<p>ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ನಾರಾಯಣಪುರ ಗ್ರಾಮದ ಬಳಿ ಹೇಮಾವತಿ ನಾಲೆ ಒಡೆಯಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಅಸಡ್ಡೆಯೇ ಕಾರಣ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ.<br /> <br /> ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, `ರಾಜಕೀಯ ಒತ್ತಡಕ್ಕೆ ಮಣಿದು ನಾಲೆಯ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ನೀರು ಹರಿಸಿದ್ದೆೀ ನಾಲೆ ಒಡೆಯಲು ಕಾರಣ. ಯಾರ ಒತ್ತಡದಿಂದ ಈ ಕೃತ್ಯ ನಡೆಸಿದ್ದಾರೆ ಎಂಬ ಬಗ್ಗೆ ತನಿಖೆ ಆಗಬೇಕು~ ಎಂದರು.<br /> <br /> ನಾಲೆ ಒಡೆದಿದ್ದರಿಂದ ಸುಮಾರು 400 ಎಕರೆಗೂ ಹೆಚ್ಚಿನ ಬೆಳೆ ನಷ್ಟವಾಗಿದೆ. ತಹಶೀಲ್ದಾರರು, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳತಂಡ ರಚಿಸಿ ಸ್ಥಳಪರಿಶೀಲನೆ ನಡೆಸಬೇಕು ಮತ್ತು ರೈತರಿಗೆ ಆಗಿರುವ ನಷ್ಟವನ್ನು ಭರಿಸಿಕೊಡಬೇಕು ಎಂದು ದೇವೇಗೌಡ ಒತ್ತಾಯಿಸಿದರು. <br /> <br /> ಇದೇ 16ರಂದು ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಅಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಲಿದ್ದು, ಸ್ಥಳಕ್ಕೆ ಬರುವಂತೆ ಅವರನ್ನೂ ವಿನಂತಿಸುತ್ತೇನೆ~ ಎಂದರು.<br /> <br /> ಇದಕ್ಕೂ ಮುನ್ನ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ ಗೌಡರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.<br /> <strong><br /> ದೇವರು ಚೆನ್ನಾಗಿಟ್ಟಿರಲಿ</strong><br /> `ನನ್ನ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಪಕ್ಷ ಬಿಡುತ್ತಿರುವ ಮುಖಂಡರಿಗೆ ದೇವರು ಒಳ್ಳೆಯದು ಮಾಡಲಿ~ ಎಂದು ಶಾಸಕ ಎಚ್.ಡಿ. ರೇವಣ್ಣ ಹಾರೈಸಿದರು.<br /> <br /> ಮಾಜಿ ಶಾಸಕ ವಿಶ್ವನಾಥ್ ಹಾಗೂ ಹಾಲಿ ಶಾಸಕ ಸಿ.ಎಸ್. ಪುಟ್ಟೇಗೌಡ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, `ಪಕ್ಷ ಬಿಡುವವರು ಇಂಥ ಆರೋಪ ಮಾಡುವುದು ಸಾಮಾನ್ಯ.<br /> <br /> ಆದರೆ, ಕಳೆದ ಎರಡು ವರ್ಷಗಳಿಂದ ಆ ಇಬ್ಬರು ಮುಖಂಡರು ಯಾರ್ಯಾರ ಮನೆಗಳಿಗೆ ಹೋಗಿದ್ದಾರೆ, ಯಾರ್ಯಾರಿಗೆ ಮಾಲೆ ಹಾಕಿದ್ದಾರೆ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಅವರಾಗಿಯೇ ಪಕ್ಷ ಬಿಡುತ್ತೇವೆ ಎಂದಾಗ ನಾವೇನು ಮಾಡಲು ಸಾಧ್ಯ ? ಎಂದು ಪ್ರಶ್ನಿಸಿದರು.<br /> <br /> ಚನ್ನರಾಯಪಟ್ಟಣದಲ್ಲಿ ಹೇಮಾವತಿ ನಾಲೆ ಒಡೆದು ಆಗಿರುವ ನಷ್ಟದ ಬಗ್ಗೆ ಅಧ್ಯಯನ ನಡೆಸಲು ಉನ್ನತ ಅಧಿಕಾರಿಗಳ ತಂಡ ರಚಿಸಬೇಕು, ರೈತರಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ರೇವಣ್ಣ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ನಾರಾಯಣಪುರ ಗ್ರಾಮದ ಬಳಿ ಹೇಮಾವತಿ ನಾಲೆ ಒಡೆಯಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಅಸಡ್ಡೆಯೇ ಕಾರಣ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ.<br /> <br /> ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, `ರಾಜಕೀಯ ಒತ್ತಡಕ್ಕೆ ಮಣಿದು ನಾಲೆಯ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ನೀರು ಹರಿಸಿದ್ದೆೀ ನಾಲೆ ಒಡೆಯಲು ಕಾರಣ. ಯಾರ ಒತ್ತಡದಿಂದ ಈ ಕೃತ್ಯ ನಡೆಸಿದ್ದಾರೆ ಎಂಬ ಬಗ್ಗೆ ತನಿಖೆ ಆಗಬೇಕು~ ಎಂದರು.<br /> <br /> ನಾಲೆ ಒಡೆದಿದ್ದರಿಂದ ಸುಮಾರು 400 ಎಕರೆಗೂ ಹೆಚ್ಚಿನ ಬೆಳೆ ನಷ್ಟವಾಗಿದೆ. ತಹಶೀಲ್ದಾರರು, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳತಂಡ ರಚಿಸಿ ಸ್ಥಳಪರಿಶೀಲನೆ ನಡೆಸಬೇಕು ಮತ್ತು ರೈತರಿಗೆ ಆಗಿರುವ ನಷ್ಟವನ್ನು ಭರಿಸಿಕೊಡಬೇಕು ಎಂದು ದೇವೇಗೌಡ ಒತ್ತಾಯಿಸಿದರು. <br /> <br /> ಇದೇ 16ರಂದು ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಅಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಲಿದ್ದು, ಸ್ಥಳಕ್ಕೆ ಬರುವಂತೆ ಅವರನ್ನೂ ವಿನಂತಿಸುತ್ತೇನೆ~ ಎಂದರು.<br /> <br /> ಇದಕ್ಕೂ ಮುನ್ನ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ ಗೌಡರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.<br /> <strong><br /> ದೇವರು ಚೆನ್ನಾಗಿಟ್ಟಿರಲಿ</strong><br /> `ನನ್ನ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಪಕ್ಷ ಬಿಡುತ್ತಿರುವ ಮುಖಂಡರಿಗೆ ದೇವರು ಒಳ್ಳೆಯದು ಮಾಡಲಿ~ ಎಂದು ಶಾಸಕ ಎಚ್.ಡಿ. ರೇವಣ್ಣ ಹಾರೈಸಿದರು.<br /> <br /> ಮಾಜಿ ಶಾಸಕ ವಿಶ್ವನಾಥ್ ಹಾಗೂ ಹಾಲಿ ಶಾಸಕ ಸಿ.ಎಸ್. ಪುಟ್ಟೇಗೌಡ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, `ಪಕ್ಷ ಬಿಡುವವರು ಇಂಥ ಆರೋಪ ಮಾಡುವುದು ಸಾಮಾನ್ಯ.<br /> <br /> ಆದರೆ, ಕಳೆದ ಎರಡು ವರ್ಷಗಳಿಂದ ಆ ಇಬ್ಬರು ಮುಖಂಡರು ಯಾರ್ಯಾರ ಮನೆಗಳಿಗೆ ಹೋಗಿದ್ದಾರೆ, ಯಾರ್ಯಾರಿಗೆ ಮಾಲೆ ಹಾಕಿದ್ದಾರೆ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಅವರಾಗಿಯೇ ಪಕ್ಷ ಬಿಡುತ್ತೇವೆ ಎಂದಾಗ ನಾವೇನು ಮಾಡಲು ಸಾಧ್ಯ ? ಎಂದು ಪ್ರಶ್ನಿಸಿದರು.<br /> <br /> ಚನ್ನರಾಯಪಟ್ಟಣದಲ್ಲಿ ಹೇಮಾವತಿ ನಾಲೆ ಒಡೆದು ಆಗಿರುವ ನಷ್ಟದ ಬಗ್ಗೆ ಅಧ್ಯಯನ ನಡೆಸಲು ಉನ್ನತ ಅಧಿಕಾರಿಗಳ ತಂಡ ರಚಿಸಬೇಕು, ರೈತರಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ರೇವಣ್ಣ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>