<p><strong>ಬೆಂಗಳೂರು: </strong>`ಸರ್ವಜ್ಞ ಕನ್ನಡದ ಜನ ಸಾಮಾನ್ಯರ ಕವಿಯಾಗಿದ್ದವನು. ಸರ್ವಜ್ಞನ ವಚನಗಳು ಸಮಾಜಕ್ಕೆ ದಾರಿ ದೀಪವಾಗಿರುವಂತವು~ ಎಂದು ಸಾಹಿತಿ ಚಂದ್ರಶೇಖರ ಪಾಟೀಲ ಹೇಳಿದರು. <br /> <br /> ಇತ್ತೀಚೆಗೆ ಶ್ರೀ ರಾಮಪುರದ ಸರ್ವಜ್ಞ ಮಿತ್ರ ವೃಂದದ 39 ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಕ್ರಾಂತಿ ಕವಿ ಸರ್ವಜ್ಞ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.<br /> <br /> ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಚಲನಚಿತ್ರ ನಿರ್ದೇಶಕ ಭಗವಾನ್, `ಸರ್ವಜ್ಞಮೂರ್ತಿ ಚಲನಚಿತ್ರವನ್ನು 60ರ ದಶಕದಲ್ಲಿ ಬಹಳ ನಿರೀಕ್ಷೆಯಿಂದ ನಿರ್ಮಿಸಲಾಯಿತು. ರಾಜಕುಮಾರ್ ಹಾಗೂ ಹರಿಣಿ ಅಭಿನಯಿಸಿದ್ದ ಚಿತ್ರ ಚೆನ್ನಾಗಿ ಮೂಡಿ ಬಂದರೂ ಯಶಸ್ಸು ಕಾಣಲಿಲ್ಲ~ ಎಂದರು. <br /> <br /> ಕಾರ್ಯಕ್ರಮದಲ್ಲಿ ಗಾಂಧಿ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್, ಸರ್ವಜ್ಞ ಮಿತ್ರ ವೃಂದದ ಅಧ್ಯಕ್ಷ ಕೆ.ಅಶೋಕ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಸರ್ವಜ್ಞ ಕನ್ನಡದ ಜನ ಸಾಮಾನ್ಯರ ಕವಿಯಾಗಿದ್ದವನು. ಸರ್ವಜ್ಞನ ವಚನಗಳು ಸಮಾಜಕ್ಕೆ ದಾರಿ ದೀಪವಾಗಿರುವಂತವು~ ಎಂದು ಸಾಹಿತಿ ಚಂದ್ರಶೇಖರ ಪಾಟೀಲ ಹೇಳಿದರು. <br /> <br /> ಇತ್ತೀಚೆಗೆ ಶ್ರೀ ರಾಮಪುರದ ಸರ್ವಜ್ಞ ಮಿತ್ರ ವೃಂದದ 39 ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಕ್ರಾಂತಿ ಕವಿ ಸರ್ವಜ್ಞ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.<br /> <br /> ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಚಲನಚಿತ್ರ ನಿರ್ದೇಶಕ ಭಗವಾನ್, `ಸರ್ವಜ್ಞಮೂರ್ತಿ ಚಲನಚಿತ್ರವನ್ನು 60ರ ದಶಕದಲ್ಲಿ ಬಹಳ ನಿರೀಕ್ಷೆಯಿಂದ ನಿರ್ಮಿಸಲಾಯಿತು. ರಾಜಕುಮಾರ್ ಹಾಗೂ ಹರಿಣಿ ಅಭಿನಯಿಸಿದ್ದ ಚಿತ್ರ ಚೆನ್ನಾಗಿ ಮೂಡಿ ಬಂದರೂ ಯಶಸ್ಸು ಕಾಣಲಿಲ್ಲ~ ಎಂದರು. <br /> <br /> ಕಾರ್ಯಕ್ರಮದಲ್ಲಿ ಗಾಂಧಿ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್, ಸರ್ವಜ್ಞ ಮಿತ್ರ ವೃಂದದ ಅಧ್ಯಕ್ಷ ಕೆ.ಅಶೋಕ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>