<p><strong>ಬೆಂಗಳೂರು:</strong> ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿರುವ ಕಾರ್ಮಿಕರು ಮತ್ತಿತರ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವ ದೃಷ್ಟಿಯಿಂದ ರಾಜ್ಯದಲ್ಲಿ `ನಿರ್ಮಾಣ ಅಕಾಡೆಮಿ~ ಸ್ಥಾಪಿಸುವ ಇಂಗಿತವನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವ್ಯಕ್ತಪಡಿಸಿದರು.<br /> <br /> 12ನೇ ಪಂಚವಾರ್ಷಿಕ ಯೋಜನೆಯಲ್ಲಿ ನಿರ್ಮಾಣ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಸುಧಾರಣೆಗಳಿಗೆ ಸಂಬಂಧಿಸಿದಂತೆ ನಗರದಲ್ಲಿ ನಡೆದ ಎರಡು ದಿನಗಳ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ತಜ್ಞರ ತಂಡ ಮತ್ತು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ ಅವರು ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು.<br /> <br /> ಕಾಮಗಾರಿ ಗುಣನಿಯಂತ್ರಣ ಕಾರ್ಯಪಡೆಯ ಆಶ್ರಯದಲ್ಲಿ ನಡೆದ ಕಾರ್ಯಾಗಾರದಲ್ಲಿ ಚರ್ಚೆಗೆ ಬಂದ ವಿಷಯಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಕಾರ್ಮಿಕರಿಗೆ ತರಬೇತಿ ನೀಡಲು ಅಕಾಡೆಮಿ ಸ್ಥಾಪಿಸಬೇಕು ಎಂದು ಮಾಡಿದ ಮನವಿಗೆ ಸ್ಪಂದಿಸಿದ್ದು, ಬಜೆಟ್ನಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ರಾಮಚಂದ್ರಗೌಡ ತಿಳಿಸಿದರು.<br /> <br /> ಅಕಾಡೆಮಿಯಲ್ಲಿ ಕಾಯಂ ಆಗಿ ಮುಖ್ಯ ಎಂಜಿನಿಯರ್ ಇರುತ್ತಾರೆ.ನಿರ್ಮಾಣ ಕ್ಷೇತ್ರದ ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರುವಂತೆ ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿರುತ್ತದೆ. ಅಕಾಡೆಮಿಗೆ ಬೇಕಾದ ಹಣ ಮತ್ತು ಜಾಗವನ್ನು ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರಕಟಿಸುವ ಸಂಭವವಿದೆ ಎಂದರು.<br /> <br /> ಶಾಸಕರ ಗೈರು: ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿರುವ 18 ಶಾಸಕರ ಸಲಹೆಗಳನ್ನು ಪಡೆಯುವ ಉದ್ದೇಶದಿಂದ ಶುಕ್ರವಾರದ ಕಾರ್ಯಾಗಾರಕ್ಕೆ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಬಿ.ಎನ್.ವಿಜಯಕುಮಾರ್, ಪಿ.ಎಂ.ನರೇಂದ್ರಸ್ವಾಮಿ, ಶಶಿಲ್ ನಮೋಶಿ ಮಾತ್ರ ಭಾಗವಹಿಸಿದ್ದರು.<br /> <br /> ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ ಕಾರ್ಯಾಗಾರ ಉದ್ಘಾಟಿಸಿದರು. ತಜ್ಞರ ತಂಡದ ಸಂಚಾಲಕ ಪಿ.ಆರ್.ಸ್ವರೂಪ್, ಗುಣನಿಯಂತ್ರಣ ಕಾರ್ಯಪಡೆ ಸದಸ್ಯ ಕಾರ್ಯದರ್ಶಿ ಐ.ರವೀಂದ್ರನಾಥ್ ಸೇರಿದಂತೆ ಎಂಜಿನಿಯರ್ಗಳು, ಬಿಲ್ಡರ್ಗಳು, ನಿರ್ಮಾಣ ಕ್ಷೇತ್ರದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿರುವ ಕಾರ್ಮಿಕರು ಮತ್ತಿತರ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವ ದೃಷ್ಟಿಯಿಂದ ರಾಜ್ಯದಲ್ಲಿ `ನಿರ್ಮಾಣ ಅಕಾಡೆಮಿ~ ಸ್ಥಾಪಿಸುವ ಇಂಗಿತವನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವ್ಯಕ್ತಪಡಿಸಿದರು.<br /> <br /> 12ನೇ ಪಂಚವಾರ್ಷಿಕ ಯೋಜನೆಯಲ್ಲಿ ನಿರ್ಮಾಣ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಸುಧಾರಣೆಗಳಿಗೆ ಸಂಬಂಧಿಸಿದಂತೆ ನಗರದಲ್ಲಿ ನಡೆದ ಎರಡು ದಿನಗಳ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ತಜ್ಞರ ತಂಡ ಮತ್ತು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ ಅವರು ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು.<br /> <br /> ಕಾಮಗಾರಿ ಗುಣನಿಯಂತ್ರಣ ಕಾರ್ಯಪಡೆಯ ಆಶ್ರಯದಲ್ಲಿ ನಡೆದ ಕಾರ್ಯಾಗಾರದಲ್ಲಿ ಚರ್ಚೆಗೆ ಬಂದ ವಿಷಯಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಕಾರ್ಮಿಕರಿಗೆ ತರಬೇತಿ ನೀಡಲು ಅಕಾಡೆಮಿ ಸ್ಥಾಪಿಸಬೇಕು ಎಂದು ಮಾಡಿದ ಮನವಿಗೆ ಸ್ಪಂದಿಸಿದ್ದು, ಬಜೆಟ್ನಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ರಾಮಚಂದ್ರಗೌಡ ತಿಳಿಸಿದರು.<br /> <br /> ಅಕಾಡೆಮಿಯಲ್ಲಿ ಕಾಯಂ ಆಗಿ ಮುಖ್ಯ ಎಂಜಿನಿಯರ್ ಇರುತ್ತಾರೆ.ನಿರ್ಮಾಣ ಕ್ಷೇತ್ರದ ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರುವಂತೆ ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿರುತ್ತದೆ. ಅಕಾಡೆಮಿಗೆ ಬೇಕಾದ ಹಣ ಮತ್ತು ಜಾಗವನ್ನು ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರಕಟಿಸುವ ಸಂಭವವಿದೆ ಎಂದರು.<br /> <br /> ಶಾಸಕರ ಗೈರು: ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿರುವ 18 ಶಾಸಕರ ಸಲಹೆಗಳನ್ನು ಪಡೆಯುವ ಉದ್ದೇಶದಿಂದ ಶುಕ್ರವಾರದ ಕಾರ್ಯಾಗಾರಕ್ಕೆ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಬಿ.ಎನ್.ವಿಜಯಕುಮಾರ್, ಪಿ.ಎಂ.ನರೇಂದ್ರಸ್ವಾಮಿ, ಶಶಿಲ್ ನಮೋಶಿ ಮಾತ್ರ ಭಾಗವಹಿಸಿದ್ದರು.<br /> <br /> ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ ಕಾರ್ಯಾಗಾರ ಉದ್ಘಾಟಿಸಿದರು. ತಜ್ಞರ ತಂಡದ ಸಂಚಾಲಕ ಪಿ.ಆರ್.ಸ್ವರೂಪ್, ಗುಣನಿಯಂತ್ರಣ ಕಾರ್ಯಪಡೆ ಸದಸ್ಯ ಕಾರ್ಯದರ್ಶಿ ಐ.ರವೀಂದ್ರನಾಥ್ ಸೇರಿದಂತೆ ಎಂಜಿನಿಯರ್ಗಳು, ಬಿಲ್ಡರ್ಗಳು, ನಿರ್ಮಾಣ ಕ್ಷೇತ್ರದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>