<p><strong>ಮಹದೇವಪುರ:</strong> ಕ್ಷೇತ್ರದ ಪ್ರಮುಖ ವೃತ್ತಗಳಲ್ಲಿ ಒಂದಾಗಿರುವ ಓ ಫಾರಂ ವೃತ್ತದಲ್ಲಿರುವ ಬಸ್ ನಿಲ್ದಾಣಗಳು ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗಿ ಹೋಗಿವೆ.<br /> <br /> ಓಫಾರಂ-ಹೊಸಕೋಟೆ ರಸ್ತೆಯಲ್ಲಿರುವ ಬಸ್ ನಿಲ್ದಾಣವಂತೂ ಸಂಪೂರ್ಣವಾಗಿ ಮುರಿದು ಹೋಗಿದೆ. ಒಂದು ವರ್ಷದಿಂದ ಅದೇ ಸ್ಥಿತಿಯಲ್ಲಿಯೇ ಇದೆ. ಈ ನಿಲ್ದಾಣವನ್ನು ತೆರವುಗೊಳಿಸುವುದಾಗಲಿ, ದುರಸ್ತಿ ಮಾಡುವ ಕಾರ್ಯ ನಡೆದಿಲ್ಲ. ಅದರ ಪಕ್ಕದಲ್ಲಿಯೇ ನಿರ್ಮಾಣಗೊಂಡಿರುವ ಇನ್ನೊಂದು ಬಸ್ ನಿಲ್ದಾಣದ ಸ್ಥಿತಿ ದಯನೀಯವಾಗಿದೆ.<br /> <br /> ಓಫಾರಂ ವೃತ್ತದಲ್ಲಿ ವೈಟ್ಫೀಲ್ಡ್-ಸರ್ಜಾಪುರ ಮುಖ್ಯ ರಸ್ತೆಯ ನಡುವೆ ಇರುವ ಬಸ್ ನಿಲ್ದಾಣವೂ ಮುರಿದು ಹೋಗಿದೆ. ನಿಲ್ದಾಣದಲ್ಲಿನ ವಿದ್ಯುತ್ ದೀಪಗಳು ಸರಿಯಾಗಿ ಉರಿಯುತ್ತಿಲ್ಲ. ಹೀಗಾಗಿ ಪ್ರಯಾಣಿಕರು ಸಂಜೆಯಾಗುತ್ತಿದ್ದಂತೆ ಬಸ್ ನಿಲ್ದಾಣದಲ್ಲಿ ನಿಂತುಕೊಳ್ಳಲು ಭಯಪಡುತ್ತಾರೆ. ಈ ಪ್ರದೇಶದಲ್ಲಿ ಸರಗಳ್ಳರ ಹಾವಳಿಯೂ ಹೆಚ್ಚಾಗಿದೆ.</p>.<p>ಓಫಾರಂನಿಂದ ಇಂಟರ್ನ್ಯಾಷನಲ್ ಟೆಕ್ ಪಾರ್ಕ್ (ಐಟಿಪಿಎಲ್) ಹಾಗೂ ಟಿನ್ಫ್ಯಾಕ್ಟರಿ, ಬೆಂಗಳೂರು ನಗರದ ಕಡೆಗೆ ಹೋಗುವ ರಸ್ತೆಯಲ್ಲಿರುವ ಬಸ್ ನಿಲ್ದಾಣವೂ ಸುಸ್ಥಿತಿಯಲ್ಲಿ ಇಲ್ಲ. ರಸ್ತೆಯ ಪಕ್ಕದ ಫುಟ್ಫಾತ್ ಮೇಲೆ ನಿಂತುಕೊಂಡು ಪ್ರಯಾಣಿಕರು ಬಸ್ಗಾಗಿ ಕಾಯುತ್ತ ನಿಲ್ಲುತ್ತಾರೆ.<br /> <br /> ಓಫಾರಂನಿಂದ ಚನ್ನಸಂದ್ರ-ಚಿಕ್ಕತಿರುಪತಿ ಕಡೆಗೆ ಹೋಗುವ ರಸ್ತೆಯಲ್ಲಿ 20 ವರ್ಷಗಳಿಂದಲೂ ಅಗತ್ಯವಾದ ಬಸ್ ನಿಲ್ದಾಣವೇ ನಿರ್ಮಾಣಗೊಂಡಿಲ್ಲ. ಈ ಸ್ಥಳದಲ್ಲಿ ಸೂಕ್ತವಾದ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಸ್ಥಳೀಯರು ಅನೇಕ ಬಾರಿ ಒತ್ತಾಯಿಸಿದರೂ ಪ್ರಯೋಜನ ಆಗಿಲ್ಲ.<br /> <br /> `ಸರಿಯಾದ ಬಸ್ ನಿಲ್ದಾಣ ಇಲ್ಲದ ಕಾರಣ ಚಾಲಕರು ಮನಸ್ಸಿಗೆ ಬಂದ ಕಡೆಗಳಲ್ಲಿ ಬಸ್ಗಳನ್ನು ನಿಲ್ಲಿಸುತ್ತಾರೆ. ಹಾಗಾಗಿ ಅತ್ತಿತ್ತ ಓಡೋಡಿ ಹೋಗಿ ಬಸ್ಗಳನ್ನು ಹತ್ತಬೇಕಾಗುತ್ತಿದೆ. ಈ ಬಗ್ಗೆ ಬಿಎಂಟಿಸಿ ಗಮನಹರಿಸುತ್ತಿಲ್ಲ' ಎಂದು ಪ್ರಯಾಣಿಕ ಅರುಣಕುಮಾರ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇವಪುರ:</strong> ಕ್ಷೇತ್ರದ ಪ್ರಮುಖ ವೃತ್ತಗಳಲ್ಲಿ ಒಂದಾಗಿರುವ ಓ ಫಾರಂ ವೃತ್ತದಲ್ಲಿರುವ ಬಸ್ ನಿಲ್ದಾಣಗಳು ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗಿ ಹೋಗಿವೆ.<br /> <br /> ಓಫಾರಂ-ಹೊಸಕೋಟೆ ರಸ್ತೆಯಲ್ಲಿರುವ ಬಸ್ ನಿಲ್ದಾಣವಂತೂ ಸಂಪೂರ್ಣವಾಗಿ ಮುರಿದು ಹೋಗಿದೆ. ಒಂದು ವರ್ಷದಿಂದ ಅದೇ ಸ್ಥಿತಿಯಲ್ಲಿಯೇ ಇದೆ. ಈ ನಿಲ್ದಾಣವನ್ನು ತೆರವುಗೊಳಿಸುವುದಾಗಲಿ, ದುರಸ್ತಿ ಮಾಡುವ ಕಾರ್ಯ ನಡೆದಿಲ್ಲ. ಅದರ ಪಕ್ಕದಲ್ಲಿಯೇ ನಿರ್ಮಾಣಗೊಂಡಿರುವ ಇನ್ನೊಂದು ಬಸ್ ನಿಲ್ದಾಣದ ಸ್ಥಿತಿ ದಯನೀಯವಾಗಿದೆ.<br /> <br /> ಓಫಾರಂ ವೃತ್ತದಲ್ಲಿ ವೈಟ್ಫೀಲ್ಡ್-ಸರ್ಜಾಪುರ ಮುಖ್ಯ ರಸ್ತೆಯ ನಡುವೆ ಇರುವ ಬಸ್ ನಿಲ್ದಾಣವೂ ಮುರಿದು ಹೋಗಿದೆ. ನಿಲ್ದಾಣದಲ್ಲಿನ ವಿದ್ಯುತ್ ದೀಪಗಳು ಸರಿಯಾಗಿ ಉರಿಯುತ್ತಿಲ್ಲ. ಹೀಗಾಗಿ ಪ್ರಯಾಣಿಕರು ಸಂಜೆಯಾಗುತ್ತಿದ್ದಂತೆ ಬಸ್ ನಿಲ್ದಾಣದಲ್ಲಿ ನಿಂತುಕೊಳ್ಳಲು ಭಯಪಡುತ್ತಾರೆ. ಈ ಪ್ರದೇಶದಲ್ಲಿ ಸರಗಳ್ಳರ ಹಾವಳಿಯೂ ಹೆಚ್ಚಾಗಿದೆ.</p>.<p>ಓಫಾರಂನಿಂದ ಇಂಟರ್ನ್ಯಾಷನಲ್ ಟೆಕ್ ಪಾರ್ಕ್ (ಐಟಿಪಿಎಲ್) ಹಾಗೂ ಟಿನ್ಫ್ಯಾಕ್ಟರಿ, ಬೆಂಗಳೂರು ನಗರದ ಕಡೆಗೆ ಹೋಗುವ ರಸ್ತೆಯಲ್ಲಿರುವ ಬಸ್ ನಿಲ್ದಾಣವೂ ಸುಸ್ಥಿತಿಯಲ್ಲಿ ಇಲ್ಲ. ರಸ್ತೆಯ ಪಕ್ಕದ ಫುಟ್ಫಾತ್ ಮೇಲೆ ನಿಂತುಕೊಂಡು ಪ್ರಯಾಣಿಕರು ಬಸ್ಗಾಗಿ ಕಾಯುತ್ತ ನಿಲ್ಲುತ್ತಾರೆ.<br /> <br /> ಓಫಾರಂನಿಂದ ಚನ್ನಸಂದ್ರ-ಚಿಕ್ಕತಿರುಪತಿ ಕಡೆಗೆ ಹೋಗುವ ರಸ್ತೆಯಲ್ಲಿ 20 ವರ್ಷಗಳಿಂದಲೂ ಅಗತ್ಯವಾದ ಬಸ್ ನಿಲ್ದಾಣವೇ ನಿರ್ಮಾಣಗೊಂಡಿಲ್ಲ. ಈ ಸ್ಥಳದಲ್ಲಿ ಸೂಕ್ತವಾದ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಸ್ಥಳೀಯರು ಅನೇಕ ಬಾರಿ ಒತ್ತಾಯಿಸಿದರೂ ಪ್ರಯೋಜನ ಆಗಿಲ್ಲ.<br /> <br /> `ಸರಿಯಾದ ಬಸ್ ನಿಲ್ದಾಣ ಇಲ್ಲದ ಕಾರಣ ಚಾಲಕರು ಮನಸ್ಸಿಗೆ ಬಂದ ಕಡೆಗಳಲ್ಲಿ ಬಸ್ಗಳನ್ನು ನಿಲ್ಲಿಸುತ್ತಾರೆ. ಹಾಗಾಗಿ ಅತ್ತಿತ್ತ ಓಡೋಡಿ ಹೋಗಿ ಬಸ್ಗಳನ್ನು ಹತ್ತಬೇಕಾಗುತ್ತಿದೆ. ಈ ಬಗ್ಗೆ ಬಿಎಂಟಿಸಿ ಗಮನಹರಿಸುತ್ತಿಲ್ಲ' ಎಂದು ಪ್ರಯಾಣಿಕ ಅರುಣಕುಮಾರ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>