<p><strong>ಬೆಂಗಳೂರು:</strong> ‘ಕರ್ನಾಟಕ ವಾಯ್ಸ್ ಆಫ್ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ಸಂಸ್ಥೆಯ ವತಿಯಿಂದ ಇದೇ ಶನಿವಾರ (ಡಿ. 21) ಅಂಗವಿಕಲರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎನ್.ಸುಧೀಂದ್ರ ಹೇಳಿದರು.<br /> <br /> ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದರು.<br /> <br /> ರಾಜ್ಯದ ವಿವಿಧ ಜಿಲ್ಲೆಗಳಿಂದ 10 ಸಾವಿರಕ್ಕೂ ಹೆಚ್ಚು ಅಂಗವಿಕಲರು ಭಾಗವಹಿಸಲಿದ್ದಾರೆ ಎಂದರು.<br /> <br /> ಅಂಗವಿಕಲರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು, ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಪ್ರಶಸ್ತಿ ಪಡೆದ ಅಂಗವಿಕಲರಿಗೆ ಪ್ರತಿ ತಿಂಗಳು ರೂ10 ಸಾವಿರ ಗೌರವಧನ ನೀಡಬೇಕು, ವಿವಿಧ ಇಲಾಖೆಗಳಲ್ಲಿ ದಿನಗೂಲಿ, ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಅಂಗವಿಕಲರ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ನಾಟಕ ವಾಯ್ಸ್ ಆಫ್ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ಸಂಸ್ಥೆಯ ವತಿಯಿಂದ ಇದೇ ಶನಿವಾರ (ಡಿ. 21) ಅಂಗವಿಕಲರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎನ್.ಸುಧೀಂದ್ರ ಹೇಳಿದರು.<br /> <br /> ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದರು.<br /> <br /> ರಾಜ್ಯದ ವಿವಿಧ ಜಿಲ್ಲೆಗಳಿಂದ 10 ಸಾವಿರಕ್ಕೂ ಹೆಚ್ಚು ಅಂಗವಿಕಲರು ಭಾಗವಹಿಸಲಿದ್ದಾರೆ ಎಂದರು.<br /> <br /> ಅಂಗವಿಕಲರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು, ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಪ್ರಶಸ್ತಿ ಪಡೆದ ಅಂಗವಿಕಲರಿಗೆ ಪ್ರತಿ ತಿಂಗಳು ರೂ10 ಸಾವಿರ ಗೌರವಧನ ನೀಡಬೇಕು, ವಿವಿಧ ಇಲಾಖೆಗಳಲ್ಲಿ ದಿನಗೂಲಿ, ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಅಂಗವಿಕಲರ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>