<p><strong>ಕಮಲಮ್ಮ<br /> ಬೆಂಗಳೂರು:</strong> ನಿವೃತ್ತ ಮುಖ್ಯ ಶಿಕ್ಷಕ ಲೇಟ್ ಚಂದ್ರಶೇಖರ ಶಾಸ್ತ್ರಿ ಅವರ ಪತ್ನಿ ಕಮಲಮ್ಮ (93) ಅವರು ನಗರದ ಅಬ್ಬಿಗೆರೆಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾದರು. ಮೂಲತಃ ಕೋಲಾರ ತಾಲ್ಲೂಕಿನ ಜೋಡಿ ಕೃಷ್ಣಾಪುರದವರಾದ ಕಮಲಮ್ಮನವರಿಗೆ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.<br /> <br /> ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಅಬ್ಬಿಗೆರೆಯ ರುದ್ರ ಭೂಮಿಯಲ್ಲಿ ನೆರವೇರಿತು.<br /> <br /> <strong>ಬಿ.ಕೆ. ರಾಮಕೃಷ್ಣ<br /> ನೆಲಮಂಗಲ: </strong>ತಾಲ್ಲೂಕಿನ ಯಂಟಗಾನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಬಿ.ಕೆ.ರಾಮಕೃಷ್ಣ (58) ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಭಾನುವಾರ ಬಸವನಹಳ್ಳಿಯ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಅವಿವಾಹಿತರಾಗಿದ್ದ ಅವರು ಅಪಾರ ಶಿಷ್ಯ ಬಳಗವನ್ನು ಅಗಲಿದ್ದಾರೆ.<br /> <br /> ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯಕ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನರಸಿಂಹನಾಯಕ್, ಮುಖ್ಯ ಶಿಕ್ಷಕ ಶ್ರೀನಿವಾಸ್, ನೌಕರರ ಸಂಘದ ಎಸ್.ಎಸ್.ಬಿರಾದರ್ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಮೃತರ ಅಂತಿಮ ದರ್ಶನ ಪಡೆದರು.<br /> <br /> ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿದ್ದ ರಾಮಕೃಷ್ಣ ಅವರ ಹುಟ್ಟುಹಬ್ಬದ ದಿನವಾದ ಶನಿವಾರ ವಿದ್ಯಾರ್ಥಿಗಳು ಶುಭ ಹಾರೈಸಲು ಕಾತರರಾಗಿದ್ದರು. ಆದರೆ, ಅವರು ಶಾಲೆಗೆ ಬಾರದಿದ್ದರಿಂದ ನಿರಾಶರಾಗಿದ್ದ ವಿದ್ಯಾರ್ಥಿಗಳು ಮೃತಪಟ್ಟ ಸುದ್ದಿಯನ್ನು ತಿಳಿದು ದುಃಖಿತರಾದರು. ಅಂತಿಮ ಸಂಸ್ಕಾರದಲ್ಲಿ ವಿದ್ಯಾರ್ಥಿಗಳೂ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಮ್ಮ<br /> ಬೆಂಗಳೂರು:</strong> ನಿವೃತ್ತ ಮುಖ್ಯ ಶಿಕ್ಷಕ ಲೇಟ್ ಚಂದ್ರಶೇಖರ ಶಾಸ್ತ್ರಿ ಅವರ ಪತ್ನಿ ಕಮಲಮ್ಮ (93) ಅವರು ನಗರದ ಅಬ್ಬಿಗೆರೆಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾದರು. ಮೂಲತಃ ಕೋಲಾರ ತಾಲ್ಲೂಕಿನ ಜೋಡಿ ಕೃಷ್ಣಾಪುರದವರಾದ ಕಮಲಮ್ಮನವರಿಗೆ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.<br /> <br /> ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಅಬ್ಬಿಗೆರೆಯ ರುದ್ರ ಭೂಮಿಯಲ್ಲಿ ನೆರವೇರಿತು.<br /> <br /> <strong>ಬಿ.ಕೆ. ರಾಮಕೃಷ್ಣ<br /> ನೆಲಮಂಗಲ: </strong>ತಾಲ್ಲೂಕಿನ ಯಂಟಗಾನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಬಿ.ಕೆ.ರಾಮಕೃಷ್ಣ (58) ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಭಾನುವಾರ ಬಸವನಹಳ್ಳಿಯ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಅವಿವಾಹಿತರಾಗಿದ್ದ ಅವರು ಅಪಾರ ಶಿಷ್ಯ ಬಳಗವನ್ನು ಅಗಲಿದ್ದಾರೆ.<br /> <br /> ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯಕ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನರಸಿಂಹನಾಯಕ್, ಮುಖ್ಯ ಶಿಕ್ಷಕ ಶ್ರೀನಿವಾಸ್, ನೌಕರರ ಸಂಘದ ಎಸ್.ಎಸ್.ಬಿರಾದರ್ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಮೃತರ ಅಂತಿಮ ದರ್ಶನ ಪಡೆದರು.<br /> <br /> ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿದ್ದ ರಾಮಕೃಷ್ಣ ಅವರ ಹುಟ್ಟುಹಬ್ಬದ ದಿನವಾದ ಶನಿವಾರ ವಿದ್ಯಾರ್ಥಿಗಳು ಶುಭ ಹಾರೈಸಲು ಕಾತರರಾಗಿದ್ದರು. ಆದರೆ, ಅವರು ಶಾಲೆಗೆ ಬಾರದಿದ್ದರಿಂದ ನಿರಾಶರಾಗಿದ್ದ ವಿದ್ಯಾರ್ಥಿಗಳು ಮೃತಪಟ್ಟ ಸುದ್ದಿಯನ್ನು ತಿಳಿದು ದುಃಖಿತರಾದರು. ಅಂತಿಮ ಸಂಸ್ಕಾರದಲ್ಲಿ ವಿದ್ಯಾರ್ಥಿಗಳೂ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>