<p><strong>ಮಡಿಕೇರಿ:</strong> ಜನವರಿ ಏಳರಿಂದ ಮೂರು ದಿನಗಳ ಕಾಲ ಮಡಿಕೇರಿಯಲ್ಲಿ ನಡೆಯ ಲಿರುವ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಬುಧವಾರ (ಡಿ.4) ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಟಿ.ಪಿ. ರಮೇಶ್ ತಿಳಿಸಿದರು.<br /> <br /> ಬೆಂಗಳೂರಿನಲ್ಲಿರುವ ಕಸಾಪ ಕೇಂದ್ರ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ 11ಕ್ಕೆ ಆರಂಭಗೊಳ್ಳಲಿರುವ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು. </p>.<p><strong>ಸಿದ್ಧತೆ ಅಬಾಧಿತ: </strong> ಮಡಿಕೇರಿ ನಗರಸಭೆ ಚುನಾವಣೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿವಿಧ ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರಸಭೆ ವ್ಯಾಪ್ತಿಯ ಅಧಿಕಾರಿಗಳು ತಟಸ್ಥರಾಗುತ್ತಾರೆ. ಜಿಲ್ಲಾಮಟ್ಟದ ಅಧಿಕಾರಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಮೇಶ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದರು.</p>.<p><strong>ನಾ. ಡಿಸೋಜ ಅಧ್ಯಕ್ಷ?<br /> ಬೆಂಗಳೂರು ವರದಿ:</strong> ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ, ಸಾಹಿತಿಗಳಾದ ನಾ.ಡಿಸೋಜ, ಟಿ.ವಿ. ವೆಂಕಟಾಚಲಶಾಸ್ತ್ರಿ, ಡಾ.ಹಂ.ಪ. ನಾಗರಾಜಯ್ಯ, ಚಂದ್ರಶೇಖರ ಕಂಬಾರ, ಸಂಶೋಧಕ ಡಾ.ಎಂ.ಎಂ. ಕಲ್ಬುರ್ಗಿ ಅವರ ಹೆಸರು ಕೇಳಿಬರುತ್ತಿವೆ. ಇವರಲ್ಲಿ ನಾ. ಡಿಸೋಜ ಅವರ ಹೆಸರು ಈ ಬಾರಿ ಬಲವಾಗಿ ಕೇಳಿಬರುತ್ತಿದೆ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಜನವರಿ ಏಳರಿಂದ ಮೂರು ದಿನಗಳ ಕಾಲ ಮಡಿಕೇರಿಯಲ್ಲಿ ನಡೆಯ ಲಿರುವ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಬುಧವಾರ (ಡಿ.4) ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಟಿ.ಪಿ. ರಮೇಶ್ ತಿಳಿಸಿದರು.<br /> <br /> ಬೆಂಗಳೂರಿನಲ್ಲಿರುವ ಕಸಾಪ ಕೇಂದ್ರ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ 11ಕ್ಕೆ ಆರಂಭಗೊಳ್ಳಲಿರುವ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು. </p>.<p><strong>ಸಿದ್ಧತೆ ಅಬಾಧಿತ: </strong> ಮಡಿಕೇರಿ ನಗರಸಭೆ ಚುನಾವಣೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿವಿಧ ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರಸಭೆ ವ್ಯಾಪ್ತಿಯ ಅಧಿಕಾರಿಗಳು ತಟಸ್ಥರಾಗುತ್ತಾರೆ. ಜಿಲ್ಲಾಮಟ್ಟದ ಅಧಿಕಾರಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಮೇಶ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದರು.</p>.<p><strong>ನಾ. ಡಿಸೋಜ ಅಧ್ಯಕ್ಷ?<br /> ಬೆಂಗಳೂರು ವರದಿ:</strong> ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ, ಸಾಹಿತಿಗಳಾದ ನಾ.ಡಿಸೋಜ, ಟಿ.ವಿ. ವೆಂಕಟಾಚಲಶಾಸ್ತ್ರಿ, ಡಾ.ಹಂ.ಪ. ನಾಗರಾಜಯ್ಯ, ಚಂದ್ರಶೇಖರ ಕಂಬಾರ, ಸಂಶೋಧಕ ಡಾ.ಎಂ.ಎಂ. ಕಲ್ಬುರ್ಗಿ ಅವರ ಹೆಸರು ಕೇಳಿಬರುತ್ತಿವೆ. ಇವರಲ್ಲಿ ನಾ. ಡಿಸೋಜ ಅವರ ಹೆಸರು ಈ ಬಾರಿ ಬಲವಾಗಿ ಕೇಳಿಬರುತ್ತಿದೆ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>