<p>ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶವು ತನ್ನ ನಿರೀಕ್ಷೆಯನ್ನು ಹುಸಿ ಮಾಡಿದೆ ಎಂದು ಬಿಜೆಪಿ ಹೇಳಿದೆ.<br /> <br /> `ಗೋವಾ, ಪಂಜಾಬ್ ಹಾಗೂ ಉತ್ತರಾಖಂಡದಲ್ಲಿ ಪಕ್ಷವು ಸರ್ಕಾರ ರಚಿಸುವ ಸ್ಥಿತಿಯಲ್ಲಿದೆ. ಈ ಫಲಿತಾಂಶವು ಬಿಜೆಪಿಗೆ ಬಲ ಕೊಡುವುದಾಗಿ ನಂಬಿದ್ದೇನೆ~ ಎಂದು ಅಧ್ಯಕ್ಷ ನಿತಿನ್ ಗಡ್ಕರಿ ಸುದ್ದಿಗಾರರಿಗೆ ತಿಳಿಸಿದರು.<br /> <br /> `ಅಲ್ಪಸಂಖ್ಯಾತರ ವಿರೋಧಿ ಎಂದು ಬಿಜೆಪಿಯನ್ನು ದೂಷಿಸಲಾಗುತ್ತದೆ. ಆದರೆ ಈ ಬಾರಿ ಗೋವಾದಲ್ಲಿ ಕ್ಯಾಥೊಲಿಕ್ ಕ್ರೈಸ್ತರು ಕೂಡ ನಮಗೆ ಮತ ಹಾಕಿದ್ದಾರೆ~ ಎಂದು ಅವರು ಗೋವಾದಲ್ಲಿ ಪಕ್ಷದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ಅಕಾಲಿ ದಳ- ಬಿಜೆಪಿ ಮೈತ್ರಿ ಗೆದ್ದಿದ್ದಕ್ಕೆ ಗಡ್ಕರಿ ಅವರು ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಭಿನಂದನೆ ಸಲ್ಲಿಸಿದರು.<br /> <br /> ಉತ್ತರ ಪ್ರದೇಶದಲ್ಲಿ ಪ್ರಾದೇಶಿಕ ಪಕ್ಷಗಳಾದ ಎಸ್ಪಿ ಹಾಗೂ ಬಿಎಸ್ಪಿ ನಡುವೆ ಮತಗಳು ಹಂಚಿಹೋಗಿದ್ದರಿಂದ ಬಿಜೆಪಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಲಿಲ್ಲ ಎಂದ ಅವರು, `ಉತ್ತರ ಪ್ರದೇಶದ ಫಲಿತಾಂಶವು ಕಾಂಗ್ರೆಸ್ಗೆ ಭಾರಿ ಆಘಾತ ನೀಡಿದೆ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶವು ತನ್ನ ನಿರೀಕ್ಷೆಯನ್ನು ಹುಸಿ ಮಾಡಿದೆ ಎಂದು ಬಿಜೆಪಿ ಹೇಳಿದೆ.<br /> <br /> `ಗೋವಾ, ಪಂಜಾಬ್ ಹಾಗೂ ಉತ್ತರಾಖಂಡದಲ್ಲಿ ಪಕ್ಷವು ಸರ್ಕಾರ ರಚಿಸುವ ಸ್ಥಿತಿಯಲ್ಲಿದೆ. ಈ ಫಲಿತಾಂಶವು ಬಿಜೆಪಿಗೆ ಬಲ ಕೊಡುವುದಾಗಿ ನಂಬಿದ್ದೇನೆ~ ಎಂದು ಅಧ್ಯಕ್ಷ ನಿತಿನ್ ಗಡ್ಕರಿ ಸುದ್ದಿಗಾರರಿಗೆ ತಿಳಿಸಿದರು.<br /> <br /> `ಅಲ್ಪಸಂಖ್ಯಾತರ ವಿರೋಧಿ ಎಂದು ಬಿಜೆಪಿಯನ್ನು ದೂಷಿಸಲಾಗುತ್ತದೆ. ಆದರೆ ಈ ಬಾರಿ ಗೋವಾದಲ್ಲಿ ಕ್ಯಾಥೊಲಿಕ್ ಕ್ರೈಸ್ತರು ಕೂಡ ನಮಗೆ ಮತ ಹಾಕಿದ್ದಾರೆ~ ಎಂದು ಅವರು ಗೋವಾದಲ್ಲಿ ಪಕ್ಷದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ಅಕಾಲಿ ದಳ- ಬಿಜೆಪಿ ಮೈತ್ರಿ ಗೆದ್ದಿದ್ದಕ್ಕೆ ಗಡ್ಕರಿ ಅವರು ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಭಿನಂದನೆ ಸಲ್ಲಿಸಿದರು.<br /> <br /> ಉತ್ತರ ಪ್ರದೇಶದಲ್ಲಿ ಪ್ರಾದೇಶಿಕ ಪಕ್ಷಗಳಾದ ಎಸ್ಪಿ ಹಾಗೂ ಬಿಎಸ್ಪಿ ನಡುವೆ ಮತಗಳು ಹಂಚಿಹೋಗಿದ್ದರಿಂದ ಬಿಜೆಪಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಲಿಲ್ಲ ಎಂದ ಅವರು, `ಉತ್ತರ ಪ್ರದೇಶದ ಫಲಿತಾಂಶವು ಕಾಂಗ್ರೆಸ್ಗೆ ಭಾರಿ ಆಘಾತ ನೀಡಿದೆ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>