<p><strong>ನವದೆಹಲಿ (ಪಿಟಿಐ): </strong>ಬಂಡವಾಳ ಹೂಡಿಕೆ ಮತ್ತು ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಿಸಲು ಅವಕಾಶ ನೀಡುವ ನೂತನ ವಿದ್ಯುತ್ ದರ ನೀತಿಗೆ ಕೇಂದ್ರ ಸಚಿವ ಸಂಪುಟ ಸಂಪುಟ ಒಪ್ಪಿಗೆ ನೀಡಿದೆ.<br /> <br /> ವಿದ್ಯುತ್ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರಲು ಮುಂದಾಗಿರುವ ಸರ್ಕಾರ, ವಿದ್ಯುತ್ ಉತ್ಪಾದನಾ ವೆಚ್ಚ ಮತ್ತು ತೆರಿಗೆಗಳನ್ನು ಗ್ರಾಹಕರ ಮೇಲೆ ವರ್ಗಾಯಿಸಲು ನೂತನ ನೀತಿಯಲ್ಲಿ ಅವಕಾಶ ಕಲ್ಪಿಸಿದೆ.<br /> <br /> ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆ ನೂತನ ವಿದ್ಯುತ್ ನೀತಿಗೆ ಅನುಮೋದನೆ ನೀಡಿದೆ. ಹಾಲಿ ಇರುವ ವಿದ್ಯುತ್ ಉತ್ಪಾದನಾ ಘಟಕಗಳನ್ನು ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ. ಅಲ್ಲದೆ ತಾಜ್ಯದಿಂದ ಉತ್ಪಾದಿಸುವ ವಿದ್ಯುತ್ ಅನ್ನು ರಾಜ್ಯ ಸರ್ಕಾರಗಳು ಕಡ್ಡಾಯವಾಗಿ ಖರೀದಿಸಬೇಕಾಗುತ್ತದೆ.<br /> <br /> ನೂತನ ನೀತಿಯಲ್ಲಿನ ಪ್ರಮುಖ ಅಂಶಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಕೇಂದ್ರ ಇಂಧನ ಸಚಿವ ಪೀಯೂಷ್ ಗೋಯಲ್, ‘ಎಲ್ಲರಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಹೊಸ ನೀತಿ ಸಹಕಾರಿಯಾಗಲಿದೆ’ ಎಂದರು.<br /> <br /> ಪರಿಸರ ಸಂರಕ್ಷಣೆ ಜೊತೆಗೆ, ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ತಲೆದೋರುವ ವಿವಾದಗಳನ್ನು ಕಡಿಮೆ ಮಾಡಲು ಮತ್ತು ಹೂಡಿಕೆಯನ್ನು ಆಕರ್ಷಿಸಲು ಹೊಸ ನೀತಿಯಲ್ಲಿ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.<br /> <br /> ವಿದ್ಯುತ್ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆ ತರುವ ಉದ್ದೇಶದಿಂದ 2006ರ ವಿದ್ಯುತ್ ನೀತಿಗೆ ತಿದ್ದುಪಡಿ ತರಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.<br /> <br /> ‘ಇಂಧನ ಕ್ಷೇತ್ರದಲ್ಲಿ ದಕ್ಷತೆ, ಪರಿಸರ ಸಂರಕ್ಷಣೆ, ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ವಿದ್ಯುತ್ ಲಭ್ಯತೆ ಮತ್ತು ಎಲ್ಲರಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವುದು ನಮ್ಮ ಮುಖ್ಯ ಗುರಿಯಾಗಿದೆ’ ಎಂದರು.<br /> <br /> <strong>ಹೊಸನೀತಿಯಲ್ಲಿ ಏನಿದೆ?</strong><br /> * ಎಲ್ಲ ವರ್ಗದ ಗ್ರಾಹಕರಿಗೆ ದಿನದ 24 ಗಂಟೆ ವಿದ್ಯುತ್ ಪೂರೈಕೆ<br /> * ಇದುವರೆಗೆ ವಿದ್ಯುತ್ ಕಾಣದ ಕುಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು<br /> * 2022ರ ವೇಳೆಗೆ ಶೇ 8ರಷ್ಟು ಸೌರವಿದ್ಯುತ್ ಬಳಕೆ<br /> * ಘನ ತ್ಯಾಜ್ಯಗಳಿಂದ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ<br /> * ವಿದ್ಯುತ್ ಘಟಕಗಳನ್ನು ವಿಸ್ತರಿಸುವ ಮೂಲಕ ಗ್ರಾಹಕರಿಗೆ ಕಡಿಮೆ ದರದಲ್ಲಿ ವಿದ್ಯುತ್ ಪೂರೈಕೆ<br /> * ವಿದ್ಯುತ್ ಉತ್ಪಾದನಾ ವೆಚ್ಚ ಕಡಿಮೆ ಮಾಡುವುದಕ್ಕೆ ಹೆಚ್ಚಿನ ಆದ್ಯತೆ<br /> * ವಿದ್ಯುತ್ ಕಳ್ಳತನ ತಡೆಗೆ ಸ್ಮಾರ್ಟ್ ಮೀಟರ್ಗಳನ್ನು ತ್ವರಿತವಾಗಿ ಅಳವಡಿಸುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಬಂಡವಾಳ ಹೂಡಿಕೆ ಮತ್ತು ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಿಸಲು ಅವಕಾಶ ನೀಡುವ ನೂತನ ವಿದ್ಯುತ್ ದರ ನೀತಿಗೆ ಕೇಂದ್ರ ಸಚಿವ ಸಂಪುಟ ಸಂಪುಟ ಒಪ್ಪಿಗೆ ನೀಡಿದೆ.<br /> <br /> ವಿದ್ಯುತ್ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರಲು ಮುಂದಾಗಿರುವ ಸರ್ಕಾರ, ವಿದ್ಯುತ್ ಉತ್ಪಾದನಾ ವೆಚ್ಚ ಮತ್ತು ತೆರಿಗೆಗಳನ್ನು ಗ್ರಾಹಕರ ಮೇಲೆ ವರ್ಗಾಯಿಸಲು ನೂತನ ನೀತಿಯಲ್ಲಿ ಅವಕಾಶ ಕಲ್ಪಿಸಿದೆ.<br /> <br /> ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆ ನೂತನ ವಿದ್ಯುತ್ ನೀತಿಗೆ ಅನುಮೋದನೆ ನೀಡಿದೆ. ಹಾಲಿ ಇರುವ ವಿದ್ಯುತ್ ಉತ್ಪಾದನಾ ಘಟಕಗಳನ್ನು ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ. ಅಲ್ಲದೆ ತಾಜ್ಯದಿಂದ ಉತ್ಪಾದಿಸುವ ವಿದ್ಯುತ್ ಅನ್ನು ರಾಜ್ಯ ಸರ್ಕಾರಗಳು ಕಡ್ಡಾಯವಾಗಿ ಖರೀದಿಸಬೇಕಾಗುತ್ತದೆ.<br /> <br /> ನೂತನ ನೀತಿಯಲ್ಲಿನ ಪ್ರಮುಖ ಅಂಶಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಕೇಂದ್ರ ಇಂಧನ ಸಚಿವ ಪೀಯೂಷ್ ಗೋಯಲ್, ‘ಎಲ್ಲರಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಹೊಸ ನೀತಿ ಸಹಕಾರಿಯಾಗಲಿದೆ’ ಎಂದರು.<br /> <br /> ಪರಿಸರ ಸಂರಕ್ಷಣೆ ಜೊತೆಗೆ, ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ತಲೆದೋರುವ ವಿವಾದಗಳನ್ನು ಕಡಿಮೆ ಮಾಡಲು ಮತ್ತು ಹೂಡಿಕೆಯನ್ನು ಆಕರ್ಷಿಸಲು ಹೊಸ ನೀತಿಯಲ್ಲಿ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.<br /> <br /> ವಿದ್ಯುತ್ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆ ತರುವ ಉದ್ದೇಶದಿಂದ 2006ರ ವಿದ್ಯುತ್ ನೀತಿಗೆ ತಿದ್ದುಪಡಿ ತರಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.<br /> <br /> ‘ಇಂಧನ ಕ್ಷೇತ್ರದಲ್ಲಿ ದಕ್ಷತೆ, ಪರಿಸರ ಸಂರಕ್ಷಣೆ, ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ವಿದ್ಯುತ್ ಲಭ್ಯತೆ ಮತ್ತು ಎಲ್ಲರಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವುದು ನಮ್ಮ ಮುಖ್ಯ ಗುರಿಯಾಗಿದೆ’ ಎಂದರು.<br /> <br /> <strong>ಹೊಸನೀತಿಯಲ್ಲಿ ಏನಿದೆ?</strong><br /> * ಎಲ್ಲ ವರ್ಗದ ಗ್ರಾಹಕರಿಗೆ ದಿನದ 24 ಗಂಟೆ ವಿದ್ಯುತ್ ಪೂರೈಕೆ<br /> * ಇದುವರೆಗೆ ವಿದ್ಯುತ್ ಕಾಣದ ಕುಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು<br /> * 2022ರ ವೇಳೆಗೆ ಶೇ 8ರಷ್ಟು ಸೌರವಿದ್ಯುತ್ ಬಳಕೆ<br /> * ಘನ ತ್ಯಾಜ್ಯಗಳಿಂದ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ<br /> * ವಿದ್ಯುತ್ ಘಟಕಗಳನ್ನು ವಿಸ್ತರಿಸುವ ಮೂಲಕ ಗ್ರಾಹಕರಿಗೆ ಕಡಿಮೆ ದರದಲ್ಲಿ ವಿದ್ಯುತ್ ಪೂರೈಕೆ<br /> * ವಿದ್ಯುತ್ ಉತ್ಪಾದನಾ ವೆಚ್ಚ ಕಡಿಮೆ ಮಾಡುವುದಕ್ಕೆ ಹೆಚ್ಚಿನ ಆದ್ಯತೆ<br /> * ವಿದ್ಯುತ್ ಕಳ್ಳತನ ತಡೆಗೆ ಸ್ಮಾರ್ಟ್ ಮೀಟರ್ಗಳನ್ನು ತ್ವರಿತವಾಗಿ ಅಳವಡಿಸುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>