<p><strong>ನವದೆಹಲಿ (ಪಿಟಿಐ):</strong> ವಿವಾದಾತ್ಮಕ ಅಂತರಿಕ್ಷ್-ದೇವಾಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಅಭಿಪ್ರಾಯ ತಿಳಿಸಲು ಕೇಂದ್ರ ಸರ್ಕಾರ ತಮಗೆ ಅವಕಾಶ ನೀಡಲಿಲ್ಲ ಎಂಬ ಇಸ್ರೊ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಹೇಳಿಕೆಯನ್ನು ಕೇಂದ್ರವು ಗುರುವಾರ ತಳ್ಳಿ ಹಾಕಿದೆ.</p>.<p>`ಈ ಒಪ್ಪಂದಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಭಾಗಿಯಾಗಿರುವ ಕುರಿತಂತೆ ಸ್ಪಷ್ಟನೆ ನೀಡುವಂತೆ ಸೂಚಿಸಿ ಉನ್ನತ ಮಟ್ಟದ ತಂಡ 2001ರ ಜುಲೈ ತಿಂಗಳಲ್ಲಿ ಎಲ್ಲಾ 4 ಅಧಿಕಾರಿಗಳಿಗೆ ಪತ್ರಗಳನ್ನು ಕಳುಹಿಸಿತ್ತು~ ಎಂದು ಪ್ರಧಾನಿ ಕಚೇರಿ ರಾಜ್ಯ ಖಾತೆ ಸಚಿವ ವಿ.ನಾರಾಯಣ ಸ್ವಾಮಿ ರಾಜ್ಯಸಭೆಗೆ ತಿಳಿಸಿದರು.</p>.<p>10 ದಿನಗಳ ಒಳಗಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿ ಮಾಧವನ್ ನಾಯರ್, ಕೆ.ಆರ್. ಶ್ರೀಧರ ಮೂರ್ತಿ, ಎ ಭಾಸ್ಕರನಾರಾಯಣ ಮತ್ತು ಕೆ.ಎನ್. ಶಂಕರ ಅವರಿಗೆ ಪತ್ರಗಳನ್ನು ಕಳುಹಿಸಲಾಗಿತ್ತು ಎಂದು ಸಚಿವರು ಲಿಖಿತ ಹೇಳಿಕೆ ನೀಡಿದ್ದಾರೆ.</p>.<p>ಅಗತ್ಯ ಬಿದ್ದರೆ ಉನ್ನತ ಮಟ್ಟದ ತಂಡದ ಮುಂದೆ ಹಾಜರಾಗಬೇಕು ಎಂದೂ ನಾಲ್ವರಿಗೂ ತಿಳಿಸಲಾಗಿತ್ತು ಎಂದು ನಾರಾಯಣ ಸ್ವಾಮಿ ಸ್ಪಷ್ಟ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ವಿವಾದಾತ್ಮಕ ಅಂತರಿಕ್ಷ್-ದೇವಾಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಅಭಿಪ್ರಾಯ ತಿಳಿಸಲು ಕೇಂದ್ರ ಸರ್ಕಾರ ತಮಗೆ ಅವಕಾಶ ನೀಡಲಿಲ್ಲ ಎಂಬ ಇಸ್ರೊ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಹೇಳಿಕೆಯನ್ನು ಕೇಂದ್ರವು ಗುರುವಾರ ತಳ್ಳಿ ಹಾಕಿದೆ.</p>.<p>`ಈ ಒಪ್ಪಂದಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಭಾಗಿಯಾಗಿರುವ ಕುರಿತಂತೆ ಸ್ಪಷ್ಟನೆ ನೀಡುವಂತೆ ಸೂಚಿಸಿ ಉನ್ನತ ಮಟ್ಟದ ತಂಡ 2001ರ ಜುಲೈ ತಿಂಗಳಲ್ಲಿ ಎಲ್ಲಾ 4 ಅಧಿಕಾರಿಗಳಿಗೆ ಪತ್ರಗಳನ್ನು ಕಳುಹಿಸಿತ್ತು~ ಎಂದು ಪ್ರಧಾನಿ ಕಚೇರಿ ರಾಜ್ಯ ಖಾತೆ ಸಚಿವ ವಿ.ನಾರಾಯಣ ಸ್ವಾಮಿ ರಾಜ್ಯಸಭೆಗೆ ತಿಳಿಸಿದರು.</p>.<p>10 ದಿನಗಳ ಒಳಗಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿ ಮಾಧವನ್ ನಾಯರ್, ಕೆ.ಆರ್. ಶ್ರೀಧರ ಮೂರ್ತಿ, ಎ ಭಾಸ್ಕರನಾರಾಯಣ ಮತ್ತು ಕೆ.ಎನ್. ಶಂಕರ ಅವರಿಗೆ ಪತ್ರಗಳನ್ನು ಕಳುಹಿಸಲಾಗಿತ್ತು ಎಂದು ಸಚಿವರು ಲಿಖಿತ ಹೇಳಿಕೆ ನೀಡಿದ್ದಾರೆ.</p>.<p>ಅಗತ್ಯ ಬಿದ್ದರೆ ಉನ್ನತ ಮಟ್ಟದ ತಂಡದ ಮುಂದೆ ಹಾಜರಾಗಬೇಕು ಎಂದೂ ನಾಲ್ವರಿಗೂ ತಿಳಿಸಲಾಗಿತ್ತು ಎಂದು ನಾರಾಯಣ ಸ್ವಾಮಿ ಸ್ಪಷ್ಟ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>