<p>ತೀರ್ಥಹಳ್ಳಿ: ಓದಿನ ಮೂಲಕ ನಮ್ಮ ಮನಸ್ಸು ಪುನಶ್ಚೇತನಗೊಳ್ಳುತ್ತದೆ. ನಾನು ಎಂಟನೇ ತರಗತಿಯಲ್ಲಿದ್ದಾಗ ಒಂದು ಸಾವಿರ ಕಾದಂಬರಿಗಳನ್ನು ಓದಿದ್ದೆ ಎಂದು ಸಾಹಿತಿಕುಂ. ವೀರಭದ್ರಪ್ಪ ಹೇಳಿದರು.<br /> ಈಚೆಗೆ ತೀರ್ಥಹಳ್ಳಿ ತುಂಗಾ ಕಾಲೇಜಿನ ಸಾಹಿತ್ಯದ ವಿದ್ಯಾರ್ಥಿಗಳಿಗಾಗಿ ವಿಶೇಷ ಉಪನ್ಯಾಸ ನೀಡಿ `ಓದಿದರೆ ವೃಷ್ಟಾನ್ನ ಸವಿ; ಓದದ ಬಾಯದು ಬಿಲದ ಬಾಯಿ~ ಎಂದರು. <br /> <br /> ಓದು ಧ್ಯಾನ, ಮೆಡಿಟೇಷನ್. ಅದು ವ್ಯಕ್ತಿಯ ಮುಖದಲ್ಲಿ ನಗುವನ್ನು ಅರಳಿಸುತ್ತದೆ. ಕೃತಿಯನ್ನು ಓದುವ ಮೂಲಕ ಕೃತಿಕಾರರು ನಮ್ಮಳಗಿದ್ದು, ನಮಗೆ ಮಾರ್ಗದರ್ಶನ ಮಾಡುತ್ತಾರೆಂದೇ ಅರ್ಥ. ನಮ್ಮನ್ನು ಜೀವಂತವಾಗಿಡುವ ಸಾಧನವೇ ಪಠ್ಯ ಎಂದು ಅಭಿಪ್ರಾಯಪಟ್ಟರು.<br /> <br /> ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎ. ಚಂದ್ರಶೇಖರ್, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಎಲ್.ಸಿ. ಸುಮಿತ್ರಾ ಉಪಸ್ಥಿತರಿದ್ದರು.<br /> <br /> ಕೆ.ಎಲ್. ಪ್ರಸನ್ನ ಆರಂಭ ಗೀತೆ ಹಾಡಿದರು. ಪೃಥ್ವಿ ಸ್ವಾಗತಿಸಿದರು, ಭರತ್ ವಂದಿಸಿದರು. ಅಶ್ವಿನಿ ಅತಿಥಿಗಳ ಪರಿಚಯ ಮಾಡಿದರು. ಸಾಹಿತ್ಯ ಸಂಘದ ಉಪಾಧ್ಯಕ್ಷೆ ಸಿ.ಪಿ. ದಿವ್ಯಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಡಾ.ಬಿ.ಎಸ್. ನಾಗೇಶ್ ಬೇಂದ್ರೆ ಅವರ ಗೀತೆಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀರ್ಥಹಳ್ಳಿ: ಓದಿನ ಮೂಲಕ ನಮ್ಮ ಮನಸ್ಸು ಪುನಶ್ಚೇತನಗೊಳ್ಳುತ್ತದೆ. ನಾನು ಎಂಟನೇ ತರಗತಿಯಲ್ಲಿದ್ದಾಗ ಒಂದು ಸಾವಿರ ಕಾದಂಬರಿಗಳನ್ನು ಓದಿದ್ದೆ ಎಂದು ಸಾಹಿತಿಕುಂ. ವೀರಭದ್ರಪ್ಪ ಹೇಳಿದರು.<br /> ಈಚೆಗೆ ತೀರ್ಥಹಳ್ಳಿ ತುಂಗಾ ಕಾಲೇಜಿನ ಸಾಹಿತ್ಯದ ವಿದ್ಯಾರ್ಥಿಗಳಿಗಾಗಿ ವಿಶೇಷ ಉಪನ್ಯಾಸ ನೀಡಿ `ಓದಿದರೆ ವೃಷ್ಟಾನ್ನ ಸವಿ; ಓದದ ಬಾಯದು ಬಿಲದ ಬಾಯಿ~ ಎಂದರು. <br /> <br /> ಓದು ಧ್ಯಾನ, ಮೆಡಿಟೇಷನ್. ಅದು ವ್ಯಕ್ತಿಯ ಮುಖದಲ್ಲಿ ನಗುವನ್ನು ಅರಳಿಸುತ್ತದೆ. ಕೃತಿಯನ್ನು ಓದುವ ಮೂಲಕ ಕೃತಿಕಾರರು ನಮ್ಮಳಗಿದ್ದು, ನಮಗೆ ಮಾರ್ಗದರ್ಶನ ಮಾಡುತ್ತಾರೆಂದೇ ಅರ್ಥ. ನಮ್ಮನ್ನು ಜೀವಂತವಾಗಿಡುವ ಸಾಧನವೇ ಪಠ್ಯ ಎಂದು ಅಭಿಪ್ರಾಯಪಟ್ಟರು.<br /> <br /> ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎ. ಚಂದ್ರಶೇಖರ್, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಎಲ್.ಸಿ. ಸುಮಿತ್ರಾ ಉಪಸ್ಥಿತರಿದ್ದರು.<br /> <br /> ಕೆ.ಎಲ್. ಪ್ರಸನ್ನ ಆರಂಭ ಗೀತೆ ಹಾಡಿದರು. ಪೃಥ್ವಿ ಸ್ವಾಗತಿಸಿದರು, ಭರತ್ ವಂದಿಸಿದರು. ಅಶ್ವಿನಿ ಅತಿಥಿಗಳ ಪರಿಚಯ ಮಾಡಿದರು. ಸಾಹಿತ್ಯ ಸಂಘದ ಉಪಾಧ್ಯಕ್ಷೆ ಸಿ.ಪಿ. ದಿವ್ಯಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಡಾ.ಬಿ.ಎಸ್. ನಾಗೇಶ್ ಬೇಂದ್ರೆ ಅವರ ಗೀತೆಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>