<p><strong>ಬಳ್ಳಾರಿ:</strong> ‘ನಾನು ಸಾಮಾಜಿಕ ಕಾರ್ಯಕರ್ತನಲ್ಲ. ಬದಲಿಗೆ, ಅಪ್ಪಟ ರಾಜಕೀಯ ಕಾರ್ಯಕರ್ತ’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಸೋಮವಾರ ಇಲ್ಲಿ ತಿಳಿಸಿದರು.<br /> <br /> ‘ರಾಜಕೀಯ ಚಳವಳಿಗಳ ಬಗ್ಗೆ ನನಗೆ ಒಲವು ಇದೆ. ಆದರೆ ರಾಜಕೀಯ ಪಕ್ಷಗಳ ಬಗ್ಗೆ ಆಸಕ್ತಿ ಇಲ್ಲ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ, ಲೋಕನಾಯಕ ಜಯಪ್ರಕಾಶ್ ನಾರಾಯಣ್, ಹಾಗೂ ಮಾರ್ಟಿನ್ ಲೂಥರ್ ಕಿಂಗ್ ಅವರಿಂದ ಪ್ರೇರೇಪಿತನಾಗಿ ಚಳವಳಿಗೆ ಇಳಿದಿದ್ದೇನೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ‘ದೆಹಲಿಯಲ್ಲಿ ಹೊಸದಾಗಿ ರೂಪುಗೊಂಡಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ<br /> ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಅಭಿನಂದನೀಯ ಎಂದ ಅವರು, ಆರಂಭಿಕ ಹಂತದಲ್ಲೇ ಉತ್ತಮ ಫಲಿತಾಂಶ ಗಳಿಸಿರುವ ಆ ಪಕ್ಷಕ್ಕೆ ನನ್ನ ಬೆಂಬಲ ಇದೆ’ ಎಂದು ಹೇಳಿದರು.<br /> <br /> <strong>ನ್ಯಾಯಾಲಯಕ್ಕೆ ಹೋಗುವುದಿಲ್ಲ</strong>: ‘ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಳಿಯ ಸಿದ್ಧಾರ್ಥ ಬೆಂಗಳೂರು ಹೊರ ವಲಯದಲ್ಲಿರುವ ಬಿಡಿಎ ಒಡೆತನದ 1.39 ಎಕರೆ ಜಮೀನು ಕಬಳಿಕೆ ಆರೋಪಕ್ಕೆ ನ್ಯಾಯಾಲಯದ ಮೊರೆ ಹೋಗುವಂತೆ ಕೃಷ್ಣ ಸಲಹೆ ಮಾಡಿದ್ದಾರೆ. ಆದರೆ, ಕಾರ್ಯಾಂಗವು ಅಕ್ರಮದ ಬಗ್ಗೆ ಗಮನ ಹರಿಸಬೇಕಿದೆ. ಕಾರ್ಯಾಂಗದ ಮೇಲಿನ ನಂಬಿಕೆ ದೂರವಾಗದಿರಲಿ ಎಂಬ ಉದ್ದೇಶದಿಂದಲೇ ನಾನು ನ್ಯಾಯಾಲಯದ ಮೊರೆ ಹೋಗದಿರಲು ನಿರ್ಧರಿಸಿದ್ದೇನೆ’ ಎಂದರು.<br /> <br /> ‘ಭೂ ಕಬಳಿಕೆ ಕುರಿತಂತೆ, ಸಾಮಾನ್ಯ ನಾಗರಿಕನಾಗಿ ನಾನು ಸಂವಿಧಾನದ ಹಕ್ಕಿಗೆ ಅನುಗುಣವಾಗಿ ದನಿ ಎತ್ತಿದ್ದೇನೆ. ಆ ಹಕ್ಕಿನ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಕರ್ತವ್ಯ ಕಾರ್ಯಾಂಗದ್ದಾಗಿದೆ ಎಂದು ಅವರು ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ನಾನು ಸಾಮಾಜಿಕ ಕಾರ್ಯಕರ್ತನಲ್ಲ. ಬದಲಿಗೆ, ಅಪ್ಪಟ ರಾಜಕೀಯ ಕಾರ್ಯಕರ್ತ’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಸೋಮವಾರ ಇಲ್ಲಿ ತಿಳಿಸಿದರು.<br /> <br /> ‘ರಾಜಕೀಯ ಚಳವಳಿಗಳ ಬಗ್ಗೆ ನನಗೆ ಒಲವು ಇದೆ. ಆದರೆ ರಾಜಕೀಯ ಪಕ್ಷಗಳ ಬಗ್ಗೆ ಆಸಕ್ತಿ ಇಲ್ಲ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ, ಲೋಕನಾಯಕ ಜಯಪ್ರಕಾಶ್ ನಾರಾಯಣ್, ಹಾಗೂ ಮಾರ್ಟಿನ್ ಲೂಥರ್ ಕಿಂಗ್ ಅವರಿಂದ ಪ್ರೇರೇಪಿತನಾಗಿ ಚಳವಳಿಗೆ ಇಳಿದಿದ್ದೇನೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ‘ದೆಹಲಿಯಲ್ಲಿ ಹೊಸದಾಗಿ ರೂಪುಗೊಂಡಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ<br /> ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಅಭಿನಂದನೀಯ ಎಂದ ಅವರು, ಆರಂಭಿಕ ಹಂತದಲ್ಲೇ ಉತ್ತಮ ಫಲಿತಾಂಶ ಗಳಿಸಿರುವ ಆ ಪಕ್ಷಕ್ಕೆ ನನ್ನ ಬೆಂಬಲ ಇದೆ’ ಎಂದು ಹೇಳಿದರು.<br /> <br /> <strong>ನ್ಯಾಯಾಲಯಕ್ಕೆ ಹೋಗುವುದಿಲ್ಲ</strong>: ‘ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಳಿಯ ಸಿದ್ಧಾರ್ಥ ಬೆಂಗಳೂರು ಹೊರ ವಲಯದಲ್ಲಿರುವ ಬಿಡಿಎ ಒಡೆತನದ 1.39 ಎಕರೆ ಜಮೀನು ಕಬಳಿಕೆ ಆರೋಪಕ್ಕೆ ನ್ಯಾಯಾಲಯದ ಮೊರೆ ಹೋಗುವಂತೆ ಕೃಷ್ಣ ಸಲಹೆ ಮಾಡಿದ್ದಾರೆ. ಆದರೆ, ಕಾರ್ಯಾಂಗವು ಅಕ್ರಮದ ಬಗ್ಗೆ ಗಮನ ಹರಿಸಬೇಕಿದೆ. ಕಾರ್ಯಾಂಗದ ಮೇಲಿನ ನಂಬಿಕೆ ದೂರವಾಗದಿರಲಿ ಎಂಬ ಉದ್ದೇಶದಿಂದಲೇ ನಾನು ನ್ಯಾಯಾಲಯದ ಮೊರೆ ಹೋಗದಿರಲು ನಿರ್ಧರಿಸಿದ್ದೇನೆ’ ಎಂದರು.<br /> <br /> ‘ಭೂ ಕಬಳಿಕೆ ಕುರಿತಂತೆ, ಸಾಮಾನ್ಯ ನಾಗರಿಕನಾಗಿ ನಾನು ಸಂವಿಧಾನದ ಹಕ್ಕಿಗೆ ಅನುಗುಣವಾಗಿ ದನಿ ಎತ್ತಿದ್ದೇನೆ. ಆ ಹಕ್ಕಿನ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಕರ್ತವ್ಯ ಕಾರ್ಯಾಂಗದ್ದಾಗಿದೆ ಎಂದು ಅವರು ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>