<p><strong>ಬೆಂಗಳೂರು: </strong>ಯುವ ಹಾಗೂ ಸಂಕೀರ್ಣವಾದ ಹೃದ್ರೋಗ ಶಸ್ತ್ರ ಚಿಕಿತ್ಸೆ ನಡೆಸುವಂತಹ ತಜ್ಞ ವೈದ್ಯರ ಅನುಕೂಲಕ್ಕಾಗಿ ದೇಶದಲ್ಲಿಯೇ ಇದೇ ಪ್ರಥಮ ಬಾರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಹೃದ್ರೋಗ ಶಸ್ತ್ರ ಚಿಕಿತ್ಸಾ ಪ್ರಯೋಗಾಲಯವನ್ನು ಪ್ರಾರಂಭಿಸಲಾಗಿದೆ.<br /> <br /> ಈ ಪ್ರಯೋಗಾಲಯದಲ್ಲಿ ಏಕಕಾಲದಲ್ಲಿ 40 ಮಂದಿ ವೈದ್ಯರಿಗೆ ಪ್ರಾಯೋಗಿಕವಾಗಿ ಹೃದ್ರೋಗ ಶಸ್ತ್ರ ಚಿಕಿತ್ಸೆ ತರಬೇತಿ ನೀಡುವಂತಹ ಸೌಲಭ್ಯವಿದೆ.ಶುಕ್ರವಾರ ಪ್ರಯೋಗಾಲಯವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದ ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಅಧ್ಯಕ್ಷ ಡಾ. ಶ್ರೀನಾಥ್ರೆಡ್ಡಿ, `ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಹೆಚ್ಚಿನ ಜನತೆ ಹೃದ್ರೋಗ, ಕ್ಯಾನ್ಸರ್, ಮಧುಮೇಹದಂತಹ ಕಾಯಿಲೆಗಳಿಗೆ ಗುರಿಯಾಗುತ್ತಿರುವ ಸಂದರ್ಭದಲ್ಲಿ ಇಂತಹ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಪ್ರಯೋಗಾಲಯಗಳ ಸ್ಥಾಪನೆ ಅತ್ಯವಶ್ಯ~ ಎಂದರು.<br /> <br /> `ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ದೇಶದಲ್ಲಿಯೂ ಇಂದು ಇಂತಹ ಪ್ರಯೋಗಾಲಯಗಳನ್ನು ಪ್ರಾರಂಭಿಸಲು ಸಾಧ್ಯವಾಗಿದೆ. ಇವುಗಳ ಪ್ರಯೋಜನ ಪಡೆಯುವ ತಜ್ಞ ವೈದ್ಯರು ಅದನ್ನು ಸಾಮಾನ್ಯ ಜನರ ಸೇವೆಗೆ ಬಳಸಲು ಸಹಕಾರಿ ಎನಿಸಿದೆ~ ಎಂದರು.<br /> <br /> ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಆಸ್ಪತ್ರೆಯಲ್ಲಿ ಮಂಡಳಿಯ ಪ್ರಾದೇಶಿಕ ಕಚೇರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುತ್ತದೆ ಎಂದರು.ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಬಿಪಿನ್ ಬಾತ್ರಾ, `ಬೆಂಗಳೂರಿನಲ್ಲಿ ಮಂಡಳಿಯ ಪ್ರಾದೇಶಿಕ ಕಚೇರಿ ಪ್ರಾರಂಭವಾಗಲಿರುವುದರಿಂದ ಸ್ಥಳೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳೊಂದಿಗೆ ಸೌಹಾರ್ದ ಸಂಬಂಧ ಬೆಳೆಸುವುದರ ಜತೆಗೆ, ಸುಲಭವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಲಿದೆ~ ಎಂದರು.<br /> <br /> ನಾರಾಯಣ ಹೃದಯಾಲಯದ ಅಧ್ಯಕ್ಷ ಡಾ. ದೇವಿಶೆಟ್ಟಿ ಮಾತನಾಡಿ, `ನಾನು ವೈದ್ಯಕೀಯ ಶಿಕ್ಷಣ ಮುಗಿಸಿದ ನಂತರ ಇಂಗ್ಲೆಂಡ್ನಲ್ಲಿ ಇಂತಹ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಪ್ರಯೋಗಾಲಯದಲ್ಲಿ ತರಬೇತಿ ಪಡೆದಿದ್ದೆ. ಭಾರತದಲ್ಲಿಯೂ ಇಂತಹ ಪ್ರಯೋಗಾಲಯ ಸ್ಥಾಪಿಸಬೇಕೆಂಬ ಅಂದಿನ ನನ್ನ ಕನಸು ಇದೀಗ ನನಸಾಗಿದೆ~ ಎಂದರು.<br /> <br /> ನಾರಾಯಣ ಹೃದಯಾಲಯದ ತಜ್ಞ ವೈದ್ಯರಾದ ಡಾ. ಕಾಲಿನ್ ಜಾನ್, ಡಾ. ಮುರಳೀಧರ್, ಪ್ರೊ. ಜೈರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<p><br /> </p>.<p><br /> </p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಯುವ ಹಾಗೂ ಸಂಕೀರ್ಣವಾದ ಹೃದ್ರೋಗ ಶಸ್ತ್ರ ಚಿಕಿತ್ಸೆ ನಡೆಸುವಂತಹ ತಜ್ಞ ವೈದ್ಯರ ಅನುಕೂಲಕ್ಕಾಗಿ ದೇಶದಲ್ಲಿಯೇ ಇದೇ ಪ್ರಥಮ ಬಾರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಹೃದ್ರೋಗ ಶಸ್ತ್ರ ಚಿಕಿತ್ಸಾ ಪ್ರಯೋಗಾಲಯವನ್ನು ಪ್ರಾರಂಭಿಸಲಾಗಿದೆ.<br /> <br /> ಈ ಪ್ರಯೋಗಾಲಯದಲ್ಲಿ ಏಕಕಾಲದಲ್ಲಿ 40 ಮಂದಿ ವೈದ್ಯರಿಗೆ ಪ್ರಾಯೋಗಿಕವಾಗಿ ಹೃದ್ರೋಗ ಶಸ್ತ್ರ ಚಿಕಿತ್ಸೆ ತರಬೇತಿ ನೀಡುವಂತಹ ಸೌಲಭ್ಯವಿದೆ.ಶುಕ್ರವಾರ ಪ್ರಯೋಗಾಲಯವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದ ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಅಧ್ಯಕ್ಷ ಡಾ. ಶ್ರೀನಾಥ್ರೆಡ್ಡಿ, `ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಹೆಚ್ಚಿನ ಜನತೆ ಹೃದ್ರೋಗ, ಕ್ಯಾನ್ಸರ್, ಮಧುಮೇಹದಂತಹ ಕಾಯಿಲೆಗಳಿಗೆ ಗುರಿಯಾಗುತ್ತಿರುವ ಸಂದರ್ಭದಲ್ಲಿ ಇಂತಹ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಪ್ರಯೋಗಾಲಯಗಳ ಸ್ಥಾಪನೆ ಅತ್ಯವಶ್ಯ~ ಎಂದರು.<br /> <br /> `ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ದೇಶದಲ್ಲಿಯೂ ಇಂದು ಇಂತಹ ಪ್ರಯೋಗಾಲಯಗಳನ್ನು ಪ್ರಾರಂಭಿಸಲು ಸಾಧ್ಯವಾಗಿದೆ. ಇವುಗಳ ಪ್ರಯೋಜನ ಪಡೆಯುವ ತಜ್ಞ ವೈದ್ಯರು ಅದನ್ನು ಸಾಮಾನ್ಯ ಜನರ ಸೇವೆಗೆ ಬಳಸಲು ಸಹಕಾರಿ ಎನಿಸಿದೆ~ ಎಂದರು.<br /> <br /> ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಆಸ್ಪತ್ರೆಯಲ್ಲಿ ಮಂಡಳಿಯ ಪ್ರಾದೇಶಿಕ ಕಚೇರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುತ್ತದೆ ಎಂದರು.ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಬಿಪಿನ್ ಬಾತ್ರಾ, `ಬೆಂಗಳೂರಿನಲ್ಲಿ ಮಂಡಳಿಯ ಪ್ರಾದೇಶಿಕ ಕಚೇರಿ ಪ್ರಾರಂಭವಾಗಲಿರುವುದರಿಂದ ಸ್ಥಳೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳೊಂದಿಗೆ ಸೌಹಾರ್ದ ಸಂಬಂಧ ಬೆಳೆಸುವುದರ ಜತೆಗೆ, ಸುಲಭವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಲಿದೆ~ ಎಂದರು.<br /> <br /> ನಾರಾಯಣ ಹೃದಯಾಲಯದ ಅಧ್ಯಕ್ಷ ಡಾ. ದೇವಿಶೆಟ್ಟಿ ಮಾತನಾಡಿ, `ನಾನು ವೈದ್ಯಕೀಯ ಶಿಕ್ಷಣ ಮುಗಿಸಿದ ನಂತರ ಇಂಗ್ಲೆಂಡ್ನಲ್ಲಿ ಇಂತಹ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಪ್ರಯೋಗಾಲಯದಲ್ಲಿ ತರಬೇತಿ ಪಡೆದಿದ್ದೆ. ಭಾರತದಲ್ಲಿಯೂ ಇಂತಹ ಪ್ರಯೋಗಾಲಯ ಸ್ಥಾಪಿಸಬೇಕೆಂಬ ಅಂದಿನ ನನ್ನ ಕನಸು ಇದೀಗ ನನಸಾಗಿದೆ~ ಎಂದರು.<br /> <br /> ನಾರಾಯಣ ಹೃದಯಾಲಯದ ತಜ್ಞ ವೈದ್ಯರಾದ ಡಾ. ಕಾಲಿನ್ ಜಾನ್, ಡಾ. ಮುರಳೀಧರ್, ಪ್ರೊ. ಜೈರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<p><br /> </p>.<p><br /> </p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>