<p><strong>ಬೆಂಗಳೂರು:</strong> ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಅವರು ಜಯ ಗಳಿಸಿದ್ದಾರೆ. ಎರಡನೇ ಪ್ರಾಶಸ್ತ್ಯದ ಮತಗಳ ಬೆಂಬಲದಿಂದ ಅವರು ಈ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಈ ಕ್ಷೇತ್ರದ ಟಿಕೆಟ್ ಅವರಿಗೇ ದೊರೆಯುವುದು ಖಚಿತವಾದಂತಾಗಿದೆ.<br /> <br /> ಒಟ್ಟು ನಾಲ್ವರು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಈ ಪೈಕಿ ಕೆಪಿಸಿಸಿ ಕಾರ್ಯದರ್ಶಿ ಜಿ.ಸಿ.ಚಂದ್ರಶೇಖರ್ 123 ಮತ ಪಡೆದು ಎರಡನೇ ಸ್ಥಾನ ಗಳಿಸಿದರು. ಎಐಸಿಸಿ ವಕ್ತಾರ ಎಂ.ವಿ.ರಾಜೀವ್ ಗೌಡ 69 ಮತ್ತು ಮಾಜಿ ಶಾಸಕ ನೆ.ಲ.ನರೇಂದ್ರಬಾಬು 40.5 ಮತ ಪಡೆಯುವ ಮೂಲಕ ಅನುಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.<br /> <br /> ಇಲ್ಲಿನ ಆರ್.ಟಿ.ನಗರದಲ್ಲಿರುವ ಪಟೇಲ್ಸ್ ಇನ್ ಖಾಸಗಿ ರೆಸಾರ್ಟ್ನಲ್ಲಿ ಗುರುವಾರ ಬೆಳಿಗ್ಗೆ ಕಾಂಗ್ರೆಸ್ನ ಆಂತರಿಕ ಚುನಾವಣೆ ನಡೆಯಿತು. ಎಐಸಿಸಿ ನಿಯೋಜಿಸಿದ್ದ ಚುನಾವಣಾಧಿಕಾರಿಗಳಾದ ಜಸ್ಪ್ರೀತ್ ಸಿಂಗ್ ಮತ್ತು ನಿತಿನ್ ಕುಂಭಾಲ್ಕರ್ ನೇತೃತ್ವದಲ್ಲಿ ಚುನಾವಣೆ ನಡೆಯಿತು.<br /> <br /> ಆರಂಭದಲ್ಲಿ ಎಲ್ಲ ಅಭ್ಯರ್ಥಿಗಳೂ ತಲಾ ಹತ್ತು ನಿಮಿಷಗಳ ಕಾಲ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನಂತರ ಮತದಾನ ಶುರುವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಅವರು ಜಯ ಗಳಿಸಿದ್ದಾರೆ. ಎರಡನೇ ಪ್ರಾಶಸ್ತ್ಯದ ಮತಗಳ ಬೆಂಬಲದಿಂದ ಅವರು ಈ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಈ ಕ್ಷೇತ್ರದ ಟಿಕೆಟ್ ಅವರಿಗೇ ದೊರೆಯುವುದು ಖಚಿತವಾದಂತಾಗಿದೆ.<br /> <br /> ಒಟ್ಟು ನಾಲ್ವರು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಈ ಪೈಕಿ ಕೆಪಿಸಿಸಿ ಕಾರ್ಯದರ್ಶಿ ಜಿ.ಸಿ.ಚಂದ್ರಶೇಖರ್ 123 ಮತ ಪಡೆದು ಎರಡನೇ ಸ್ಥಾನ ಗಳಿಸಿದರು. ಎಐಸಿಸಿ ವಕ್ತಾರ ಎಂ.ವಿ.ರಾಜೀವ್ ಗೌಡ 69 ಮತ್ತು ಮಾಜಿ ಶಾಸಕ ನೆ.ಲ.ನರೇಂದ್ರಬಾಬು 40.5 ಮತ ಪಡೆಯುವ ಮೂಲಕ ಅನುಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.<br /> <br /> ಇಲ್ಲಿನ ಆರ್.ಟಿ.ನಗರದಲ್ಲಿರುವ ಪಟೇಲ್ಸ್ ಇನ್ ಖಾಸಗಿ ರೆಸಾರ್ಟ್ನಲ್ಲಿ ಗುರುವಾರ ಬೆಳಿಗ್ಗೆ ಕಾಂಗ್ರೆಸ್ನ ಆಂತರಿಕ ಚುನಾವಣೆ ನಡೆಯಿತು. ಎಐಸಿಸಿ ನಿಯೋಜಿಸಿದ್ದ ಚುನಾವಣಾಧಿಕಾರಿಗಳಾದ ಜಸ್ಪ್ರೀತ್ ಸಿಂಗ್ ಮತ್ತು ನಿತಿನ್ ಕುಂಭಾಲ್ಕರ್ ನೇತೃತ್ವದಲ್ಲಿ ಚುನಾವಣೆ ನಡೆಯಿತು.<br /> <br /> ಆರಂಭದಲ್ಲಿ ಎಲ್ಲ ಅಭ್ಯರ್ಥಿಗಳೂ ತಲಾ ಹತ್ತು ನಿಮಿಷಗಳ ಕಾಲ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನಂತರ ಮತದಾನ ಶುರುವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>