<p><strong>ಬೆಂಗಳೂರು: </strong>ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಒಳಗಾಗಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಅವರ ಪತ್ನಿ ವಾಣಿಶ್ರಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಇತ್ಯರ್ಥಗೊಳಿಸಿತು.<br /> <br /> `ರಾಜಕೀಯಕ್ಕೆ ಬಂದ ಮೇಲೆ ವಿಶ್ವನಾಥ್ ಅವರು ಸುಮಾರು 70 ಕೋಟಿ ರೂಪಾಯಿಗಳಷ್ಟು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ಕರ್ನಾಟಕ ಗೃಹ ಮಂಡಳಿಗೆ ಸೇರಿರುವ ಸುಮಾರು 3.5 ಎಕರೆ ಜಮೀನನ್ನು ಹೆಸರಘಟ್ಟ ಹಾಗೂ ಶ್ರೀರಾಮನಹಳ್ಳಿಯಲ್ಲಿ ಹೊಂದಿದ್ದಾರೆ~ ಎಂದು ದೂರಿ ಶಶಿಧರ್ ಎಂಬುವರು ಸಲ್ಲಿಸಿರುವ ದೂರು ಇದಾಗಿದೆ. <br /> <br /> `ಈ ಆರೋಪದ ಮೇಲೆ ಇವರನ್ನು ಬಂಧಿಸಲು ಪೊಲೀಸರು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ವಿನಾಕಾರಣ ಅರ್ಜಿ ಸಲ್ಲಿಸಲಾಗಿದೆ~ ಎಂದು ಲೋಕಾಯುಕ್ತ ಪೊಲೀಸರು ಸೋಮವಾರ ತಿಳಿಸಿದ್ದರು. ಹೀಗಾಗಿ ಅರ್ಜಿಗೆ ಮಾನ್ಯತೆ ಇಲ್ಲ ಎಂದು ನ್ಯಾಯಾಧೀಶ ಎನ್.ಕೆ.ಸುಧೀಂದ್ರರಾವ್ ಅಭಿಪ್ರಾಯಪಟ್ಟರು.<br /> <br /> <strong>ಮದ್ಯದಂಗಡಿ- ನೋಟಿಸ್</strong><br /> ನಗರದ ಕೋನಪ್ಪನ ಅಗ್ರಹಾರದ ಬಳಿ ಮದ್ಯದಂಗಡಿ ತೆರೆಯಲು ನೀಡಲಾದ ಅನುಮತಿಯನ್ನು ಪ್ರಶ್ನಿಸಿ ಅಲ್ಲಿನ ಗ್ರಾಮ ಪಂಚಾಯಿತಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.<br /> <br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ಅಬಕಾರಿ ಇಲಾಖೆ, ಬೆಂಗಳೂರು ಜಿಲ್ಲಾಧಿಕಾರಿ ಸೇರಿದಂತೆ ಇತರ ಪ್ರತಿವಾದಿಗಳಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.<br /> <br /> ಸರ್ವೇ ನಂ. 112/110ರಲ್ಲಿ `ಎಸ್.ಕೆ.ವೈನ್ ಸ್ಟೋರ್ಸ್~ಗೆ ಮದ್ಯದಂಗಡಿ ತೆರೆಯಲು ಕಳೆದ ಜುಲೈ ತಿಂಗಳಿನಲ್ಲಿ ನೀಡಲಾದ ಅನುಮತಿಯ ರದ್ದತಿಗೆ ಅರ್ಜಿಯಲ್ಲಿ ಕೋರಲಾಗಿದೆ. ಅಂಗಡಿಯ 100 ಅಡಿ ಅಂತರದಲ್ಲಿಯೇ ಪರಿಶಿಷ್ಟರ ಕಾಲೋನಿ ಇದೆ. ಇಂತಹ ಪ್ರದೇಶದಲ್ಲಿ ಅಂಗಡಿಗೆ ಅನುಮತಿ ನೀಡಿರುವುದು ಕಾನೂನು ಬಾಹಿರ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎನ್ನುವುದು ಅರ್ಜಿದಾರರ ಆರೋಪ. ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಒಳಗಾಗಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಅವರ ಪತ್ನಿ ವಾಣಿಶ್ರಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಇತ್ಯರ್ಥಗೊಳಿಸಿತು.<br /> <br /> `ರಾಜಕೀಯಕ್ಕೆ ಬಂದ ಮೇಲೆ ವಿಶ್ವನಾಥ್ ಅವರು ಸುಮಾರು 70 ಕೋಟಿ ರೂಪಾಯಿಗಳಷ್ಟು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ಕರ್ನಾಟಕ ಗೃಹ ಮಂಡಳಿಗೆ ಸೇರಿರುವ ಸುಮಾರು 3.5 ಎಕರೆ ಜಮೀನನ್ನು ಹೆಸರಘಟ್ಟ ಹಾಗೂ ಶ್ರೀರಾಮನಹಳ್ಳಿಯಲ್ಲಿ ಹೊಂದಿದ್ದಾರೆ~ ಎಂದು ದೂರಿ ಶಶಿಧರ್ ಎಂಬುವರು ಸಲ್ಲಿಸಿರುವ ದೂರು ಇದಾಗಿದೆ. <br /> <br /> `ಈ ಆರೋಪದ ಮೇಲೆ ಇವರನ್ನು ಬಂಧಿಸಲು ಪೊಲೀಸರು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ವಿನಾಕಾರಣ ಅರ್ಜಿ ಸಲ್ಲಿಸಲಾಗಿದೆ~ ಎಂದು ಲೋಕಾಯುಕ್ತ ಪೊಲೀಸರು ಸೋಮವಾರ ತಿಳಿಸಿದ್ದರು. ಹೀಗಾಗಿ ಅರ್ಜಿಗೆ ಮಾನ್ಯತೆ ಇಲ್ಲ ಎಂದು ನ್ಯಾಯಾಧೀಶ ಎನ್.ಕೆ.ಸುಧೀಂದ್ರರಾವ್ ಅಭಿಪ್ರಾಯಪಟ್ಟರು.<br /> <br /> <strong>ಮದ್ಯದಂಗಡಿ- ನೋಟಿಸ್</strong><br /> ನಗರದ ಕೋನಪ್ಪನ ಅಗ್ರಹಾರದ ಬಳಿ ಮದ್ಯದಂಗಡಿ ತೆರೆಯಲು ನೀಡಲಾದ ಅನುಮತಿಯನ್ನು ಪ್ರಶ್ನಿಸಿ ಅಲ್ಲಿನ ಗ್ರಾಮ ಪಂಚಾಯಿತಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.<br /> <br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ಅಬಕಾರಿ ಇಲಾಖೆ, ಬೆಂಗಳೂರು ಜಿಲ್ಲಾಧಿಕಾರಿ ಸೇರಿದಂತೆ ಇತರ ಪ್ರತಿವಾದಿಗಳಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.<br /> <br /> ಸರ್ವೇ ನಂ. 112/110ರಲ್ಲಿ `ಎಸ್.ಕೆ.ವೈನ್ ಸ್ಟೋರ್ಸ್~ಗೆ ಮದ್ಯದಂಗಡಿ ತೆರೆಯಲು ಕಳೆದ ಜುಲೈ ತಿಂಗಳಿನಲ್ಲಿ ನೀಡಲಾದ ಅನುಮತಿಯ ರದ್ದತಿಗೆ ಅರ್ಜಿಯಲ್ಲಿ ಕೋರಲಾಗಿದೆ. ಅಂಗಡಿಯ 100 ಅಡಿ ಅಂತರದಲ್ಲಿಯೇ ಪರಿಶಿಷ್ಟರ ಕಾಲೋನಿ ಇದೆ. ಇಂತಹ ಪ್ರದೇಶದಲ್ಲಿ ಅಂಗಡಿಗೆ ಅನುಮತಿ ನೀಡಿರುವುದು ಕಾನೂನು ಬಾಹಿರ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎನ್ನುವುದು ಅರ್ಜಿದಾರರ ಆರೋಪ. ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>