<p><strong>ಬೆಂಗಳೂರು/ರಾಮನಗರ: </strong>ಬಿಡದಿ ಸಮೀಪದ ಧ್ಯಾನಪೀಠ ಆಶ್ರಮಕ್ಕೆ ಬೀಗ ಜಡಿದು, ಅದರ ಪೀಠಾಧ್ಯಕ್ಷ ನಿತ್ಯಾನಂದ ಸ್ವಾಮೀಜಿಯನ್ನು ತಕ್ಷಣ ಬಂಧಿಸುವಂತೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.<br /> <br /> ವಿವಾದದ ಕೇಂದ್ರ ಬಿಂದುವಾಗಿರುವ ಆಶ್ರಮದಲ್ಲಿನ ಇತ್ತೀಚಿನ ವಿದ್ಯಮಾನಗಳ ಬಗ್ಗೆ ಗೃಹ ಸಚಿವ ಆರ್.ಅಶೋಕ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸೋಮವಾರ ವಿಧಾನಸೌಧದಲ್ಲಿ ಮಾಹಿತಿ ಪಡೆದ ನಂತರ ಅವರು ಈ ಸೂಚನೆ ನೀಡಿದರು.<br /> <br /> ಕೆಲವು ದೃಶ್ಯಮಾಧ್ಯಮ ಪ್ರತಿನಿಧಿಗಳು ಮತ್ತು ಆಶ್ರಮದ ಸಿಬ್ಬಂದಿ ನಡುವೆ ಜೂನ್ 8ರಂದು ಘರ್ಷಣೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಅದರ ಬೆನ್ನಿಗೇ ಕನ್ನಡಪರ ಸಂಘಟನೆಗಳು ಸ್ವಾಮೀಜಿ ಬಂಧನಕ್ಕೆ ಆಗ್ರಹಿಸಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಹಾಗೂ ಅವರ ಬೆಂಬಲಿಗರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ.<br /> <br /> ಆಶ್ರಮವನ್ನು ವಶಕ್ಕೆ ತೆಗೆದುಕೊಂಡು, ಇತ್ತೀಚಿನ ವಿದ್ಯಮಾನಗಳ ಕುರಿತು ಪ್ರಾದೇಶಿಕ ಆಯುಕ್ತ ಶಂಬುದಯಾಳ್ ಮೀನಾ ಅವರಿಂದ ವಿಚಾರಣೆ ನಡೆಸಲು ಆದೇಶಿಸಲಾಗಿದೆ. <br /> <br /> ವಿಚಾರಣೆ ನಡೆಸಿ ಸರ್ಕಾರಕ್ಕೆ ಅವರು ವರದಿ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು. ಆಶ್ರಮದಲ್ಲಿನ ಎಲ್ಲ ಕೊಠಡಿಗಳನ್ನು ಶೋಧಿಸಬೇಕು. ಅಲ್ಲಿನ ಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಬೇಕು ಎಂದೂ ಅವರು ಸೂಚಿಸಿದ್ದಾರೆ. <br /> <br /> ಈ ನಡುವೆ ನಿತ್ಯಾನಂದ ಸ್ವಾಮೀಜಿ ಹಲವು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಶೋಧ ಆರಂಭವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.<br /> <br /> ಅತ್ಯಾಚಾರ ಸೇರಿದಂತೆ ಇತರೆ ಕ್ರಿಮಿನಲ್ ಮೊಕದ್ದಮೆಗಳು ಸ್ವಾಮೀಜಿ ಅವರ ವಿರುದ್ಧ ಇದ್ದು, ಪ್ರಸ್ತುತ ಜಾಮೀನಿನ ಮೇಲೆ ಇದ್ದಾರೆ. ಇವರ ಜಾಮೀನು ರದ್ದು ಮಾಡುವಂತೆ ಸರ್ಕಾರ ಕೋರ್ಟ್ ಮೊರೆ ಹೋಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.<br /> <br /> ಮುಖ್ಯಮಂತ್ರಿ ಹೇಳಿಕೆ ಹೊರಬಿದ್ದ ನಂತರ ಆಶ್ರಮದಿಂದ ಹೊರ ಹೋಗುವ ಭಕ್ತರು ಮತ್ತು ಆಶ್ರಮವಾಸಿಗಳ ಸಂಖ್ಯೆ ಸೋಮವಾರ ಹೆಚ್ಚಾಗಿತ್ತು. ನಾಲ್ಕು-ಐದು ದಿನಗಳಿಂದ ಆಶ್ರಮದ ಸುತ್ತಮುತ್ತ ನಡೆಯುತ್ತಿರುವ ವಿದ್ಯಮಾನಗಳಿಂದ ಬೇಸತ್ತ ಕೆಲವು ಭಕ್ತರು ಆಶ್ರಮದಿಂದ ಹೊರ ನಡೆದಿದ್ದರು. ಮುಖ್ಯಮಂತ್ರಿ ಹೇಳಿಕೆಯ ಬಳಿಕ ನೂರಾರು ಭಕ್ತರು ಆಶ್ರಮ ಖಾಲಿ ಮಾಡಿದ್ದಾರೆ.<br /> <br /> ಆಶ್ರಮದಿಂದ ಹೊರ ಹೋಗುತ್ತಿದ್ದ ಭಕ್ತರ ವಸ್ತುಗಳನ್ನು ಪೊಲೀಸರು ತಪಾಸಣೆಗೊಳಪಡಿಸಿ ಅವರನ್ನು ಹೊರಗಡೆ ಕಳುಹಿಸಿದರು. ಈ ಸಂದರ್ಭದಲ್ಲಿ ವಿದೇಶಿ ಮಹಿಳೆಯೊಬ್ಬರ ಬಳಿ `ಹಾರ್ಡ್ ಡಿಸ್ಕ್~ಗಳು ಇದ್ದುದ್ದನ್ನು ಪತ್ತೆ ಹಚ್ಚಿದ ಪೊಲೀಸರು ಅವುಗಳನ್ನು ವಶಕ್ಕೆ ತೆಗೆದುಕೊಂಡು, ಆ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.<br /> </p>.<p>ಆಶ್ರಮದ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೀಸಲು ಪಡೆಯ ನಾಲ್ಕು ವಾಹನಗಳು ಆಶ್ರಮದ ಮುಖ್ಯ ದ್ವಾರದ ಬಳಿ ಬೀಡು ಬಿಟ್ಟಿವೆ. <br /> <br /> ಗುರುವಾರ ಮತ್ತು ಶುಕ್ರವಾರ ಆಶ್ರಮದಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಕರ್ನಾಟಕ ನವ ನಿರ್ಮಾಣ ವೇದಿಕೆಯ 16 ಕಾರ್ಯಕರ್ತರಿಗೆ ರಾಮನಗರ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ನೀಡಿದೆ.<br /> <br /> ಶುಕ್ರವಾರ ರಾತ್ರಿ ಜಾಮೀನು ಪಡೆದಿದ್ದ ನಿತ್ಯಾನಂದ ಸ್ವಾಮೀಜಿ ಅವರ ಎಂಟು ಶಿಷ್ಯಂದಿರು ಸೋಮವಾರ ಜಿಲ್ಲಾ ನ್ಯಾಯಾಲಯದಲ್ಲಿ ಕಾನೂನು ಪ್ರಕಾರ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದರು.<br /> <br /> <strong>ಮಂಗಳವಾರ ಬೀಗಮುದ್ರೆ ? :</strong> ಮುಖ್ಯಮಂತ್ರಿ ಅವರ ಆದೇಶದ ಮೇರೆಗೆ ಜಿಲ್ಲಾ ಆಡಳಿತ ಧ್ಯಾನಪೀಠ ಆಶ್ರಮಕ್ಕೆ ಮಂಗಳವಾರ ಬೀಗಮುದ್ರೆ ಹಾಕುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.<br /> <br /> `ಆಶ್ರಮಕ್ಕೆ ಬೀಗಮುದ್ರೆ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲಾಧಿಕಾರಿ ಅವರಿಗೆ ಸಮಗ್ರ ವರದಿಯನ್ನು ನೀಡುತ್ತೇನೆ. ನಂತರ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ~ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರ್ವಾಲ್ `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು/ರಾಮನಗರ: </strong>ಬಿಡದಿ ಸಮೀಪದ ಧ್ಯಾನಪೀಠ ಆಶ್ರಮಕ್ಕೆ ಬೀಗ ಜಡಿದು, ಅದರ ಪೀಠಾಧ್ಯಕ್ಷ ನಿತ್ಯಾನಂದ ಸ್ವಾಮೀಜಿಯನ್ನು ತಕ್ಷಣ ಬಂಧಿಸುವಂತೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.<br /> <br /> ವಿವಾದದ ಕೇಂದ್ರ ಬಿಂದುವಾಗಿರುವ ಆಶ್ರಮದಲ್ಲಿನ ಇತ್ತೀಚಿನ ವಿದ್ಯಮಾನಗಳ ಬಗ್ಗೆ ಗೃಹ ಸಚಿವ ಆರ್.ಅಶೋಕ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸೋಮವಾರ ವಿಧಾನಸೌಧದಲ್ಲಿ ಮಾಹಿತಿ ಪಡೆದ ನಂತರ ಅವರು ಈ ಸೂಚನೆ ನೀಡಿದರು.<br /> <br /> ಕೆಲವು ದೃಶ್ಯಮಾಧ್ಯಮ ಪ್ರತಿನಿಧಿಗಳು ಮತ್ತು ಆಶ್ರಮದ ಸಿಬ್ಬಂದಿ ನಡುವೆ ಜೂನ್ 8ರಂದು ಘರ್ಷಣೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಅದರ ಬೆನ್ನಿಗೇ ಕನ್ನಡಪರ ಸಂಘಟನೆಗಳು ಸ್ವಾಮೀಜಿ ಬಂಧನಕ್ಕೆ ಆಗ್ರಹಿಸಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಹಾಗೂ ಅವರ ಬೆಂಬಲಿಗರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ.<br /> <br /> ಆಶ್ರಮವನ್ನು ವಶಕ್ಕೆ ತೆಗೆದುಕೊಂಡು, ಇತ್ತೀಚಿನ ವಿದ್ಯಮಾನಗಳ ಕುರಿತು ಪ್ರಾದೇಶಿಕ ಆಯುಕ್ತ ಶಂಬುದಯಾಳ್ ಮೀನಾ ಅವರಿಂದ ವಿಚಾರಣೆ ನಡೆಸಲು ಆದೇಶಿಸಲಾಗಿದೆ. <br /> <br /> ವಿಚಾರಣೆ ನಡೆಸಿ ಸರ್ಕಾರಕ್ಕೆ ಅವರು ವರದಿ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು. ಆಶ್ರಮದಲ್ಲಿನ ಎಲ್ಲ ಕೊಠಡಿಗಳನ್ನು ಶೋಧಿಸಬೇಕು. ಅಲ್ಲಿನ ಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಬೇಕು ಎಂದೂ ಅವರು ಸೂಚಿಸಿದ್ದಾರೆ. <br /> <br /> ಈ ನಡುವೆ ನಿತ್ಯಾನಂದ ಸ್ವಾಮೀಜಿ ಹಲವು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಶೋಧ ಆರಂಭವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.<br /> <br /> ಅತ್ಯಾಚಾರ ಸೇರಿದಂತೆ ಇತರೆ ಕ್ರಿಮಿನಲ್ ಮೊಕದ್ದಮೆಗಳು ಸ್ವಾಮೀಜಿ ಅವರ ವಿರುದ್ಧ ಇದ್ದು, ಪ್ರಸ್ತುತ ಜಾಮೀನಿನ ಮೇಲೆ ಇದ್ದಾರೆ. ಇವರ ಜಾಮೀನು ರದ್ದು ಮಾಡುವಂತೆ ಸರ್ಕಾರ ಕೋರ್ಟ್ ಮೊರೆ ಹೋಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.<br /> <br /> ಮುಖ್ಯಮಂತ್ರಿ ಹೇಳಿಕೆ ಹೊರಬಿದ್ದ ನಂತರ ಆಶ್ರಮದಿಂದ ಹೊರ ಹೋಗುವ ಭಕ್ತರು ಮತ್ತು ಆಶ್ರಮವಾಸಿಗಳ ಸಂಖ್ಯೆ ಸೋಮವಾರ ಹೆಚ್ಚಾಗಿತ್ತು. ನಾಲ್ಕು-ಐದು ದಿನಗಳಿಂದ ಆಶ್ರಮದ ಸುತ್ತಮುತ್ತ ನಡೆಯುತ್ತಿರುವ ವಿದ್ಯಮಾನಗಳಿಂದ ಬೇಸತ್ತ ಕೆಲವು ಭಕ್ತರು ಆಶ್ರಮದಿಂದ ಹೊರ ನಡೆದಿದ್ದರು. ಮುಖ್ಯಮಂತ್ರಿ ಹೇಳಿಕೆಯ ಬಳಿಕ ನೂರಾರು ಭಕ್ತರು ಆಶ್ರಮ ಖಾಲಿ ಮಾಡಿದ್ದಾರೆ.<br /> <br /> ಆಶ್ರಮದಿಂದ ಹೊರ ಹೋಗುತ್ತಿದ್ದ ಭಕ್ತರ ವಸ್ತುಗಳನ್ನು ಪೊಲೀಸರು ತಪಾಸಣೆಗೊಳಪಡಿಸಿ ಅವರನ್ನು ಹೊರಗಡೆ ಕಳುಹಿಸಿದರು. ಈ ಸಂದರ್ಭದಲ್ಲಿ ವಿದೇಶಿ ಮಹಿಳೆಯೊಬ್ಬರ ಬಳಿ `ಹಾರ್ಡ್ ಡಿಸ್ಕ್~ಗಳು ಇದ್ದುದ್ದನ್ನು ಪತ್ತೆ ಹಚ್ಚಿದ ಪೊಲೀಸರು ಅವುಗಳನ್ನು ವಶಕ್ಕೆ ತೆಗೆದುಕೊಂಡು, ಆ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.<br /> </p>.<p>ಆಶ್ರಮದ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೀಸಲು ಪಡೆಯ ನಾಲ್ಕು ವಾಹನಗಳು ಆಶ್ರಮದ ಮುಖ್ಯ ದ್ವಾರದ ಬಳಿ ಬೀಡು ಬಿಟ್ಟಿವೆ. <br /> <br /> ಗುರುವಾರ ಮತ್ತು ಶುಕ್ರವಾರ ಆಶ್ರಮದಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಕರ್ನಾಟಕ ನವ ನಿರ್ಮಾಣ ವೇದಿಕೆಯ 16 ಕಾರ್ಯಕರ್ತರಿಗೆ ರಾಮನಗರ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ನೀಡಿದೆ.<br /> <br /> ಶುಕ್ರವಾರ ರಾತ್ರಿ ಜಾಮೀನು ಪಡೆದಿದ್ದ ನಿತ್ಯಾನಂದ ಸ್ವಾಮೀಜಿ ಅವರ ಎಂಟು ಶಿಷ್ಯಂದಿರು ಸೋಮವಾರ ಜಿಲ್ಲಾ ನ್ಯಾಯಾಲಯದಲ್ಲಿ ಕಾನೂನು ಪ್ರಕಾರ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದರು.<br /> <br /> <strong>ಮಂಗಳವಾರ ಬೀಗಮುದ್ರೆ ? :</strong> ಮುಖ್ಯಮಂತ್ರಿ ಅವರ ಆದೇಶದ ಮೇರೆಗೆ ಜಿಲ್ಲಾ ಆಡಳಿತ ಧ್ಯಾನಪೀಠ ಆಶ್ರಮಕ್ಕೆ ಮಂಗಳವಾರ ಬೀಗಮುದ್ರೆ ಹಾಕುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.<br /> <br /> `ಆಶ್ರಮಕ್ಕೆ ಬೀಗಮುದ್ರೆ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲಾಧಿಕಾರಿ ಅವರಿಗೆ ಸಮಗ್ರ ವರದಿಯನ್ನು ನೀಡುತ್ತೇನೆ. ನಂತರ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ~ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರ್ವಾಲ್ `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>