<p>ಮೈಸೂರು: ರಾಜ್ಯದ ನಿಗಮ ಮಂಡಳಿಗಳಿಗೆ ಯಾವುದೇ ಕಾರಣಕ್ಕೂ ಶಾಸಕರನ್ನು ನೇಮಕ ಮಾಡಬಾರದು. ನಿಗಮ-ಮಂಡಳಿಗೆ ಶಾಸಕರನ್ನು ನೇಮಿಸದೇ ಇರುವ ಪಕ್ಷದ ವಿಚಾರ ಸ್ವಾಗತಾರ್ಹ ಎಂದು ಸಂಸದ ಎಚ್. ವಿಶ್ವನಾಥ್ ಹೇಳಿದರು.<br /> <br /> `ನಿಗಮ-ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡಬೇಕು. ಅದರಲ್ಲೂ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಅಭಿವೃದ್ಧಿ ಕೆಲಸಗಳು ವೇಗ ಪಡೆಯುತ್ತವೆ. 1989ರಲ್ಲಿ ವೀರೇಂದ್ರ ಪಾಟೀಲ ಮುಖ್ಯಮಂತ್ರಿಯಾಗಿದ್ದಾಗ, ಅಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಹಾಗೆಯೇ ಮಾಡಬೇಕು' ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಲಹೆ ನೀಡಿದರು.<br /> <br /> `ಅನುಭವಿ ಮಂತ್ರಿಗಳನ್ನು ಬಳಸಿಕೊಂಡು ಜನರ ಆಶಯಗಳಿಗೆ ತಕ್ಕಂತೆ ಕೆಲಸ ನಿರ್ವಹಿಸುವ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳ ಬೇಕು. ರಾಜ್ಯದಲ್ಲಿನ ಭ್ರಷ್ಟಾಚಾರ ಸಹಿಸದ ಮತದಾರರು ಈ ಬಾರಿ ಕಾಂಗ್ರೆಸ್ಗೆ ಬಹುಮತ ನೀಡಿದ್ದಾರೆ. ಹೀಗಾಗಿ, ಎಲ್ಲ ಸಚಿವರು, ಶಾಸಕರು ಇದನ್ನು ಅರ್ಥಮಾಡಿಕೊಂಡು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಅಭಿವೃದ್ಧಿ ಕುರಿತಂತೆ ವಿಸ್ತೃತ ಚರ್ಚೆ ನಡೆಸಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ರಾಜ್ಯದ ನಿಗಮ ಮಂಡಳಿಗಳಿಗೆ ಯಾವುದೇ ಕಾರಣಕ್ಕೂ ಶಾಸಕರನ್ನು ನೇಮಕ ಮಾಡಬಾರದು. ನಿಗಮ-ಮಂಡಳಿಗೆ ಶಾಸಕರನ್ನು ನೇಮಿಸದೇ ಇರುವ ಪಕ್ಷದ ವಿಚಾರ ಸ್ವಾಗತಾರ್ಹ ಎಂದು ಸಂಸದ ಎಚ್. ವಿಶ್ವನಾಥ್ ಹೇಳಿದರು.<br /> <br /> `ನಿಗಮ-ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡಬೇಕು. ಅದರಲ್ಲೂ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಅಭಿವೃದ್ಧಿ ಕೆಲಸಗಳು ವೇಗ ಪಡೆಯುತ್ತವೆ. 1989ರಲ್ಲಿ ವೀರೇಂದ್ರ ಪಾಟೀಲ ಮುಖ್ಯಮಂತ್ರಿಯಾಗಿದ್ದಾಗ, ಅಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಹಾಗೆಯೇ ಮಾಡಬೇಕು' ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಲಹೆ ನೀಡಿದರು.<br /> <br /> `ಅನುಭವಿ ಮಂತ್ರಿಗಳನ್ನು ಬಳಸಿಕೊಂಡು ಜನರ ಆಶಯಗಳಿಗೆ ತಕ್ಕಂತೆ ಕೆಲಸ ನಿರ್ವಹಿಸುವ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳ ಬೇಕು. ರಾಜ್ಯದಲ್ಲಿನ ಭ್ರಷ್ಟಾಚಾರ ಸಹಿಸದ ಮತದಾರರು ಈ ಬಾರಿ ಕಾಂಗ್ರೆಸ್ಗೆ ಬಹುಮತ ನೀಡಿದ್ದಾರೆ. ಹೀಗಾಗಿ, ಎಲ್ಲ ಸಚಿವರು, ಶಾಸಕರು ಇದನ್ನು ಅರ್ಥಮಾಡಿಕೊಂಡು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಅಭಿವೃದ್ಧಿ ಕುರಿತಂತೆ ವಿಸ್ತೃತ ಚರ್ಚೆ ನಡೆಸಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>