<p>ಮಡಿಕೇರಿ: ಶ್ರೀಮಂಗಲ ಭಾಗದಲ್ಲಿ ಮಳೆಗಾಲದಲ್ಲಿ ಪ್ರವಾಹ ಭೀತಿಯನ್ನು ತಡೆಗಟ್ಟಲು ಈ ಹಿಂದೆಯೇ ನಿರ್ಮಿಸಿದ್ದ ನಾಲೆ ಜಾಗದ ಒತ್ತುವರಿ ತೆರವಿಗೆ ಹೈಕೋರ್ಟ್ ಸೂಚನೆ ನೀಡಿದ್ದರೂ, ಈ ಬಗ್ಗೆ ಕ್ರಮಗೊಳ್ಳದ ಜಿಲ್ಲಾಡಳಿತದ ವಿರುದ್ಧ ಪುನಃ ಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಶ್ರೀಮಂಗಲ– ಶೆಟ್ಟಿಗೇರಿಯ ರೇವತಿ ಚಂಗಪ್ಪ ತಿಳಿಸಿದರು.<br /> <br /> ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹ ಭೀತಿಯಿಂದ ತತ್ತರಿಸುತ್ತಿದ್ದ ಜನರನ್ನು ರಕ್ಷಿಸಲು ಈ ಹಿಂದೆಯೇ ನಾಲೆ ನಿರ್ಮಿಸಿ ಮಳೆಯ ನೀರು ಲಕ್ಷ್ಮಣ ತೀರ್ಥ ನದಿಗೆ ಹೋಗುವಂತೆ ಮಾಡಲಾಗಿತ್ತು ಎಂದರು. <br /> <br /> ಆದರೆ ಇತ್ತೀಚಿನ ದಿನಗಳಲ್ಲಿ ಹಲವು ವ್ಯಕ್ತಿಗಳು ಈ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ತೆರವುಗೊಳಿಸುವ ಭರವಸೆಗಳು ಈಡೇರದ ಹಿನ್ನೆಲೆಯಲ್ಲಿ ಹೈಕೋರ್ಟ್ಗೆ 2012ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು.<br /> <br /> ಇದನ್ನು ಪರಿಗಣಿಸಿದ ನ್ಯಾಯಾಲಯ, ಒತ್ತುವರಿ ಜಾಗದ ಸರ್ವೆಗೆ ಸೂಚಿಸಿದ್ದರಿಂದ ಆಗಿನ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಸರ್ವೆ ಕಾರ್ಯ ಮಾಡಿಸಿ, ಈ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎಂದರು.<br /> <br /> ಈ ಮಾಹಿತಿ ಆಧಾರ ಮೇಲೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ಇದುವರೆಗೆ ಜಿಲ್ಲಾಡಳಿತ ಯಾವುದೇ ಕ್ರಮಕೈಗೊಂಡಿಲ್ಲ. ಡಿ.23ರಂದು ನಡೆಯಲಿರುವ ಜಿಲ್ಲಾಧಿಕಾರಿ ಅವರ ಕೋರ್ಟ್ಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ ಎಂದರು.<br /> <br /> ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಉಲ್ಲಂಘಿಸಿರುವ ಜಿಲ್ಲಾಡಳಿತದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.<br /> <br /> ಶ್ರೀಮಂಗಲ ಕಾವೇರಿ ಬಡಾವಣೆಯ ನಿವಾಸಿಗಳಾದ ಶ್ರೀಪತಿ, ಕೆ.ಸಿ. ದೇವಯ್ಯ, ವಾಸು, ಕಾವೇರಮ್ಮ, ಶಾರದಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಶ್ರೀಮಂಗಲ ಭಾಗದಲ್ಲಿ ಮಳೆಗಾಲದಲ್ಲಿ ಪ್ರವಾಹ ಭೀತಿಯನ್ನು ತಡೆಗಟ್ಟಲು ಈ ಹಿಂದೆಯೇ ನಿರ್ಮಿಸಿದ್ದ ನಾಲೆ ಜಾಗದ ಒತ್ತುವರಿ ತೆರವಿಗೆ ಹೈಕೋರ್ಟ್ ಸೂಚನೆ ನೀಡಿದ್ದರೂ, ಈ ಬಗ್ಗೆ ಕ್ರಮಗೊಳ್ಳದ ಜಿಲ್ಲಾಡಳಿತದ ವಿರುದ್ಧ ಪುನಃ ಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಶ್ರೀಮಂಗಲ– ಶೆಟ್ಟಿಗೇರಿಯ ರೇವತಿ ಚಂಗಪ್ಪ ತಿಳಿಸಿದರು.<br /> <br /> ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹ ಭೀತಿಯಿಂದ ತತ್ತರಿಸುತ್ತಿದ್ದ ಜನರನ್ನು ರಕ್ಷಿಸಲು ಈ ಹಿಂದೆಯೇ ನಾಲೆ ನಿರ್ಮಿಸಿ ಮಳೆಯ ನೀರು ಲಕ್ಷ್ಮಣ ತೀರ್ಥ ನದಿಗೆ ಹೋಗುವಂತೆ ಮಾಡಲಾಗಿತ್ತು ಎಂದರು. <br /> <br /> ಆದರೆ ಇತ್ತೀಚಿನ ದಿನಗಳಲ್ಲಿ ಹಲವು ವ್ಯಕ್ತಿಗಳು ಈ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ತೆರವುಗೊಳಿಸುವ ಭರವಸೆಗಳು ಈಡೇರದ ಹಿನ್ನೆಲೆಯಲ್ಲಿ ಹೈಕೋರ್ಟ್ಗೆ 2012ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು.<br /> <br /> ಇದನ್ನು ಪರಿಗಣಿಸಿದ ನ್ಯಾಯಾಲಯ, ಒತ್ತುವರಿ ಜಾಗದ ಸರ್ವೆಗೆ ಸೂಚಿಸಿದ್ದರಿಂದ ಆಗಿನ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಸರ್ವೆ ಕಾರ್ಯ ಮಾಡಿಸಿ, ಈ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎಂದರು.<br /> <br /> ಈ ಮಾಹಿತಿ ಆಧಾರ ಮೇಲೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ಇದುವರೆಗೆ ಜಿಲ್ಲಾಡಳಿತ ಯಾವುದೇ ಕ್ರಮಕೈಗೊಂಡಿಲ್ಲ. ಡಿ.23ರಂದು ನಡೆಯಲಿರುವ ಜಿಲ್ಲಾಧಿಕಾರಿ ಅವರ ಕೋರ್ಟ್ಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ ಎಂದರು.<br /> <br /> ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಉಲ್ಲಂಘಿಸಿರುವ ಜಿಲ್ಲಾಡಳಿತದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.<br /> <br /> ಶ್ರೀಮಂಗಲ ಕಾವೇರಿ ಬಡಾವಣೆಯ ನಿವಾಸಿಗಳಾದ ಶ್ರೀಪತಿ, ಕೆ.ಸಿ. ದೇವಯ್ಯ, ವಾಸು, ಕಾವೇರಮ್ಮ, ಶಾರದಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>