<p><strong>ಬೆಂಗಳೂರು:</strong> ಕಥಾವಸ್ತು, ಕಲಾವಿದರಷ್ಟೆ ಮುಖ್ಯವಾಗಿ ಪ್ರೇಕ್ಷಕರನ್ನು ಹಿಡಿದಿಡುವ ತಂತ್ರಗಾರಿಕೆಯೂ ನಾಟಕದ ಯಶಸ್ಸಿಗೆ ಕಾರಣವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಉಮಾಶ್ರೀ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ವಿಶ್ವವಿದ್ಯಾಲಯದಲ್ಲಿರುವ ಕಲಾಗ್ರಾಮದಲ್ಲಿ ನಡೆದ `ಮಲೆಗಳಲ್ಲಿ ಮದುಮಗಳು' ನಾಟಕೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿ, `ನಗರದ ಜನಜೀವನ ಒತ್ತಡದಿಂದ ಕೂಡಿದ್ದೂ, ಆಧುನಿಕ ಜೀವನ ಶೈಲಿಗೆ ಒಗ್ಗಿಹೋಗಿದೆ. ಹೀಗಿದ್ದೂ ಜನರು ನಾಟಕಗಳನ್ನು ನೋಡಲು ಮುಂದೆ ಬಂದಿರುವುದು ರಂಗಕರ್ಮಿಗಳಿಗೆ ಪ್ರೋತ್ಸಾಹದಾಯಕ ಬೆಳವಣಿಗೆಯಾಗಿದೆ' ಎಂದು ಸಂತಸ ವ್ಯಕ್ತಪಡಿಸಿದರು.<br /> <br /> ಮಲೆಗಳಲ್ಲಿ ಮದುಮಗಳು ಎಂಬ ಮನೋಜ್ಞ ಕಾದಂಬರಿಯ ನಾಟಕ ರೂಪಾಂತರವನ್ನು ಪ್ರಕೃತಿಯ ಮಧ್ಯೆ ಸತತ 20ಕ್ಕೂ ಹೆಚ್ಚು ಪ್ರದರ್ಶನ ಕಂಡಿರುವುದು ಸಾಧನೆಯೇ ಆಗಿದೆ' ಎಂದು ಶ್ಲಾಘಿಸಿದರು.<br /> <br /> ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಸವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಥಾವಸ್ತು, ಕಲಾವಿದರಷ್ಟೆ ಮುಖ್ಯವಾಗಿ ಪ್ರೇಕ್ಷಕರನ್ನು ಹಿಡಿದಿಡುವ ತಂತ್ರಗಾರಿಕೆಯೂ ನಾಟಕದ ಯಶಸ್ಸಿಗೆ ಕಾರಣವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಉಮಾಶ್ರೀ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ವಿಶ್ವವಿದ್ಯಾಲಯದಲ್ಲಿರುವ ಕಲಾಗ್ರಾಮದಲ್ಲಿ ನಡೆದ `ಮಲೆಗಳಲ್ಲಿ ಮದುಮಗಳು' ನಾಟಕೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿ, `ನಗರದ ಜನಜೀವನ ಒತ್ತಡದಿಂದ ಕೂಡಿದ್ದೂ, ಆಧುನಿಕ ಜೀವನ ಶೈಲಿಗೆ ಒಗ್ಗಿಹೋಗಿದೆ. ಹೀಗಿದ್ದೂ ಜನರು ನಾಟಕಗಳನ್ನು ನೋಡಲು ಮುಂದೆ ಬಂದಿರುವುದು ರಂಗಕರ್ಮಿಗಳಿಗೆ ಪ್ರೋತ್ಸಾಹದಾಯಕ ಬೆಳವಣಿಗೆಯಾಗಿದೆ' ಎಂದು ಸಂತಸ ವ್ಯಕ್ತಪಡಿಸಿದರು.<br /> <br /> ಮಲೆಗಳಲ್ಲಿ ಮದುಮಗಳು ಎಂಬ ಮನೋಜ್ಞ ಕಾದಂಬರಿಯ ನಾಟಕ ರೂಪಾಂತರವನ್ನು ಪ್ರಕೃತಿಯ ಮಧ್ಯೆ ಸತತ 20ಕ್ಕೂ ಹೆಚ್ಚು ಪ್ರದರ್ಶನ ಕಂಡಿರುವುದು ಸಾಧನೆಯೇ ಆಗಿದೆ' ಎಂದು ಶ್ಲಾಘಿಸಿದರು.<br /> <br /> ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಸವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>