<p><strong>ನವದೆಹಲಿ (ಐಎಎನ್ಎಸ್)</strong>: ಕೋಮು ಹಿಂಸಾಚಾರ ಮಸೂದೆ ಕುರಿತಂತೆ ಅಪಸ್ವರಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಪ್ರಧಾನಿ ಮನಮೋಹನ್ ಸಿಂಗ್ ಅವರು ನಾವು ಶಾಸಕಾಂಗದ ಎಲ್ಲ ಮಹತ್ವದ ವಿಷಯಗಳಲ್ಲಿ ಒಮ್ಮತ ಮೂಡಿಸಲು ಪ್ರಯತ್ನಿಸುತ್ತೇವೆ ಎಂದು ಗುರುವಾರ ಹೇಳಿದರು.</p>.<p>ಕೊಮು ಹಿಂಸಾಚಾರ ಮಸೂದೆ ಕುರಿತು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು `ವ್ಯಾಪಕ ಪರಾಮರ್ಶೆ' ನಡೆಯಲಿ ಎಂದು ಪ್ರಧಾನಿಯವರಿಗೆ ಪತ್ರ ಬರೆದಿರುವ ಬೆನ್ನಲ್ಲೇ, ಸಿಂಗ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.</p>.<p>ಗುರುವಾರದಿಂದ ಪ್ರಾರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ ಸಿಂಗ್ ಅವರು ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಮಸೂದೆಗೆ ಮೋದಿ ಅವರು ವಿರೋಧ ವ್ಯಕ್ತಪಡಿಸಿದ್ದಾರಲ್ಲ ಎಂಬ ಪ್ರಶ್ನೆಗೆ `ಶಾಸಕಾಂಗದ ಎಲ್ಲ ಮಹತ್ವದ ವಿಷಯಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತ ಮೂಡಿಸುವುದು ನಮ್ಮ ಪ್ರಯತ್ನವಾಗಿದೆ' ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್)</strong>: ಕೋಮು ಹಿಂಸಾಚಾರ ಮಸೂದೆ ಕುರಿತಂತೆ ಅಪಸ್ವರಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಪ್ರಧಾನಿ ಮನಮೋಹನ್ ಸಿಂಗ್ ಅವರು ನಾವು ಶಾಸಕಾಂಗದ ಎಲ್ಲ ಮಹತ್ವದ ವಿಷಯಗಳಲ್ಲಿ ಒಮ್ಮತ ಮೂಡಿಸಲು ಪ್ರಯತ್ನಿಸುತ್ತೇವೆ ಎಂದು ಗುರುವಾರ ಹೇಳಿದರು.</p>.<p>ಕೊಮು ಹಿಂಸಾಚಾರ ಮಸೂದೆ ಕುರಿತು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು `ವ್ಯಾಪಕ ಪರಾಮರ್ಶೆ' ನಡೆಯಲಿ ಎಂದು ಪ್ರಧಾನಿಯವರಿಗೆ ಪತ್ರ ಬರೆದಿರುವ ಬೆನ್ನಲ್ಲೇ, ಸಿಂಗ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.</p>.<p>ಗುರುವಾರದಿಂದ ಪ್ರಾರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ ಸಿಂಗ್ ಅವರು ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಮಸೂದೆಗೆ ಮೋದಿ ಅವರು ವಿರೋಧ ವ್ಯಕ್ತಪಡಿಸಿದ್ದಾರಲ್ಲ ಎಂಬ ಪ್ರಶ್ನೆಗೆ `ಶಾಸಕಾಂಗದ ಎಲ್ಲ ಮಹತ್ವದ ವಿಷಯಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತ ಮೂಡಿಸುವುದು ನಮ್ಮ ಪ್ರಯತ್ನವಾಗಿದೆ' ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>