ್ನು ಇದರ ವ್ಯಾಪ್ತಿಗೆ ತರಲಾಗಿದೆ. ನಾಗರಿಕರಿಗೆ ತ್ವರಿತ ಸೇವೆ ಲಭ್ಯವಾಗಲಿದೆ. ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಂಗೇಗೌಡ ಮಾತನಾಡಿ, ಸಕಾಲ ಯೋಜನೆಯು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ. ಆಡಳಿತದಲ್ಲಿ ಪಾರದರ್ಶಕತೆ ತರುವುದು ಇದರ ಉದ್ದೇಶ. ಇದಕ್ಕೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.<br /> <br /> ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಾರ್ಮಿಕ ಇಲಾಖೆಗೆ ಸಂಬಂಧಪಟ್ಟ ಅರ್ಜಿಗಳನ್ನು ಪ್ರಾಯೋಗಿಕವಾಗಿ ಸಾರ್ವಜನಿಕರಿಂದ ಸ್ವೀಕರಿಸಿ, ಸ್ವೀಕೃತಿ ನೀಡಲಾಯಿತು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಯಾಲಕ್ಕಿಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಗಟ್ರೂಡ್ ವೇಗಸ್ ಇನ್ನಿತರರು ಇದ್ದರು.<br /> <br /> `<strong>ನಾಗರಿಕರಿಗೆ ಕಾಲಾವಧಿಯಲ್ಲಿ ಸೇವೆ~<br /> </strong> <strong>ತರೀಕೆರೆ:</strong> ನಾಗರಿಕ ಸನ್ನದು ಅನ್ವಯ ಪುರಸಭೆಯ ಕಾರ್ಯವನ್ನು ನಿರ್ವಹಿಸಲು ನಿರ್ಧರಿಸಿದ್ದು, ಈ ಸಂಬಂಧ ಪೌರಸೇವೆಯಲ್ಲಿ ಬರುವ ಜನನ-ಮರಣ ದೃಢೀಕರಣ ಪತ್ರ, ವ್ಯಾಪಾರ ವಹಿವಾಟು ಪರವಾನಗಿ ಪತ್ರ, ಕಟ್ಟಡ ನಿರ್ಮಾಣ ಪರವಾನಗಿ ಪತ್ರ, ದಾಖಲೆಗಳ ಖಾತಾ ನಕಲು ಮತ್ತು ನೀರು ಸರಬರಾಜು ಹೊಸ ಸಂಪರ್ಕ ಕಲ್ಪಿಸುವ ಕಾರ್ಯಗಳಿಗೆ ಸಕಾಲದ ಕಾಲಾವಧಿಯಲ್ಲಿ ನೀಡಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿ ಕೆ.ಎಂ.ಸತ್ಯನಾರಾಯಣ್ ತಿಳಿಸಿದರು.<br /> <br /> ಪುರಸಭೆಯ ಆವರಣದಲ್ಲಿ ಸೋಮವಾರ ಸಾರ್ವಜನಿಕರ ಮಾಹಿತಿಗಾಗಿ ನಾಗರಿಕ ಸೇವಾ ಯೋಜನೆಯ ಮಾಹಿತಿಯನ್ನೊಳಗೊಂಡ ಎರಡು ಪ್ಲೆಕ್ಸ್ ಬ್ಯಾನರ್ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> ವ್ಯವಸ್ಥಾಪಕ ನಾಗರಾಜ್, ಸಕಾಲ ಯೋಜನೆಯ ನಿರ್ವಾಹಕ ಎಚ್.ಪ್ರಶಾಂತ್, ಎಸ್ಜೆಎಸ್ಆರ್ವೈನ ನಿರ್ವಾಹಕಿ ಅನುಪಮ, ಸ್ಥಾಯಿ ಸಮಿತಿ ಅಧ್ಯಕ್ಷ ಮಿಲ್ಟ್ರಿ ಶ್ರೀನಿವಾಸ್, ಮಾಜಿ ಪುರಸಭಾಧ್ಯರಾದ ಟಿ.ಜೆ.ಗೋಪಿಕುಮಾರ್, ಟಿ.ಆರ್.ಬಸವರಾಜ್ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯ ರೇವಣ್ಣ ಮತ್ತು ಇತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಸಕಾಲ ಸೇವೆಯಿಂದ ಜನರಿಗೆ ತ್ವರಿತ ಸೇವೆ ಸಿಗಲಿದೆ. ನಾಗರಿಕರ ಕೆಲಸಗಳಿಗೆ ವಿಳಂಬವಾಗಲು ಇಲ್ಲಿ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಿ.ಕೆ.ರಂಗಸ್ವಾಮಿ ಹೇಳಿದರು.<br /> <br /> ನಗರದಲ್ಲಿ ಸೋಮವಾರ `ಕರ್ನಾಟಕ ನಾಗರಿಕ ಸೇವೆಗಳ ಖಾತರಿ~ ವ್ಯವಸ್ಥೆ `ಸಕಾಲ~ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಕಾಲ ಇಂದಿನಿಂದ ಜಾರಿಗೊಂಡಿದೆ. ಜನಸಾಮಾನ್ಯರಿಗೆ ಅಗತ್ಯವಿರುವ ವಿವಿಧ ಇಲಾಖೆಗಳ ಹಲವು ಸೇವೆಗಳನ್ನು ಇದರ ವ್ಯಾಪ್ತಿಗೆ ತರಲಾಗಿದೆ. ನಾಗರಿಕರಿಗೆ ತ್ವರಿತ ಸೇವೆ ಲಭ್ಯವಾಗಲಿದೆ. ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಂಗೇಗೌಡ ಮಾತನಾಡಿ, ಸಕಾಲ ಯೋಜನೆಯು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ. ಆಡಳಿತದಲ್ಲಿ ಪಾರದರ್ಶಕತೆ ತರುವುದು ಇದರ ಉದ್ದೇಶ. ಇದಕ್ಕೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.<br /> <br /> ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಾರ್ಮಿಕ ಇಲಾಖೆಗೆ ಸಂಬಂಧಪಟ್ಟ ಅರ್ಜಿಗಳನ್ನು ಪ್ರಾಯೋಗಿಕವಾಗಿ ಸಾರ್ವಜನಿಕರಿಂದ ಸ್ವೀಕರಿಸಿ, ಸ್ವೀಕೃತಿ ನೀಡಲಾಯಿತು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಯಾಲಕ್ಕಿಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಗಟ್ರೂಡ್ ವೇಗಸ್ ಇನ್ನಿತರರು ಇದ್ದರು.<br /> <br /> `<strong>ನಾಗರಿಕರಿಗೆ ಕಾಲಾವಧಿಯಲ್ಲಿ ಸೇವೆ~<br /> </strong> <strong>ತರೀಕೆರೆ:</strong> ನಾಗರಿಕ ಸನ್ನದು ಅನ್ವಯ ಪುರಸಭೆಯ ಕಾರ್ಯವನ್ನು ನಿರ್ವಹಿಸಲು ನಿರ್ಧರಿಸಿದ್ದು, ಈ ಸಂಬಂಧ ಪೌರಸೇವೆಯಲ್ಲಿ ಬರುವ ಜನನ-ಮರಣ ದೃಢೀಕರಣ ಪತ್ರ, ವ್ಯಾಪಾರ ವಹಿವಾಟು ಪರವಾನಗಿ ಪತ್ರ, ಕಟ್ಟಡ ನಿರ್ಮಾಣ ಪರವಾನಗಿ ಪತ್ರ, ದಾಖಲೆಗಳ ಖಾತಾ ನಕಲು ಮತ್ತು ನೀರು ಸರಬರಾಜು ಹೊಸ ಸಂಪರ್ಕ ಕಲ್ಪಿಸುವ ಕಾರ್ಯಗಳಿಗೆ ಸಕಾಲದ ಕಾಲಾವಧಿಯಲ್ಲಿ ನೀಡಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿ ಕೆ.ಎಂ.ಸತ್ಯನಾರಾಯಣ್ ತಿಳಿಸಿದರು.<br /> <br /> ಪುರಸಭೆಯ ಆವರಣದಲ್ಲಿ ಸೋಮವಾರ ಸಾರ್ವಜನಿಕರ ಮಾಹಿತಿಗಾಗಿ ನಾಗರಿಕ ಸೇವಾ ಯೋಜನೆಯ ಮಾಹಿತಿಯನ್ನೊಳಗೊಂಡ ಎರಡು ಪ್ಲೆಕ್ಸ್ ಬ್ಯಾನರ್ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> ವ್ಯವಸ್ಥಾಪಕ ನಾಗರಾಜ್, ಸಕಾಲ ಯೋಜನೆಯ ನಿರ್ವಾಹಕ ಎಚ್.ಪ್ರಶಾಂತ್, ಎಸ್ಜೆಎಸ್ಆರ್ವೈನ ನಿರ್ವಾಹಕಿ ಅನುಪಮ, ಸ್ಥಾಯಿ ಸಮಿತಿ ಅಧ್ಯಕ್ಷ ಮಿಲ್ಟ್ರಿ ಶ್ರೀನಿವಾಸ್, ಮಾಜಿ ಪುರಸಭಾಧ್ಯರಾದ ಟಿ.ಜೆ.ಗೋಪಿಕುಮಾರ್, ಟಿ.ಆರ್.ಬಸವರಾಜ್ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯ ರೇವಣ್ಣ ಮತ್ತು ಇತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>