<p>ಮಡಿಕೇರಿ: ನಗರಸಭೆಯ ವಾರ್ಡ್ ನಂಬರ್ 9ರಲ್ಲಿ ಸ್ಪರ್ಧಿಸಲು ಬಯಸಿ ಪಕ್ಷದ ವತಿಯಿಂದ ನಾಮಪತ್ರ ಸಲ್ಲಿಸಿದ್ದ ಮಹಿಳಾ ಅಭ್ಯರ್ಥಿಯ ನಾಮಪತ್ರವನ್ನು ಚುನಾವಣಾಧಿಕಾರಿಗಳು ವಿನಾಕಾರಣ ತಿರಸ್ಕರಿಸಿದ್ದಾರೆಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಬುಧವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.<br /> <br /> ಸ್ಥಳಕ್ಕೆ ಧಾವಿಸಿದ ಸುದ್ದಿಗಾರರ ಜೊತೆ ಮಾತನಾಡಿದ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ವಿ.ಪಿ. ಶಶಿಧರ್, ‘ಪಕ್ಷದ ಅಭ್ಯರ್ಥಿಯಾದ ಜಾನಕಿ ಅವರು ನಾಮಪತ್ರ ಸಲ್ಲಿಸಲು ಮಧ್ಯಾಹ್ನ 1.45ರಿಂದ 3 ಗಂಟೆಯವರೆಗೆ ಸರದಿಯಲ್ಲಿ ನಿಂತಿದ್ದರು.<br /> <br /> ಆಗ ಟೋಕನ್ (ಸಂಖ್ಯೆ 11) ಕೂಡ ಅವರಿಗೆ ನೀಡಲಾಗಿತ್ತು. ನಂತರ ಜಾನಕಿ ಅವರು ನಾಮಪತ್ರ ಸಲ್ಲಿಸಲು ಕೊಠಡಿಯೊಳಗೆ ಪ್ರವೇಶಿಸಲು ಹೋದಾಗ ಅವರನ್ನು ತಡೆಯಲಾಯಿತು. ನಿಗದಿತ ಸಮಯ ಮೀರಿ ನಾಮಪತ್ರ ಸಲ್ಲಿಕೆಯಾಗಿದೆ ಎಂದು ಸಬೂಬು ಹೇಳಿ ಚುನಾವಣಾಧಿಕಾರಿಗಳು ನಾಮಪತ್ರ ತಿರಸ್ಕರಿಸಿದ್ದಾರೆ’ ಎಂದು ಆರೋಪಿಸಿದರು.<br /> <br /> ತಾಲ್ಲೂಕು ಚುನಾವಣಾಧಿಕಾರಿ ಕುಂಞಮ್ಮ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ರಾತ್ರಿ 8 ಗಂಟೆಯವರೆಗೂ ಪ್ರಯತ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ನಗರಸಭೆಯ ವಾರ್ಡ್ ನಂಬರ್ 9ರಲ್ಲಿ ಸ್ಪರ್ಧಿಸಲು ಬಯಸಿ ಪಕ್ಷದ ವತಿಯಿಂದ ನಾಮಪತ್ರ ಸಲ್ಲಿಸಿದ್ದ ಮಹಿಳಾ ಅಭ್ಯರ್ಥಿಯ ನಾಮಪತ್ರವನ್ನು ಚುನಾವಣಾಧಿಕಾರಿಗಳು ವಿನಾಕಾರಣ ತಿರಸ್ಕರಿಸಿದ್ದಾರೆಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಬುಧವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.<br /> <br /> ಸ್ಥಳಕ್ಕೆ ಧಾವಿಸಿದ ಸುದ್ದಿಗಾರರ ಜೊತೆ ಮಾತನಾಡಿದ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ವಿ.ಪಿ. ಶಶಿಧರ್, ‘ಪಕ್ಷದ ಅಭ್ಯರ್ಥಿಯಾದ ಜಾನಕಿ ಅವರು ನಾಮಪತ್ರ ಸಲ್ಲಿಸಲು ಮಧ್ಯಾಹ್ನ 1.45ರಿಂದ 3 ಗಂಟೆಯವರೆಗೆ ಸರದಿಯಲ್ಲಿ ನಿಂತಿದ್ದರು.<br /> <br /> ಆಗ ಟೋಕನ್ (ಸಂಖ್ಯೆ 11) ಕೂಡ ಅವರಿಗೆ ನೀಡಲಾಗಿತ್ತು. ನಂತರ ಜಾನಕಿ ಅವರು ನಾಮಪತ್ರ ಸಲ್ಲಿಸಲು ಕೊಠಡಿಯೊಳಗೆ ಪ್ರವೇಶಿಸಲು ಹೋದಾಗ ಅವರನ್ನು ತಡೆಯಲಾಯಿತು. ನಿಗದಿತ ಸಮಯ ಮೀರಿ ನಾಮಪತ್ರ ಸಲ್ಲಿಕೆಯಾಗಿದೆ ಎಂದು ಸಬೂಬು ಹೇಳಿ ಚುನಾವಣಾಧಿಕಾರಿಗಳು ನಾಮಪತ್ರ ತಿರಸ್ಕರಿಸಿದ್ದಾರೆ’ ಎಂದು ಆರೋಪಿಸಿದರು.<br /> <br /> ತಾಲ್ಲೂಕು ಚುನಾವಣಾಧಿಕಾರಿ ಕುಂಞಮ್ಮ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ರಾತ್ರಿ 8 ಗಂಟೆಯವರೆಗೂ ಪ್ರಯತ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>