<p>ಕೊಪ್ಪಳ: ಡಿ. 31ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರ ಉಮೇದುವಾರರು ಸೋಮವಾರ ನಾಮಪತ್ರ ಸಲ್ಲಿಸಿದರು.<br /> <br /> ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲು ಆಗಮಿಸಿದ್ದರಿಂದ ಇಲ್ಲಿನ ತಹಸೀಲ್ದಾರ ಕಚೇರಿ ಆವರಣ ಜನರಿಂದ ತುಂಬಿತ್ತು. ಆಯಾ ಪಕ್ಷಗಳ ಬಾವುಟಗಳನ್ನು ಹಿಡಿದುಕೊಂಡಿದ್ದ ಕಾರ್ಯಕರ್ತರ ಓಡಾಟ, ಸಂಭ್ರಮ ಕಾಣಬಹುದಾಗಿತ್ತು.<br /> <br /> ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಏಳು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಕ್ಷದ ಜಿಲ್ಲಾ ಅಧ್ಯಕ್ಷರೂ ಆಗಿರುವ ಶಾಸಕ ಸಂಗಣ್ಣ ಕರಡಿ ನೇತೃತ್ವದಲ್ಲಿ ಬನ್ನಿಕಟ್ಟಿ ಪ್ರದೇಶದಿಂದ ತಹಸೀಲ್ದಾರ ಕಚೇರಿ ವರೆಗೆ ಮೆರವಣಿಗೆಯಲ್ಲಿ ಆಗಮಿಸಿದರು.<br /> <br /> ಅದೇ ರೀತಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಇಲ್ಲಿನ ಮುಂಡರಗಿ ಭೀಮರಾಯ ವೃತ್ತ, ತಮ್ಮ ನಾಯಕರ ಮನೆಗಳಿಂದ ತಹಸೀಲ್ದಾರ ಕಚೇರಿ ವರೆಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.<br /> <br /> ನಾಮಪತ್ರ ಸಲ್ಲಿಸಲು ವಿವಿಧ ಪಕ್ಷಗಳು ಮುಖಂಡರು, ಕಾರ್ಯಕರ್ತರು ಆಗಮಿಸಿದ್ದರಿಂದ ತಹಸೀಲ್ದಾರ ಕಚೇರಿ ಹೊರಗಡೆ ವಾಹನಗಳ ದಟ್ಟಣೆ ಇತ್ತು. ಅದರಲ್ಲೂ, ಕಚೇರಿ ಹತ್ತಿರವೇ ಇರುವ ಮುಂಡರಗಿ ಭೀಮರಾಯ ವೃತ್ತದಲ್ಲಿ ಬಹುಹೊತ್ತಿನ ವರೆಗೆ ಟ್ರಾಫಿಕ್ ಜಾಮ್ನಿಂದಾಗಿ ವಾಹನ ಸವಾರರು ಪರದಾಡಿದರು.<br /> <br /> ನಾಮಪತ್ರ ಭರ್ತಿ ಮಾಡುವ ಸಲುವಾಗಿ ಚುನಾವಣಾ ವಿಭಾಗದ ಕುರ್ಚಿ-ಮೇಜುಗಳನ್ನು ಆಕ್ರಮಿಸಿ, ರಾಜಾರೋಷವಾಗಿ ಕುಳಿತಿದ್ದ ಕೆಲವು ಪಕ್ಷಗಳ ಕಾರ್ಯಕರ್ತರ ವರ್ತನೆಗೆ ವ್ಯಾಪಕ ಟೀಕೆಯೂ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ಡಿ. 31ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರ ಉಮೇದುವಾರರು ಸೋಮವಾರ ನಾಮಪತ್ರ ಸಲ್ಲಿಸಿದರು.<br /> <br /> ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲು ಆಗಮಿಸಿದ್ದರಿಂದ ಇಲ್ಲಿನ ತಹಸೀಲ್ದಾರ ಕಚೇರಿ ಆವರಣ ಜನರಿಂದ ತುಂಬಿತ್ತು. ಆಯಾ ಪಕ್ಷಗಳ ಬಾವುಟಗಳನ್ನು ಹಿಡಿದುಕೊಂಡಿದ್ದ ಕಾರ್ಯಕರ್ತರ ಓಡಾಟ, ಸಂಭ್ರಮ ಕಾಣಬಹುದಾಗಿತ್ತು.<br /> <br /> ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಏಳು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಕ್ಷದ ಜಿಲ್ಲಾ ಅಧ್ಯಕ್ಷರೂ ಆಗಿರುವ ಶಾಸಕ ಸಂಗಣ್ಣ ಕರಡಿ ನೇತೃತ್ವದಲ್ಲಿ ಬನ್ನಿಕಟ್ಟಿ ಪ್ರದೇಶದಿಂದ ತಹಸೀಲ್ದಾರ ಕಚೇರಿ ವರೆಗೆ ಮೆರವಣಿಗೆಯಲ್ಲಿ ಆಗಮಿಸಿದರು.<br /> <br /> ಅದೇ ರೀತಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಇಲ್ಲಿನ ಮುಂಡರಗಿ ಭೀಮರಾಯ ವೃತ್ತ, ತಮ್ಮ ನಾಯಕರ ಮನೆಗಳಿಂದ ತಹಸೀಲ್ದಾರ ಕಚೇರಿ ವರೆಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.<br /> <br /> ನಾಮಪತ್ರ ಸಲ್ಲಿಸಲು ವಿವಿಧ ಪಕ್ಷಗಳು ಮುಖಂಡರು, ಕಾರ್ಯಕರ್ತರು ಆಗಮಿಸಿದ್ದರಿಂದ ತಹಸೀಲ್ದಾರ ಕಚೇರಿ ಹೊರಗಡೆ ವಾಹನಗಳ ದಟ್ಟಣೆ ಇತ್ತು. ಅದರಲ್ಲೂ, ಕಚೇರಿ ಹತ್ತಿರವೇ ಇರುವ ಮುಂಡರಗಿ ಭೀಮರಾಯ ವೃತ್ತದಲ್ಲಿ ಬಹುಹೊತ್ತಿನ ವರೆಗೆ ಟ್ರಾಫಿಕ್ ಜಾಮ್ನಿಂದಾಗಿ ವಾಹನ ಸವಾರರು ಪರದಾಡಿದರು.<br /> <br /> ನಾಮಪತ್ರ ಭರ್ತಿ ಮಾಡುವ ಸಲುವಾಗಿ ಚುನಾವಣಾ ವಿಭಾಗದ ಕುರ್ಚಿ-ಮೇಜುಗಳನ್ನು ಆಕ್ರಮಿಸಿ, ರಾಜಾರೋಷವಾಗಿ ಕುಳಿತಿದ್ದ ಕೆಲವು ಪಕ್ಷಗಳ ಕಾರ್ಯಕರ್ತರ ವರ್ತನೆಗೆ ವ್ಯಾಪಕ ಟೀಕೆಯೂ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>