<p>ಲಿಂಗಸುಗೂರ: ತಾಲ್ಲೂಕಿನಾದ್ಯಂತ ಅಂತರ್ಜಲಮಟ್ಟ ಕುಸಿತದಿಂದ ಕೆಲ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಅಭಾವ ತಲೆದೋರಿದೆ. ಆದರೆ, ಕಳ್ಳಿಲಿಂಗಸುಗೂರ ಗ್ರಾಮದಲ್ಲಿ ಅಂತರ್ಜಲದ ಕೊರತೆ ಇಲ್ಲ. ಗ್ರಾಮ ಪಂಚಾಯಿತಿ ನಿರ್ವಹಣೆ ಹಾಗೂ ಅಸಮರ್ಪಕ ವಿದ್ಯುತ್ ಸಂಪರ್ಕದಿಂದ ಕುಡಿಯುವ ನೀರಿನ ಸಮಸ್ಯೆಯಲ್ಲಿ ಗ್ರಾಮಸ್ಥರು ಪರದಾಡುವಂತಾಗಿದೆ ಎಂದು ಅಮರೇಶ ಆರೋಪಿಸಿದ್ದಾರೆ.<br /> <br /> ಕಳೆದ ಹಲವಾರು ವರ್ಷಗಳಿಂದ ತೆರೆದ ಬಾವಿಯ ಕಲುಷಿತ ನೀರನ್ನೆ ಗ್ರಾಮಕ್ಕೆ ಪೂರೈಸಲಾಗುತ್ತಿದೆ. ತೆರೆದಬಾವಿಯ ಸುತ್ತಮುತ್ತ ನಿರ್ಮಿಸಿದ ಕಟ್ಟೆಯ ಮೇಲ್ಭಾಗದಲ್ಲಿಯೆ ಇಡೀ ಗ್ರಾಮಸ್ಥರು ಬಟ್ಟೆ ತೊಳೆಯುತ್ತಾರೆ. <br /> <br /> ಬಟ್ಟೆ ತೊಳೆದ ನೀರು ಪುನಃ ಬಾವಿಗೆ ಸೇರ್ಪಡೆಗೊಳ್ಳುತ್ತಿದೆ. ಹೀಗಾಗಿ ಗ್ರಾಮಸ್ಥರು ಶುದ್ಧೀಕರಣಗೊಳ್ಳದ ನೀರನ್ನೆ ಅನಿವಾರ್ಯವಾಗಿ ಬಳಸುವಂತಾಗಿದೆ ಎಂದು ಹುಲಿಗೆಮ್ಮ ದೂರಿದ್ದಾರೆ.<br /> <br /> ತೆರೆದಬಾವಿ ನೀರು ಹೇಗೇ ಇರಲಿ ಬಳಕೆಗೆ ಮತ್ತು ಕುಡಿಯಲು ಬಳಸುತ್ತಿದ್ದೇವೆ. ಆ ನೀರನ್ನು ಕೂಡ ನಿಗದಿತ ಅವಧಿಯಲ್ಲಿ ಬಿಡುತ್ತಿಲ್ಲ. ಬಟ್ಟೆತೊಳೆಯಲು ಪ್ರತ್ಯೇಕ ವ್ಯವಸ್ಥೆಗೆ ಸಾಕಷ್ಟುಸಲ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜೆಸ್ಕಾಂ ಅಧಿಕಾರಿಗಳು ಸಮರ್ಪಕ ವಿದ್ಯುತ್ ಪೂರೈಸದೆ ಇರುವುದು ನೀರಿನ ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರ: ತಾಲ್ಲೂಕಿನಾದ್ಯಂತ ಅಂತರ್ಜಲಮಟ್ಟ ಕುಸಿತದಿಂದ ಕೆಲ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಅಭಾವ ತಲೆದೋರಿದೆ. ಆದರೆ, ಕಳ್ಳಿಲಿಂಗಸುಗೂರ ಗ್ರಾಮದಲ್ಲಿ ಅಂತರ್ಜಲದ ಕೊರತೆ ಇಲ್ಲ. ಗ್ರಾಮ ಪಂಚಾಯಿತಿ ನಿರ್ವಹಣೆ ಹಾಗೂ ಅಸಮರ್ಪಕ ವಿದ್ಯುತ್ ಸಂಪರ್ಕದಿಂದ ಕುಡಿಯುವ ನೀರಿನ ಸಮಸ್ಯೆಯಲ್ಲಿ ಗ್ರಾಮಸ್ಥರು ಪರದಾಡುವಂತಾಗಿದೆ ಎಂದು ಅಮರೇಶ ಆರೋಪಿಸಿದ್ದಾರೆ.<br /> <br /> ಕಳೆದ ಹಲವಾರು ವರ್ಷಗಳಿಂದ ತೆರೆದ ಬಾವಿಯ ಕಲುಷಿತ ನೀರನ್ನೆ ಗ್ರಾಮಕ್ಕೆ ಪೂರೈಸಲಾಗುತ್ತಿದೆ. ತೆರೆದಬಾವಿಯ ಸುತ್ತಮುತ್ತ ನಿರ್ಮಿಸಿದ ಕಟ್ಟೆಯ ಮೇಲ್ಭಾಗದಲ್ಲಿಯೆ ಇಡೀ ಗ್ರಾಮಸ್ಥರು ಬಟ್ಟೆ ತೊಳೆಯುತ್ತಾರೆ. <br /> <br /> ಬಟ್ಟೆ ತೊಳೆದ ನೀರು ಪುನಃ ಬಾವಿಗೆ ಸೇರ್ಪಡೆಗೊಳ್ಳುತ್ತಿದೆ. ಹೀಗಾಗಿ ಗ್ರಾಮಸ್ಥರು ಶುದ್ಧೀಕರಣಗೊಳ್ಳದ ನೀರನ್ನೆ ಅನಿವಾರ್ಯವಾಗಿ ಬಳಸುವಂತಾಗಿದೆ ಎಂದು ಹುಲಿಗೆಮ್ಮ ದೂರಿದ್ದಾರೆ.<br /> <br /> ತೆರೆದಬಾವಿ ನೀರು ಹೇಗೇ ಇರಲಿ ಬಳಕೆಗೆ ಮತ್ತು ಕುಡಿಯಲು ಬಳಸುತ್ತಿದ್ದೇವೆ. ಆ ನೀರನ್ನು ಕೂಡ ನಿಗದಿತ ಅವಧಿಯಲ್ಲಿ ಬಿಡುತ್ತಿಲ್ಲ. ಬಟ್ಟೆತೊಳೆಯಲು ಪ್ರತ್ಯೇಕ ವ್ಯವಸ್ಥೆಗೆ ಸಾಕಷ್ಟುಸಲ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜೆಸ್ಕಾಂ ಅಧಿಕಾರಿಗಳು ಸಮರ್ಪಕ ವಿದ್ಯುತ್ ಪೂರೈಸದೆ ಇರುವುದು ನೀರಿನ ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>