<p>ಲಖನೌ (ಪಿಟಿಐ): ಬಾಂದಾ ಜಿಲ್ಲೆಯ ಕಾರಿಯಾ ಕಾಲುವೆ ಮೇಲೆ ನಿರ್ಮಾಣ ಹಂತದ ಸೇತುವೆಯನ್ನು ವೀಕ್ಷಿಸಿದ್ದಕ್ಕಾಗಿ ಇದೀಗ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಉತ್ತರ ಪ್ರದೇಶ ಲೋಕೋಪಯೋಗಿ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.<br /> <br /> ಈ ನಾಯಕರು ಸ್ಥಳದಿಂದ ತೆರಳಿದ ಸಂದರ್ಭದಲ್ಲಿ ಸೇತುವೆಯ ಕಾಂಕ್ರೀಟ್ ಹಲಗೆ ಕುಸಿದಿರುವುದು ವಿವಾದಕ್ಕೆ ಕಾರಣವಾಗಿದೆ. ಇದರಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ರೀಟಾ ಬಹುಗುಣ ಜೋಶಿ, ಶಾಸಕ ವಿವೇಕ್ ಸಿಂಗ್ ಅವರ ಪಾತ್ರವನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಇಲಾಖೆ ಹೇಳಿದೆ. <br /> <br /> `ಇದೇ 12ರಂದು ನಡೆದ ಈ ಘಟನೆಯಲ್ಲಿ ಕೆಲ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸೇತುವೆಯ ಆಧಾರಸ್ತಂಭವನ್ನು ತೆಗೆದುಹಾಕಿದ್ದಾರೆ. ರಾಹುಲ್ ಅವರ ಜೊತೆ ಈ ಮುಖಂಡರು ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ್ದ ದೃಶ್ಯವನ್ನು ಕೆಲವು ಸುದ್ದಿ ವಾಹಿನಿಗಳು ಪ್ರಸಾರ ಮಾಡಿವೆ. ಭೇಟಿ ಸಂದರ್ಭದಲ್ಲಿ ಪಕ್ಷದ ಸಹೋದ್ಯೋಗಿಗಳು ರಾಹುಲ್ ಅವರ ಭದ್ರತೆಯನ್ನು ಸಹ ಕಡೆಗಣಿಸಿದ್ದು ಯಾಕೆ ಎಂಬ ಪ್ರಶ್ನೆ ಎದುರಾಗುತ್ತದೆ~ ಎಂದು ಇಲಾಖೆಯ ವಕ್ತಾರರು ಹೇಳಿದ್ದಾರೆ.<br /> <br /> ಈ ಆರೋಪವನ್ನು ಅಲ್ಲಗಳೆದಿರುವ ವಿವೇಕ್ ಸಿಂಗ್, ಸಾರ್ವಜನಿಕರ ಹಣದೊಂದಿಗೆ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸುವುದು ಜನಪ್ರತಿನಿಧಿಗಳ ಹಕ್ಕು ಎಂದು ಸಮರ್ಥಿಸಿಕೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಖನೌ (ಪಿಟಿಐ): ಬಾಂದಾ ಜಿಲ್ಲೆಯ ಕಾರಿಯಾ ಕಾಲುವೆ ಮೇಲೆ ನಿರ್ಮಾಣ ಹಂತದ ಸೇತುವೆಯನ್ನು ವೀಕ್ಷಿಸಿದ್ದಕ್ಕಾಗಿ ಇದೀಗ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಉತ್ತರ ಪ್ರದೇಶ ಲೋಕೋಪಯೋಗಿ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.<br /> <br /> ಈ ನಾಯಕರು ಸ್ಥಳದಿಂದ ತೆರಳಿದ ಸಂದರ್ಭದಲ್ಲಿ ಸೇತುವೆಯ ಕಾಂಕ್ರೀಟ್ ಹಲಗೆ ಕುಸಿದಿರುವುದು ವಿವಾದಕ್ಕೆ ಕಾರಣವಾಗಿದೆ. ಇದರಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ರೀಟಾ ಬಹುಗುಣ ಜೋಶಿ, ಶಾಸಕ ವಿವೇಕ್ ಸಿಂಗ್ ಅವರ ಪಾತ್ರವನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಇಲಾಖೆ ಹೇಳಿದೆ. <br /> <br /> `ಇದೇ 12ರಂದು ನಡೆದ ಈ ಘಟನೆಯಲ್ಲಿ ಕೆಲ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸೇತುವೆಯ ಆಧಾರಸ್ತಂಭವನ್ನು ತೆಗೆದುಹಾಕಿದ್ದಾರೆ. ರಾಹುಲ್ ಅವರ ಜೊತೆ ಈ ಮುಖಂಡರು ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ್ದ ದೃಶ್ಯವನ್ನು ಕೆಲವು ಸುದ್ದಿ ವಾಹಿನಿಗಳು ಪ್ರಸಾರ ಮಾಡಿವೆ. ಭೇಟಿ ಸಂದರ್ಭದಲ್ಲಿ ಪಕ್ಷದ ಸಹೋದ್ಯೋಗಿಗಳು ರಾಹುಲ್ ಅವರ ಭದ್ರತೆಯನ್ನು ಸಹ ಕಡೆಗಣಿಸಿದ್ದು ಯಾಕೆ ಎಂಬ ಪ್ರಶ್ನೆ ಎದುರಾಗುತ್ತದೆ~ ಎಂದು ಇಲಾಖೆಯ ವಕ್ತಾರರು ಹೇಳಿದ್ದಾರೆ.<br /> <br /> ಈ ಆರೋಪವನ್ನು ಅಲ್ಲಗಳೆದಿರುವ ವಿವೇಕ್ ಸಿಂಗ್, ಸಾರ್ವಜನಿಕರ ಹಣದೊಂದಿಗೆ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸುವುದು ಜನಪ್ರತಿನಿಧಿಗಳ ಹಕ್ಕು ಎಂದು ಸಮರ್ಥಿಸಿಕೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>