<p><strong>ಧಾರವಾಡ</strong>: `ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಪಂ.ರಾಜಗುರು ಅವರ ಹೆಸರಿನಲ್ಲಿ ನೀಡುವ ರಾಷ್ಟ್ರೀಯ ಸಮ್ಮಾನ ಪ್ರಶಸ್ತಿಯನ್ನು ಈ ಬಾರಿ ದೆಹಲಿಯ ಪ್ರಸಿದ್ಧ ಹಿಂದೂಸ್ತಾನಿ ಗಾಯಕರಾದ ಪಂ.ರಾಜನ್ ಹಾಗೂ ಪಂ.ಸಾಜನ್ ಮಿಶ್ರಾ ಅವರಿಗೆ ಪ್ರದಾನ ಮಾಡಲಾಗುವುದು~ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ಶಾಸಕ ಚಂದ್ರಕಾಂತ ಬೆಲ್ಲದ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಆ 24ರಂದು ಇಲ್ಲಿಯ ಡಾ.ಅಣ್ಣಾಜಿರಾವ್ ಶಿರೂರ ರಂಗಮಂದಿರದಲ್ಲಿ ಸಂಜೆ 6ಕ್ಕೆ ರಾಷ್ಟ್ರೀಯ ಸಮ್ಮಾನ ಹಾಗೂ ಹಿಂದೂಸ್ತಾನಿ ಸಂಗೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯ ಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿಂದೂಸ್ತಾನಿ ಸಂಗೀತ ಕ್ಷೇತ್ರದಲ್ಲಿಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಪ್ರಶಸ್ತಿಯು ಈ ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಬಹುಮಾನ ಒಳಗೊಂಡಿದೆ. <br /> <br /> ಪಂ. ಪ್ರಸನ್ನ ಗುಡಿ ಮತ್ತು ವೀಣಾ ಮರಡೂರ ಅವರನ್ನು `ಯುವ ಪ್ರತಿಭೆ~ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯು 25 ಸಾವಿರ ರೂಪಾಯಿಗಳ ನಗದು ಬಹುಮಾನವನ್ನು ಒಳಗೊಂಡಿದೆ. <br /> <br /> ಆ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಮೂರುಸಾವಿರಮಠದ ಗುರು ಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿ ಜಗದೀಶ ಶೆಟ್ಟರ ರಾಷ್ಟ್ರೀಯ ಸಮ್ಮಾನ ಪ್ರಶಸ್ತಿ ಪ್ರದಾನ ಮಾಡುವರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರು ಪಂ.ಬಸವರಾಜ ರಾಜಗುರು ಅವರ ಜೀವನ ಚರಿತ್ರೆ ಒಳಗೊಂಡ ಚಿತ್ರ ಸಂಪುಟ ಬಿಡುಗಡೆ ಮಾಡುವರು ಎಂದರು. <br /> <br /> `ಹಿಂದೂಸ್ತಾನಿ ಸಂಗೀತವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪಂ.ಬಸವರಾಜ ರಾಜಗುರು ಅವರ ಮನೆಯ ಕೊಠಡಿಯನ್ನು ಮರು ನವೀಕರಣ ಮಾಡಲಾಗಿದ್ದು, ಸೆಪ್ಟೆಂಬರ್ 10ರಿಂದ ಸಂಗೀತ ಶಾಲೆ ಆರಂಭವಾಗಲಿದೆ. <br /> <br /> ಟ್ರಸ್ಟ್ ವತಿಯಿಂದ ಒಬ್ಬ ಸಂಗೀತ ಶಿಕ್ಷಕರನ್ನು ನೇಮಕ ಮಾಡಿಕೊಡಬೇಕು ಎಂಬ ಉದ್ದೇಶದಿಂದ ಸದ್ಯದಲ್ಲಿಯೇ ತುರ್ತು ಸಭೆ ಕರೆದು ಯೋಗ್ಯ ಸಂಗೀತ ಶಿಕ್ಷಕರ ನೇಮಕಾತಿಗೆ ಕ್ರಮ ತೆಗೆದು ಕೊಳ್ಳಲಾಗುವುದು~ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಡಿ..ಹಿರೇಗೌಡರ ಹೇಳಿದರು.<br /> <br /> ಟ್ರಸ್ಟ್ನ ಸದಸ್ಯರಾದ ಭಾರತಿದೇವಿ ರಾಜಗುರು, ನಿಜಗುಣ ರಾಜಗುರು, ಪಂ.ಸೋಮನಾಥ ಮರಡೂರ, ಡಾ.ಜಿ.ಎಂ.ಹೆಗಡೆ, ಉದಯ ದೇಸಾಯಿ,ಡಾ.ವಿ.ವಿ.ಪಾವಟೆ ಮತ್ತಿತಿತರರು ಪ್ರತಿಕಾ ಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: `ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಪಂ.ರಾಜಗುರು ಅವರ ಹೆಸರಿನಲ್ಲಿ ನೀಡುವ ರಾಷ್ಟ್ರೀಯ ಸಮ್ಮಾನ ಪ್ರಶಸ್ತಿಯನ್ನು ಈ ಬಾರಿ ದೆಹಲಿಯ ಪ್ರಸಿದ್ಧ ಹಿಂದೂಸ್ತಾನಿ ಗಾಯಕರಾದ ಪಂ.ರಾಜನ್ ಹಾಗೂ ಪಂ.ಸಾಜನ್ ಮಿಶ್ರಾ ಅವರಿಗೆ ಪ್ರದಾನ ಮಾಡಲಾಗುವುದು~ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ಶಾಸಕ ಚಂದ್ರಕಾಂತ ಬೆಲ್ಲದ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಆ 24ರಂದು ಇಲ್ಲಿಯ ಡಾ.ಅಣ್ಣಾಜಿರಾವ್ ಶಿರೂರ ರಂಗಮಂದಿರದಲ್ಲಿ ಸಂಜೆ 6ಕ್ಕೆ ರಾಷ್ಟ್ರೀಯ ಸಮ್ಮಾನ ಹಾಗೂ ಹಿಂದೂಸ್ತಾನಿ ಸಂಗೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯ ಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿಂದೂಸ್ತಾನಿ ಸಂಗೀತ ಕ್ಷೇತ್ರದಲ್ಲಿಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಪ್ರಶಸ್ತಿಯು ಈ ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಬಹುಮಾನ ಒಳಗೊಂಡಿದೆ. <br /> <br /> ಪಂ. ಪ್ರಸನ್ನ ಗುಡಿ ಮತ್ತು ವೀಣಾ ಮರಡೂರ ಅವರನ್ನು `ಯುವ ಪ್ರತಿಭೆ~ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯು 25 ಸಾವಿರ ರೂಪಾಯಿಗಳ ನಗದು ಬಹುಮಾನವನ್ನು ಒಳಗೊಂಡಿದೆ. <br /> <br /> ಆ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಮೂರುಸಾವಿರಮಠದ ಗುರು ಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿ ಜಗದೀಶ ಶೆಟ್ಟರ ರಾಷ್ಟ್ರೀಯ ಸಮ್ಮಾನ ಪ್ರಶಸ್ತಿ ಪ್ರದಾನ ಮಾಡುವರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರು ಪಂ.ಬಸವರಾಜ ರಾಜಗುರು ಅವರ ಜೀವನ ಚರಿತ್ರೆ ಒಳಗೊಂಡ ಚಿತ್ರ ಸಂಪುಟ ಬಿಡುಗಡೆ ಮಾಡುವರು ಎಂದರು. <br /> <br /> `ಹಿಂದೂಸ್ತಾನಿ ಸಂಗೀತವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪಂ.ಬಸವರಾಜ ರಾಜಗುರು ಅವರ ಮನೆಯ ಕೊಠಡಿಯನ್ನು ಮರು ನವೀಕರಣ ಮಾಡಲಾಗಿದ್ದು, ಸೆಪ್ಟೆಂಬರ್ 10ರಿಂದ ಸಂಗೀತ ಶಾಲೆ ಆರಂಭವಾಗಲಿದೆ. <br /> <br /> ಟ್ರಸ್ಟ್ ವತಿಯಿಂದ ಒಬ್ಬ ಸಂಗೀತ ಶಿಕ್ಷಕರನ್ನು ನೇಮಕ ಮಾಡಿಕೊಡಬೇಕು ಎಂಬ ಉದ್ದೇಶದಿಂದ ಸದ್ಯದಲ್ಲಿಯೇ ತುರ್ತು ಸಭೆ ಕರೆದು ಯೋಗ್ಯ ಸಂಗೀತ ಶಿಕ್ಷಕರ ನೇಮಕಾತಿಗೆ ಕ್ರಮ ತೆಗೆದು ಕೊಳ್ಳಲಾಗುವುದು~ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಡಿ..ಹಿರೇಗೌಡರ ಹೇಳಿದರು.<br /> <br /> ಟ್ರಸ್ಟ್ನ ಸದಸ್ಯರಾದ ಭಾರತಿದೇವಿ ರಾಜಗುರು, ನಿಜಗುಣ ರಾಜಗುರು, ಪಂ.ಸೋಮನಾಥ ಮರಡೂರ, ಡಾ.ಜಿ.ಎಂ.ಹೆಗಡೆ, ಉದಯ ದೇಸಾಯಿ,ಡಾ.ವಿ.ವಿ.ಪಾವಟೆ ಮತ್ತಿತಿತರರು ಪ್ರತಿಕಾ ಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>