<p>ದಾವಣಗೆರೆ: ಜಿಲ್ಲೆಯಲ್ಲಿ ನಿವೇಶನರಹಿತ ದಲಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಟಿ.ಅಂಜನಕುಮಾರ್ ಭರವಸೆ ನೀಡಿದರು.<br /> <br /> ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಜಿಲ್ಲೆಯಲ್ಲಿ (ನಗರ– 25 ಸಾವಿರ, ಇತರೆಡೆ 10 ಸಾವಿರ) ನಿವೇಶನರಹಿತ 35 ಸಾವಿರ ದಲಿತರನ್ನು ಗುರುತಿಸಲಾಗಿದೆ. ಅಗತ್ಯ ಜಮೀನು ಸಿಕ್ಕಿ, ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದರೆ ಪ್ರಕ್ರಿಯೆ ಸುಲಭವಾಗಲಿದೆ. ವರ್ಷದೊಳಗೆ ವಸತಿ ಸೌಲಭ್ಯ ಕಲ್ಪಿಸಬಹುದು. 12 ವರ್ಷದಿಂದ ಈ ಕಾರ್ಯ ನಡೆದಿಲ್ಲ. ಇದಕ್ಕಾಗಿ ಅವಕಾಶ ಕಲ್ಪಿಸಬೇಕು ಎಂದು ದಲಿತ ಸಂಘಟನೆಗಳು ಸಿಎಂಗೆ ಮನವಿ ನೀಡಿದರೆ ಅನುಕೂಲ ಆಗುತ್ತದೆ. ದಲಿತರ ಸ್ಮಶಾನ ಹಾಗೂ ವಸತಿ ಸೌಲಭ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.<br /> <br /> ಚಿಕ್ಕನಹಳ್ಳಿ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂಬ ದಲಿತ ಮುಖಂಡ ಹೂವಿನಮಡು ಅಂಜಿನಪ್ಪ ಅವರ ಒತ್ತಾಯಕ್ಕೆ, ಪರಿಶೀಲಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದರು. ಲೋಕಿಕೆರೆ ದಲಿತರಿಗೆ ಹಕ್ಕುಪತ್ರ ನೀಡಬೇಕು ಎಂದು ತಾಲ್ಲೂಕು ಪಂಚಾಯ್ತಿ ಇಒ ಹಾಗೂ ತಹಶೀಲ್ದಾರ್ಗೆ ಸೂಚಿಸಿದರು.<br /> <br /> ಎಸಿಎಫ್ಗೆ ತರಾಟೆ!: ಹೊನ್ನಾಳಿ ತಾಲ್ಲೂಕಿನ ಹಳೇ ಜೋಗದಲ್ಲಿ ದಲಿತ ಕುಟುಂಬಗಳು ಸಾಗುವಳಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಮುಖಂಡ ಕೊಡತಾಳ್ ರುದ್ರೇಶ್, ಎಸಿಎಫ್ ಅನ್ನು ಪ್ರಶ್ನಿಸಿದರು.<br /> <br /> ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ. ಜೋಳ ಬಿತ್ತುತ್ತಿದ್ದವರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಲು ಅವರೇ ಕಾರಣ. ಬಡ ದಲಿತ ಮಹಿಳೆಯರು ಹರಿದ ಬಟ್ಟೆಯಲ್ಲಿ ನ್ಯಾಯಾಲಯಲ್ಲಿ ನಿಲ್ಲುವಂತಾಗಿದೆ ಎಂದು ದೂರಿದರು.<br /> <br /> ಬೇರೆ ಜಾತಿಯವರೂ ಅಲ್ಲಿ ಸಾಗುವಳಿ ಮಾಡುತ್ತಾರೆ. ಆದರೆ, ಆದಿ ಕರ್ನಾಟಕದವರನ್ನು ಮಾತ್ರ ಏಕೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಪ್ರಶ್ನಿಸಿದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ಎಸಿಎಫ್, ‘ಎಲ್ಲ ಭೂಮಿಯನ್ನೂ ತೆರವುಗೊಳಿಸಲಾಗುತ್ತಿದೆ’ ಎಂದರು. ಇದಕ್ಕೆ ಕೆರಳಿದ ರುದ್ರೇಶ್, ‘ತಪ್ಪು ಮಾಹಿತಿ ನೀಡಬೇಡಿ. ಎಲ್ಲರನ್ನೂ ತೆರವುಗೊಳಿಸಿದ್ದರೆ ನಾನು ನಿಮ್ಮ ಮನೆಯಲ್ಲಿ ಸಂಬಳಕ್ಕೆ ಇರುತ್ತೇನೆ’ ಎಂದು ಸವಾಲು ಹಾಕಿದರು.<br /> ಎಲ್ಲರಿಗೂ ಒಂದೇ ಮಾನದಂಡ ಇರಬೇಕು. ಜಂಟಿ ಸಮೀಕ್ಷೆ ನಡೆಸಬೇಕು. ಯಥಾಸ್ಥಿತಿ ಮುಂದುವರಿಸಿಕೊಂಡು ಹೋಗಬೇಕು<br /> ಎಂದು ಹೇಳಿದ ಜಿಲ್ಲಾಧಿಕಾರಿ ಚರ್ಚೆಗೆ ತೆರೆ ಎಳೆದರು.<br /> <br /> ಪ್ರತಿ ಗ್ರಾಮದಲ್ಲಿಯೂ ದಲಿತರಿಗೆ ಪ್ರತ್ಯೇಕ ಸ್ಮಶಾನ ಅಭಿವೃದ್ಧಿಪಡಿಸಲು, 2 ಎಕರೆ ಜಾಗ ಮೀಸಲಿಡಬೇಕು ಎಂಬ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಭರವಸೆ ನೀಡಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪ್ರಕಾಶ್, ಜಿಲ್ಲಾ ಪಂಚಾಯ್ತಿ ಸಿಇಒ ಎ.ಬಿ.ಹೇಮಚಂದ್ರ, ನಗರಪಾಲಿಕೆ ಆಯುಕ್ತ ಬಿ.ಎಚ್.ನಾರಾಯಣಪ್ಪ ಮೊದಲಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಜಿಲ್ಲೆಯಲ್ಲಿ ನಿವೇಶನರಹಿತ ದಲಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಟಿ.ಅಂಜನಕುಮಾರ್ ಭರವಸೆ ನೀಡಿದರು.<br /> <br /> ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಜಿಲ್ಲೆಯಲ್ಲಿ (ನಗರ– 25 ಸಾವಿರ, ಇತರೆಡೆ 10 ಸಾವಿರ) ನಿವೇಶನರಹಿತ 35 ಸಾವಿರ ದಲಿತರನ್ನು ಗುರುತಿಸಲಾಗಿದೆ. ಅಗತ್ಯ ಜಮೀನು ಸಿಕ್ಕಿ, ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದರೆ ಪ್ರಕ್ರಿಯೆ ಸುಲಭವಾಗಲಿದೆ. ವರ್ಷದೊಳಗೆ ವಸತಿ ಸೌಲಭ್ಯ ಕಲ್ಪಿಸಬಹುದು. 12 ವರ್ಷದಿಂದ ಈ ಕಾರ್ಯ ನಡೆದಿಲ್ಲ. ಇದಕ್ಕಾಗಿ ಅವಕಾಶ ಕಲ್ಪಿಸಬೇಕು ಎಂದು ದಲಿತ ಸಂಘಟನೆಗಳು ಸಿಎಂಗೆ ಮನವಿ ನೀಡಿದರೆ ಅನುಕೂಲ ಆಗುತ್ತದೆ. ದಲಿತರ ಸ್ಮಶಾನ ಹಾಗೂ ವಸತಿ ಸೌಲಭ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.<br /> <br /> ಚಿಕ್ಕನಹಳ್ಳಿ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂಬ ದಲಿತ ಮುಖಂಡ ಹೂವಿನಮಡು ಅಂಜಿನಪ್ಪ ಅವರ ಒತ್ತಾಯಕ್ಕೆ, ಪರಿಶೀಲಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದರು. ಲೋಕಿಕೆರೆ ದಲಿತರಿಗೆ ಹಕ್ಕುಪತ್ರ ನೀಡಬೇಕು ಎಂದು ತಾಲ್ಲೂಕು ಪಂಚಾಯ್ತಿ ಇಒ ಹಾಗೂ ತಹಶೀಲ್ದಾರ್ಗೆ ಸೂಚಿಸಿದರು.<br /> <br /> ಎಸಿಎಫ್ಗೆ ತರಾಟೆ!: ಹೊನ್ನಾಳಿ ತಾಲ್ಲೂಕಿನ ಹಳೇ ಜೋಗದಲ್ಲಿ ದಲಿತ ಕುಟುಂಬಗಳು ಸಾಗುವಳಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಮುಖಂಡ ಕೊಡತಾಳ್ ರುದ್ರೇಶ್, ಎಸಿಎಫ್ ಅನ್ನು ಪ್ರಶ್ನಿಸಿದರು.<br /> <br /> ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ. ಜೋಳ ಬಿತ್ತುತ್ತಿದ್ದವರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಲು ಅವರೇ ಕಾರಣ. ಬಡ ದಲಿತ ಮಹಿಳೆಯರು ಹರಿದ ಬಟ್ಟೆಯಲ್ಲಿ ನ್ಯಾಯಾಲಯಲ್ಲಿ ನಿಲ್ಲುವಂತಾಗಿದೆ ಎಂದು ದೂರಿದರು.<br /> <br /> ಬೇರೆ ಜಾತಿಯವರೂ ಅಲ್ಲಿ ಸಾಗುವಳಿ ಮಾಡುತ್ತಾರೆ. ಆದರೆ, ಆದಿ ಕರ್ನಾಟಕದವರನ್ನು ಮಾತ್ರ ಏಕೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಪ್ರಶ್ನಿಸಿದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ಎಸಿಎಫ್, ‘ಎಲ್ಲ ಭೂಮಿಯನ್ನೂ ತೆರವುಗೊಳಿಸಲಾಗುತ್ತಿದೆ’ ಎಂದರು. ಇದಕ್ಕೆ ಕೆರಳಿದ ರುದ್ರೇಶ್, ‘ತಪ್ಪು ಮಾಹಿತಿ ನೀಡಬೇಡಿ. ಎಲ್ಲರನ್ನೂ ತೆರವುಗೊಳಿಸಿದ್ದರೆ ನಾನು ನಿಮ್ಮ ಮನೆಯಲ್ಲಿ ಸಂಬಳಕ್ಕೆ ಇರುತ್ತೇನೆ’ ಎಂದು ಸವಾಲು ಹಾಕಿದರು.<br /> ಎಲ್ಲರಿಗೂ ಒಂದೇ ಮಾನದಂಡ ಇರಬೇಕು. ಜಂಟಿ ಸಮೀಕ್ಷೆ ನಡೆಸಬೇಕು. ಯಥಾಸ್ಥಿತಿ ಮುಂದುವರಿಸಿಕೊಂಡು ಹೋಗಬೇಕು<br /> ಎಂದು ಹೇಳಿದ ಜಿಲ್ಲಾಧಿಕಾರಿ ಚರ್ಚೆಗೆ ತೆರೆ ಎಳೆದರು.<br /> <br /> ಪ್ರತಿ ಗ್ರಾಮದಲ್ಲಿಯೂ ದಲಿತರಿಗೆ ಪ್ರತ್ಯೇಕ ಸ್ಮಶಾನ ಅಭಿವೃದ್ಧಿಪಡಿಸಲು, 2 ಎಕರೆ ಜಾಗ ಮೀಸಲಿಡಬೇಕು ಎಂಬ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಭರವಸೆ ನೀಡಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪ್ರಕಾಶ್, ಜಿಲ್ಲಾ ಪಂಚಾಯ್ತಿ ಸಿಇಒ ಎ.ಬಿ.ಹೇಮಚಂದ್ರ, ನಗರಪಾಲಿಕೆ ಆಯುಕ್ತ ಬಿ.ಎಚ್.ನಾರಾಯಣಪ್ಪ ಮೊದಲಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>