<p>ಪೂಂಚ್, ಜಮ್ಮು ಮತ್ತು ಕಾಶ್ಮೀರ (ಪಿಟಿಐ): ಕ್ರಿಕೆಟ್ನಿಂದ ನಿವೃತ್ತಿಯಾದ ಬಳಿಕ `ಖಂಡಿತವಾಗಿಯೂ~ ಸೇನಾ ಪಡೆಯಲ್ಲಿ ಸೇವೆ ಸಲ್ಲಿಸಲು ಬಯಸುವೆನು ಎಂದು ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ ನುಡಿದಿದ್ದಾರೆ.<br /> <br /> ದೋನಿ ಅವರಿಗೆ ಕಳೆದ ವರ್ಷ ಭೂಸೇನೆಯ ಗೌರವ ಲೆಫ್ಟಿನೆಂಟ್ ಕರ್ನರ್ ಪದವಿ ನೀಡಲಾಗಿತ್ತು. ಶನಿವಾರ ಸಿಯಾಚಿನ್ಗೆ ಭೇಟಿ ನೀಡಿದ ದೋನಿ ಸೈನಿಕರ ಜೊತೆ ಕಾಲ ಕಳೆದರು. ಈ ಸಂದರ್ಭ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದರು. `ಕ್ರಿಕೆಟ್ನಿಂದಾಗಿ ನಾನು ಇದೀಗ ಇಲ್ಲಿಗೆ ಬಂದಿದ್ದೇನೆ. ಆದ್ದರಿಂದ ಈಗ ಏನಿದ್ದರೂ ಕ್ರಿಕೆಟ್ನತ್ತ ಮಾತ್ರ ಗಮನ ಕೇಂದ್ರೀಕರಿಸುವೆ. ನಿವೃತ್ತಿಯಾದ ಬಳಿಕ ಖಂಡಿತವಾಗಿಯೂ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುತ್ತೇನೆ~ ಎಂದು ಹೇಳಿದ್ದಾರೆ.<br /> <br /> ದೋನಿ ಭಾನುವಾರ ಉಧಂಪುರ ಮತ್ತು ಲೇಹ್ಗೆ ಭೇಟಿ ನೀಡಲಿದ್ದಾರೆ. ಆ ಬಳಿಕ ಬಾರಾಮುಲ್ಲಾ ಜಿಲ್ಲೆಗೆ ತೆರಳುವರು. ಅಲ್ಲಿನ ಶೌಕತ್ ಅಲಿ ಕ್ರೀಡಾಂಗಣದಲ್ಲಿ ನಡೆಯುವ ಕಾಶ್ಮೀರ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿಯ ಫೈನಲ್ ಪಂದ್ಯವನ್ನು ವೀಕ್ಷಿಸಲಿದ್ದಾರೆ.<br /> <br /> `ಸೇನಾಧಿಕಾರಿಗಳ ಕುಟುಂಬದ ಸದಸ್ಯರು ವರ್ಷದ ಈ ಅವಧಿಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ಆದ್ದರಿಂದ ಅವರ ಜೊತೆಯೂ ಮಾತನಾಡುವ ಅವಕಾಶ ಲಭಿಸಿತು. ಇದೊಂದು ವಿಶೇಷ ಅನುಭವ~ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪೂಂಚ್, ಜಮ್ಮು ಮತ್ತು ಕಾಶ್ಮೀರ (ಪಿಟಿಐ): ಕ್ರಿಕೆಟ್ನಿಂದ ನಿವೃತ್ತಿಯಾದ ಬಳಿಕ `ಖಂಡಿತವಾಗಿಯೂ~ ಸೇನಾ ಪಡೆಯಲ್ಲಿ ಸೇವೆ ಸಲ್ಲಿಸಲು ಬಯಸುವೆನು ಎಂದು ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ ನುಡಿದಿದ್ದಾರೆ.<br /> <br /> ದೋನಿ ಅವರಿಗೆ ಕಳೆದ ವರ್ಷ ಭೂಸೇನೆಯ ಗೌರವ ಲೆಫ್ಟಿನೆಂಟ್ ಕರ್ನರ್ ಪದವಿ ನೀಡಲಾಗಿತ್ತು. ಶನಿವಾರ ಸಿಯಾಚಿನ್ಗೆ ಭೇಟಿ ನೀಡಿದ ದೋನಿ ಸೈನಿಕರ ಜೊತೆ ಕಾಲ ಕಳೆದರು. ಈ ಸಂದರ್ಭ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದರು. `ಕ್ರಿಕೆಟ್ನಿಂದಾಗಿ ನಾನು ಇದೀಗ ಇಲ್ಲಿಗೆ ಬಂದಿದ್ದೇನೆ. ಆದ್ದರಿಂದ ಈಗ ಏನಿದ್ದರೂ ಕ್ರಿಕೆಟ್ನತ್ತ ಮಾತ್ರ ಗಮನ ಕೇಂದ್ರೀಕರಿಸುವೆ. ನಿವೃತ್ತಿಯಾದ ಬಳಿಕ ಖಂಡಿತವಾಗಿಯೂ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುತ್ತೇನೆ~ ಎಂದು ಹೇಳಿದ್ದಾರೆ.<br /> <br /> ದೋನಿ ಭಾನುವಾರ ಉಧಂಪುರ ಮತ್ತು ಲೇಹ್ಗೆ ಭೇಟಿ ನೀಡಲಿದ್ದಾರೆ. ಆ ಬಳಿಕ ಬಾರಾಮುಲ್ಲಾ ಜಿಲ್ಲೆಗೆ ತೆರಳುವರು. ಅಲ್ಲಿನ ಶೌಕತ್ ಅಲಿ ಕ್ರೀಡಾಂಗಣದಲ್ಲಿ ನಡೆಯುವ ಕಾಶ್ಮೀರ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿಯ ಫೈನಲ್ ಪಂದ್ಯವನ್ನು ವೀಕ್ಷಿಸಲಿದ್ದಾರೆ.<br /> <br /> `ಸೇನಾಧಿಕಾರಿಗಳ ಕುಟುಂಬದ ಸದಸ್ಯರು ವರ್ಷದ ಈ ಅವಧಿಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ಆದ್ದರಿಂದ ಅವರ ಜೊತೆಯೂ ಮಾತನಾಡುವ ಅವಕಾಶ ಲಭಿಸಿತು. ಇದೊಂದು ವಿಶೇಷ ಅನುಭವ~ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>