<p><strong>ನಾಪೋಕ್ಲು:</strong> ಮಡಿಕೇರಿ ಆಕಾಶವಾಣಿಯಿಂದ ವಾರಕ್ಕೊಮ್ಮೆ ಪ್ರಸಾರವಾಗುತ್ತಿರುವ ಹಳ್ಳಿ ರೇಡಿಯೊ ಕಾರ್ಯಕ್ರಮ ಬುಧವಾರ ನಾಪೋಕ್ಲು ಸಮೀಪದ ಹಳೆ ತಾಲ್ಲೂಕಿನ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮ ಆಯೋಜಕ ಹಾಗೂ ನಿರೂಪಕ ನಾಗೇಶ್ ಕಾಲೂರು ಇದು 141ನೇ ಹಳ್ಳಿ ರೇಡಿಯೊ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವನ್ನು ಮೊದಲ ಬಾರಿಗೆ ಮಡಿಕೇರಿ ಸಮೀಪದ ಕಾಲೂರು ಗ್ರಾಮದಲ್ಲಿ ಆರಂಭಿಸಲಾಯಿತು ಎಂದು ತಿಳಿಸಿದರು.<br /> <br /> ಗ್ರಾಮೀಣ ಜನರ ಜೀವನ ಕ್ರಮ, ಕೃಷಿ ಪದ್ಧತಿ, ಪ್ರತಿಭೆಗಳ ಗುರುತಿಸುವಿಕೆ, ಧಾರ್ಮಿಕ ಕೇಂದ್ರಗಳ ಮಾಹಿತಿ ಮತ್ತು ಗ್ರಾಮದಲ್ಲಿ ಆಗಬೇಕಾದ ಅಭಿವೃದ್ಧಿ ಚಿತ್ರಣವನ್ನು ಸಂಬಂಧಿಸಿದವರ ಗಮನಕ್ಕೆ ತರುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಇತರರು ಗ್ರಾಮದ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಕುಲ್ಲೆೀಟಿರ ಮಾದಪ್ಪ ವಹಿಸಿದ್ದರು.<br /> <br /> ದೇವಾಲಯದ ಗೌರವ ಕಾರ್ಯದರ್ಶಿ ಅರೆಯಡ ಸೋಮಪ್ಪ ಸ್ವಾಗತಿಸಿದರು. ಕುಲ್ಲೆೀಟಿರ ಅರುಣ್ ಬೇಬ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಮಡಿಕೇರಿ ಆಕಾಶವಾಣಿಯಿಂದ ವಾರಕ್ಕೊಮ್ಮೆ ಪ್ರಸಾರವಾಗುತ್ತಿರುವ ಹಳ್ಳಿ ರೇಡಿಯೊ ಕಾರ್ಯಕ್ರಮ ಬುಧವಾರ ನಾಪೋಕ್ಲು ಸಮೀಪದ ಹಳೆ ತಾಲ್ಲೂಕಿನ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮ ಆಯೋಜಕ ಹಾಗೂ ನಿರೂಪಕ ನಾಗೇಶ್ ಕಾಲೂರು ಇದು 141ನೇ ಹಳ್ಳಿ ರೇಡಿಯೊ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವನ್ನು ಮೊದಲ ಬಾರಿಗೆ ಮಡಿಕೇರಿ ಸಮೀಪದ ಕಾಲೂರು ಗ್ರಾಮದಲ್ಲಿ ಆರಂಭಿಸಲಾಯಿತು ಎಂದು ತಿಳಿಸಿದರು.<br /> <br /> ಗ್ರಾಮೀಣ ಜನರ ಜೀವನ ಕ್ರಮ, ಕೃಷಿ ಪದ್ಧತಿ, ಪ್ರತಿಭೆಗಳ ಗುರುತಿಸುವಿಕೆ, ಧಾರ್ಮಿಕ ಕೇಂದ್ರಗಳ ಮಾಹಿತಿ ಮತ್ತು ಗ್ರಾಮದಲ್ಲಿ ಆಗಬೇಕಾದ ಅಭಿವೃದ್ಧಿ ಚಿತ್ರಣವನ್ನು ಸಂಬಂಧಿಸಿದವರ ಗಮನಕ್ಕೆ ತರುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಇತರರು ಗ್ರಾಮದ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಕುಲ್ಲೆೀಟಿರ ಮಾದಪ್ಪ ವಹಿಸಿದ್ದರು.<br /> <br /> ದೇವಾಲಯದ ಗೌರವ ಕಾರ್ಯದರ್ಶಿ ಅರೆಯಡ ಸೋಮಪ್ಪ ಸ್ವಾಗತಿಸಿದರು. ಕುಲ್ಲೆೀಟಿರ ಅರುಣ್ ಬೇಬ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>