<p><strong>ರಾಮನಗರ</strong>: ಬಿಡದಿ ಬಳಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಆಶ್ರಮಕ್ಕೆ ಜಿಲ್ಲಾಧಿಕಾರಿ ಎಸ್. ಪುಟ್ಟಸ್ವಾಮಿ ಶುಕ್ರವಾರ ದಿಢೀರನೆ ಭೇಟಿ ನೀಡಿ, `ಆಶ್ರಮದಲ್ಲಿ ಭೂ ಪರಿವರ್ತನೆಯಾಗದೆ ಯಾವುದೇ ರೀತಿಯ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಬಾರದು~ ಎಂದು ಎಚ್ಚರಿಕೆ ನೀಡಿದ್ದಾರೆ.<br /> <br /> `ನಿತ್ಯಾನಂದ ಸ್ವಾಮೀಜಿ ಅವರಿಗೆ ಬಿಡದಿ ಬಳಿ 22.20 ಎಕರೆ ಭೂಮಿ ದಾನ ರೂಪದಲ್ಲಿ ಬಂದಿದೆ. ಈ ಹಿಂದೆ ಅವರು ಎರಡು ಎಕರೆ ಭೂಮಿಯನ್ನು ಪರಿವರ್ತನೆ ಮಾಡಿಸಿಕೊಂಡಿದ್ದಾರೆ. ಪರಿವರ್ತನೆಯಾಗದ ಭೂಮಿಯಲ್ಲಿ ಕಟ್ಟಡ ಕಾರ್ಯಗಳನ್ನು ಕೈಗೊಳ್ಳದಂತೆ ಹಿಂದೆ ಸೂಚಿಸಲಾಗಿತ್ತು. ಅದನ್ನು ಪರಿಪಾಲಿಸಲಾಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು~ ಆಶ್ರಮಕ್ಕೆ ಭೇಟಿ ನೀಡಿದ್ದಾಗಿ ಜಿಲ್ಲಾಧಿಕಾರಿ ಪುಟ್ಟಸ್ವಾಮಿ `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದರು.<br /> <br /> `ಆಶ್ರಮಕ್ಕೆ ಭೇಟಿ ನೀಡಿದ್ದ ವಿದೇಶಿ ಭಕ್ತರ ಜತೆ ಸ್ವಾಮೀಜಿ ಇದ್ದುದರಿಂದ, ಅವರನ್ನು ಭೇಟಿಯಾಗಿಲ್ಲ~ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಬಿಡದಿ ಬಳಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಆಶ್ರಮಕ್ಕೆ ಜಿಲ್ಲಾಧಿಕಾರಿ ಎಸ್. ಪುಟ್ಟಸ್ವಾಮಿ ಶುಕ್ರವಾರ ದಿಢೀರನೆ ಭೇಟಿ ನೀಡಿ, `ಆಶ್ರಮದಲ್ಲಿ ಭೂ ಪರಿವರ್ತನೆಯಾಗದೆ ಯಾವುದೇ ರೀತಿಯ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಬಾರದು~ ಎಂದು ಎಚ್ಚರಿಕೆ ನೀಡಿದ್ದಾರೆ.<br /> <br /> `ನಿತ್ಯಾನಂದ ಸ್ವಾಮೀಜಿ ಅವರಿಗೆ ಬಿಡದಿ ಬಳಿ 22.20 ಎಕರೆ ಭೂಮಿ ದಾನ ರೂಪದಲ್ಲಿ ಬಂದಿದೆ. ಈ ಹಿಂದೆ ಅವರು ಎರಡು ಎಕರೆ ಭೂಮಿಯನ್ನು ಪರಿವರ್ತನೆ ಮಾಡಿಸಿಕೊಂಡಿದ್ದಾರೆ. ಪರಿವರ್ತನೆಯಾಗದ ಭೂಮಿಯಲ್ಲಿ ಕಟ್ಟಡ ಕಾರ್ಯಗಳನ್ನು ಕೈಗೊಳ್ಳದಂತೆ ಹಿಂದೆ ಸೂಚಿಸಲಾಗಿತ್ತು. ಅದನ್ನು ಪರಿಪಾಲಿಸಲಾಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು~ ಆಶ್ರಮಕ್ಕೆ ಭೇಟಿ ನೀಡಿದ್ದಾಗಿ ಜಿಲ್ಲಾಧಿಕಾರಿ ಪುಟ್ಟಸ್ವಾಮಿ `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದರು.<br /> <br /> `ಆಶ್ರಮಕ್ಕೆ ಭೇಟಿ ನೀಡಿದ್ದ ವಿದೇಶಿ ಭಕ್ತರ ಜತೆ ಸ್ವಾಮೀಜಿ ಇದ್ದುದರಿಂದ, ಅವರನ್ನು ಭೇಟಿಯಾಗಿಲ್ಲ~ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>