<p><strong>ಮುಂಬೈ: </strong>ನಾರಾಯಣ ಗುರುಗಳು ಪುರೋಹಿತಶಾಹಿ ವ್ಯವಸ್ಥೆ, ಅಸ್ಪೃಶ್ಯತೆಯ ವಿರುದ್ಧ ಹೋರಾಡಿದವರು. ಸಮಾನತೆಯ ಸಂದೇಶವನ್ನು ವಿಶ್ವಕ್ಕೆ ಸಾರಿದವರು. ಸದಾ ಮನುಕುಲದ ಏಳ್ಗೆಯನ್ನು ಬಯಸಿದವರು ಎಂದು ಲೇಖಕ ಡಾ. ಕಾಳೇಗೌಡ ನಾಗವಾರ ಅವರು ಹೇಳಿದರು.<br /> <br /> ಅವರು ಮುಂಬೈ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಎನ್. ಉಪಾಧ್ಯ ಅವರಿಗೆ ಬಿಲ್ಲವರ ಭವನದಲ್ಲಿ `ನಾರಾಯಣಗುರು ಸಾಹಿತ್ಯ ಪ್ರಶಸ್ತಿ~ ಪ್ರದಾನ ಮಾಡಿದ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬಿಲ್ಲವರ ಸಂಘ ಮುಂಬೈಯಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಅವರು ಪ್ರಶಂಸಿದರು.ಪ್ರಶಸ್ತಿ ಸ್ವೀಕರಿಸಿದ ಡಾ.ಉಪಾಧ್ಯ ಅವರು `ಕೇವಲ ಪ್ರತಿಭೆಯನ್ನು ಮಾನದಂಡವಾಗಿಸಿ ನೀಡುವ ಈ ಪ್ರಶಸ್ತಿ ಹೆಚ್ಚು ಮಹತ್ವದ್ದು. ಬಿಲ್ಲವರ ಸಂಘ ಜನಮುಖಿಯಾಗಿ ಹಲವಾರು ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ ~ ಎಂದು ಹೇಳಿದರು.ಸಮಾರಂಭದಲ್ಲಿ ಹಿರಿಯ ಪತ್ರಕರ್ತರಾದ ಚಂದ್ರಶೇಖರ ಪಾಲೆತ್ತಾಡಿ, ಎಂ.ಬಿ. ಕುಕ್ಯಾನ್ ಮಾತನಾಡಿ ಉಪಾಧ್ಯ ಅವರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ನಾರಾಯಣ ಗುರುಗಳು ಪುರೋಹಿತಶಾಹಿ ವ್ಯವಸ್ಥೆ, ಅಸ್ಪೃಶ್ಯತೆಯ ವಿರುದ್ಧ ಹೋರಾಡಿದವರು. ಸಮಾನತೆಯ ಸಂದೇಶವನ್ನು ವಿಶ್ವಕ್ಕೆ ಸಾರಿದವರು. ಸದಾ ಮನುಕುಲದ ಏಳ್ಗೆಯನ್ನು ಬಯಸಿದವರು ಎಂದು ಲೇಖಕ ಡಾ. ಕಾಳೇಗೌಡ ನಾಗವಾರ ಅವರು ಹೇಳಿದರು.<br /> <br /> ಅವರು ಮುಂಬೈ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಎನ್. ಉಪಾಧ್ಯ ಅವರಿಗೆ ಬಿಲ್ಲವರ ಭವನದಲ್ಲಿ `ನಾರಾಯಣಗುರು ಸಾಹಿತ್ಯ ಪ್ರಶಸ್ತಿ~ ಪ್ರದಾನ ಮಾಡಿದ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬಿಲ್ಲವರ ಸಂಘ ಮುಂಬೈಯಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಅವರು ಪ್ರಶಂಸಿದರು.ಪ್ರಶಸ್ತಿ ಸ್ವೀಕರಿಸಿದ ಡಾ.ಉಪಾಧ್ಯ ಅವರು `ಕೇವಲ ಪ್ರತಿಭೆಯನ್ನು ಮಾನದಂಡವಾಗಿಸಿ ನೀಡುವ ಈ ಪ್ರಶಸ್ತಿ ಹೆಚ್ಚು ಮಹತ್ವದ್ದು. ಬಿಲ್ಲವರ ಸಂಘ ಜನಮುಖಿಯಾಗಿ ಹಲವಾರು ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ ~ ಎಂದು ಹೇಳಿದರು.ಸಮಾರಂಭದಲ್ಲಿ ಹಿರಿಯ ಪತ್ರಕರ್ತರಾದ ಚಂದ್ರಶೇಖರ ಪಾಲೆತ್ತಾಡಿ, ಎಂ.ಬಿ. ಕುಕ್ಯಾನ್ ಮಾತನಾಡಿ ಉಪಾಧ್ಯ ಅವರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>