<p>ರಾಜ್ಯ ಸರ್ಕಾರದ ಬಸವ ವಸತಿ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 4 ಸಾವಿರ ಮನೆ ಮಂಜೂರಾಗಿದೆ. ಮನೆ ನಿರ್ಮಿಸಲು ಫಲಾನುಭವಿಗಳು ನಿವೇಶನ ಹೊಂದಿರಬೇಕೆಂಬ ಷರತ್ತು ಇದೆ. ಅಚ್ಚರಿ ಎಂದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಡವರಿಗೆ ಮನೆ ನಿರ್ಮಿಸಲು ಬೇಕಾದ ನಿವೇಶನಗಳೇ ಇಲ್ಲ. <br /> <br /> ಈ ಯೋಜನೆಯಡಿ ದ.ಕ ಜಿಲ್ಲೆಗೆ 2010-11ನೇ ಸಾಲಿನಲ್ಲಿ 28 ಸಾವಿರ ಮನೆಗಳು ಮಂಜೂರಾಗಿವೆ. ಆದರೆ, ಸ್ವಂತ ನಿವೇಶನವಿರುವ ಅರ್ಹ ಫಲಾನುಭವಿಗಳು ಲಭಿಸಿದ್ದು 18,500 ಮಂದಿ ಮಾತ್ರ. 7,500 ಮನೆಗಳ ನಿರ್ಮಾಣ ಆರಂಭಗೊಂಡಿದ್ದು, 1650 ಮನೆಗಳು ಮಾತ್ರ ಪೂರ್ಣಗೊಂಡಿವೆ. <br /> <br /> ನಿವೇಶನರಹಿತರಿಗೆ ನಿವೇಶನ ನೀಡಲು ಸರ್ಕಾರಿ ಜಾಗ ಗುರುತಿಸಲಾಗುತ್ತಿದೆ. ಸರ್ಕಾರಿ ಜಾಗ ಲಭ್ಯ ಇಲ್ಲದ ಕಡೆಗಳಲ್ಲಿ ಖಾಸಗಿ ಜಾಗ ಖರೀದಿಸಿ ಹಂಚಿಕೆ ಮಾಡಲು ಅವಕಾಶವಿದೆ. ಖಾಸಗಿ ಜಾಗ ಖರೀದಿಗೆ ಸೆಂಟ್ಸ್ಗೆ 3 ಸಾವಿರ ರೂಪಾಯಿಯನ್ನು ಮಾತ್ರ ಸರ್ಕಾರ ನೀಡುತ್ತದೆ. ಅಷ್ಟು ಕಡಿಮೆ ಮೊತ್ತದಲ್ಲಿ ಜಿಲ್ಲೆಯಲ್ಲಿ ಎಲ್ಲೂ ಖಾಸಗಿ ಜಾಗ ಲಭ್ಯ ಇಲ್ಲ, ಇದೇ ಸಮಸ್ಯೆಯ ಮೂಲ ಎನ್ನುತ್ತಾರೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು.<br /> <br /> ಆದರೆ, ಈ ಮಾತನ್ನು ಬಡವರಿಗೆ ವಸತಿ ಕಲ್ಪಿಸಲು ಹೋರಾಟ ನಡೆಸುತ್ತಿರುವ ಸಂಘಟನೆಗಳು ಒಪ್ಪುವುದಿಲ್ಲ. ಪಟ್ಟಣಗಳಲ್ಲಿ ಹಾಗೂ ಆಸುಪಾಸಿನ ಗ್ರಾಮಗಳಲ್ಲಿ ಸರ್ಕಾರಿ ಜಾಗ ಇಲ್ಲದಿರಬಹುದು. ಆದರೆ ಗ್ರಾಮೀಣ ಪ್ರದೇಶದಲ್ಲಿ ಈಗಲೂ ಸಾಕಷ್ಟು ಸರ್ಕಾರಿ ಜಾಗ ಖಾಲಿ ಇದೆ. <br /> <br /> ಅನೇಕ ಕಡೆ ಸರ್ಕಾರಿ ಜಾಗ ಒತ್ತುವರಿಯಾಗಿದೆ. ಅವುಗಳನ್ನು ವಶಪಡಿಸಿಕೊಂಡು ಬಡವರಿಗೆ ಹಂಚಲು ಅಧಿಕಾರಿಗಳಿಗೆ ಇಚ್ಛಾಶಕ್ತಿ ಇಲ್ಲ. ನಮ್ಮ ಸಂಘಟನೆಯ ನೇತೃತ್ವದಲ್ಲಿ 15 ಸಾವಿರಕ್ಕೂ ಅಧಿಕ ಬಡವರು ವಸತಿಗಾಗಿ ಅರ್ಜಿ ಸಲ್ಲಿಸ್ದ್ದಿದಾರೆ. ಹೀಗಿರುವಾಗ ಅಧಿಕಾರಿಗಳು ಫಲಾನುಭವಿಗಳು ಸಿಗುತ್ತಿಲ್ಲ ಎನ್ನುವುದು ಎಷ್ಟು ಸರಿ?~ ಎಂದು ಪ್ರಶ್ನಿಸುತ್ತಾರೆ ಡಿವೈಎಫ್ಐ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ. <br /> <strong>ಕಡಿಮೆ ಹಣ: </strong>ಪ್ರತಿ ಮನೆಗೆ ರೂ ಒಂದು ಲಕ್ಷ ರೂಪಾಯಿ ನೀಡಲಾಗುತ್ತಿದೆ. ಈ ಮೊತ್ತದಲ್ಲಿ ಇಲ್ಲಿ ಮನೆ ನಿರ್ಮಿಸುವುದು ಕಷ್ಟಸಾಧ್ಯ. ಕರಾವಳಿಯಲ್ಲಿ ಮೇಸ್ತ್ರಿಗೆ ದಿನಕ್ಕೆ 450 ರೂಪಾಯಿ ಹಾಗೂ ಕೂಲಿಯಾಳುಗಳಿಗೆ 300 ರೂಪಾಯಿ ಸಂಬಳ ನೀಡಬೇಕು.<br /> <br /> ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಬಡವರು ಇಷ್ಟು ಕಡಿಮೆ ಹಣದಲ್ಲಿ ಮನೆ ಕಟ್ಟುವುದು ಹೇಗೆ. ಹಾಗಾಗಿ ಮಂಜೂರಾದ ಮನೆಗಳ ಪೈಕಿ ಶೇ 40ರಷ್ಟು ಪೂರ್ಣಗೊಳ್ಳುವುದಿಲ್ಲ~ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ತಿಳಿಸಿದರು.<br /> ಉಡುಪಿ ಜಿಲ್ಲೆಯಲ್ಲೂ ಇದೇ ಸ್ಥಿತಿ ಇದೆ. <br /> <br /> ಬಸವ ವಸತಿ ಯೋಜನೆಯಲ್ಲಿ 2011-12ನೇ ಸಾಲಿನಲ್ಲಿ ಒಟ್ಟು 6,684 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಇದರಲ್ಲಿ 5312 ಮನೆಗಳ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗಿದೆ. ಆದರೆ, ಪೂರ್ಣಗೊಂಡಿರುವ ಮನೆಗಳ ಸಂಖ್ಯೆ 1,716 ಮಾತ್ರ. 3596 ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. <br /> <strong><br /> ಸರ್ಕಾರಿ ಭೂಮಿ ಇಲ್ಲ: </strong>ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಸವ ವಸತಿ ಯೋಜನೆಯ ಫಲಾನುಭವಿಗಳಿಗೆ ನಿವೇಶನ ನೀಡಲು ಒಂದೇ ಒಂದು ಗುಂಟೆ ಸರ್ಕಾರಿ ಭೂಮಿ ಖಾಲಿ ಇಲ್ಲ. ಆದರೆ, ಬಾಲಸುಬ್ರಹ್ಮಣ್ಯ ನೇತೃತ್ವದ ಸಮಿತಿ ವರದಿ ಪ್ರಕಾರ ಜಿಲ್ಲೆಯಲ್ಲಿ ಅಂದಾಜು 1.60 ಲಕ್ಷ ಹೆಕ್ಟೇರ್ಗೂ ಅಧಿಕ ಸರ್ಕಾರಿ ಭೂಮಿ ಒತ್ತುವರಿಯಾಗಿದೆ!<br /> <br /> ಕಳೆದ ವರ್ಷ ಆಶ್ರಯ ನಿವೇಶನಕ್ಕಾಗಿಯೇ ಜಿಲ್ಲಾಧಿಕಾರಿ ಖಾತೆಗೆ 3.12 ಕೋಟಿ ರೂಪಾಯಿ ಅನುದಾನ ಬಂದಿದೆ. ಈ ಹಣ ಇನ್ನೂ ವಿನಿಯೋಗ ಆಗಿಲ್ಲ. ಭೂಮಿಗೆ ಸರ್ಕಾರ ನಿಗದಿಪಡಿಸಿರುವ ಬೆಲೆಗೂ ಮತ್ತು ಮಾರುಕಟ್ಟೆ ಬೆಲೆಗೂ ಅಜಗಜಾಂತರವಿದೆ.<br /> <br /> ಜಮೀನು ಇರುವವರು ಸರ್ಕಾರಿ ಬೆಲೆಗೆ ಭೂಮಿ ಕೊಡಲು ಸಿದ್ಧರಿಲ್ಲ. ಈ ವರ್ಷ ಜಿಲ್ಲೆಯಲ್ಲಿ ಬಸವ ವಸತಿ ಯೋಜನೆಗೆ 10,793 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ 1,811 ಮನೆಗಳು ಪೂರ್ಣಗೊಂಡಿವೆ. 5,570 ಮನೆಗಳು ಪ್ರಗತಿಯಲ್ಲಿವೆ. 3412 ಮನೆಗಳ ನಿರ್ಮಾಣ ಇನ್ನಷ್ಟೆ ಶುರುವಾಗಬೇಕಿದೆ.<br /> <br /> ಆದರೆ, ವಾಸ್ತವವೇ ಬೇರೆ. ಮೂಡಿಗೆರೆ ತಾಲ್ಲೂಕಿನಲ್ಲಿ ಸುಮಾರು 6ರಿಂದ 7 ಸಾವಿರ ಮಂದಿ ಅರ್ಹರು ವಸತಿ ಯೋಜನೆಯಿಂದ ವಂಚಿತರಾಗಿದ್ದಾರೆ. ಮೂಡಿಗೆರೆ ತಾಲ್ಲೂಕಿನಲ್ಲಿ ಕಳೆದ 15 ವರ್ಷಗಳಿಂದ ಒಂದೇ ಒಂದು ನಿವೇಶನ ವಿತರಿಸಿಲ್ಲ. <br /> <br /> ಫಲಾನುಭವಿಗಳು ಯಾವ ನಿವೇಶನ ತೋರಿಸಿ ಮನೆ ಪಡೆಯಬೇಕು? ಜಿಲ್ಲೆಯಲ್ಲಿ ಕನಿಷ್ಠ 25 ಸಾವಿರ ಅರ್ಹ ಕುಟುಂಬಗಳು ವಸತಿ ಯೋಜನೆಯಿಂದ ವಂಚಿತವಾಗಿವೆ ಎನ್ನುತ್ತಾರೆ ಪ್ರಶ್ನಿಸುತ್ತಾರೆ ಸಿಪಿಐ ರಾಜ್ಯ ಸಹಕಾರ್ಯದರ್ಶಿ ಸಾತಿ ಸುಂದರೇಶ್.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ ಸರ್ಕಾರದ ಬಸವ ವಸತಿ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 4 ಸಾವಿರ ಮನೆ ಮಂಜೂರಾಗಿದೆ. ಮನೆ ನಿರ್ಮಿಸಲು ಫಲಾನುಭವಿಗಳು ನಿವೇಶನ ಹೊಂದಿರಬೇಕೆಂಬ ಷರತ್ತು ಇದೆ. ಅಚ್ಚರಿ ಎಂದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಡವರಿಗೆ ಮನೆ ನಿರ್ಮಿಸಲು ಬೇಕಾದ ನಿವೇಶನಗಳೇ ಇಲ್ಲ. <br /> <br /> ಈ ಯೋಜನೆಯಡಿ ದ.ಕ ಜಿಲ್ಲೆಗೆ 2010-11ನೇ ಸಾಲಿನಲ್ಲಿ 28 ಸಾವಿರ ಮನೆಗಳು ಮಂಜೂರಾಗಿವೆ. ಆದರೆ, ಸ್ವಂತ ನಿವೇಶನವಿರುವ ಅರ್ಹ ಫಲಾನುಭವಿಗಳು ಲಭಿಸಿದ್ದು 18,500 ಮಂದಿ ಮಾತ್ರ. 7,500 ಮನೆಗಳ ನಿರ್ಮಾಣ ಆರಂಭಗೊಂಡಿದ್ದು, 1650 ಮನೆಗಳು ಮಾತ್ರ ಪೂರ್ಣಗೊಂಡಿವೆ. <br /> <br /> ನಿವೇಶನರಹಿತರಿಗೆ ನಿವೇಶನ ನೀಡಲು ಸರ್ಕಾರಿ ಜಾಗ ಗುರುತಿಸಲಾಗುತ್ತಿದೆ. ಸರ್ಕಾರಿ ಜಾಗ ಲಭ್ಯ ಇಲ್ಲದ ಕಡೆಗಳಲ್ಲಿ ಖಾಸಗಿ ಜಾಗ ಖರೀದಿಸಿ ಹಂಚಿಕೆ ಮಾಡಲು ಅವಕಾಶವಿದೆ. ಖಾಸಗಿ ಜಾಗ ಖರೀದಿಗೆ ಸೆಂಟ್ಸ್ಗೆ 3 ಸಾವಿರ ರೂಪಾಯಿಯನ್ನು ಮಾತ್ರ ಸರ್ಕಾರ ನೀಡುತ್ತದೆ. ಅಷ್ಟು ಕಡಿಮೆ ಮೊತ್ತದಲ್ಲಿ ಜಿಲ್ಲೆಯಲ್ಲಿ ಎಲ್ಲೂ ಖಾಸಗಿ ಜಾಗ ಲಭ್ಯ ಇಲ್ಲ, ಇದೇ ಸಮಸ್ಯೆಯ ಮೂಲ ಎನ್ನುತ್ತಾರೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು.<br /> <br /> ಆದರೆ, ಈ ಮಾತನ್ನು ಬಡವರಿಗೆ ವಸತಿ ಕಲ್ಪಿಸಲು ಹೋರಾಟ ನಡೆಸುತ್ತಿರುವ ಸಂಘಟನೆಗಳು ಒಪ್ಪುವುದಿಲ್ಲ. ಪಟ್ಟಣಗಳಲ್ಲಿ ಹಾಗೂ ಆಸುಪಾಸಿನ ಗ್ರಾಮಗಳಲ್ಲಿ ಸರ್ಕಾರಿ ಜಾಗ ಇಲ್ಲದಿರಬಹುದು. ಆದರೆ ಗ್ರಾಮೀಣ ಪ್ರದೇಶದಲ್ಲಿ ಈಗಲೂ ಸಾಕಷ್ಟು ಸರ್ಕಾರಿ ಜಾಗ ಖಾಲಿ ಇದೆ. <br /> <br /> ಅನೇಕ ಕಡೆ ಸರ್ಕಾರಿ ಜಾಗ ಒತ್ತುವರಿಯಾಗಿದೆ. ಅವುಗಳನ್ನು ವಶಪಡಿಸಿಕೊಂಡು ಬಡವರಿಗೆ ಹಂಚಲು ಅಧಿಕಾರಿಗಳಿಗೆ ಇಚ್ಛಾಶಕ್ತಿ ಇಲ್ಲ. ನಮ್ಮ ಸಂಘಟನೆಯ ನೇತೃತ್ವದಲ್ಲಿ 15 ಸಾವಿರಕ್ಕೂ ಅಧಿಕ ಬಡವರು ವಸತಿಗಾಗಿ ಅರ್ಜಿ ಸಲ್ಲಿಸ್ದ್ದಿದಾರೆ. ಹೀಗಿರುವಾಗ ಅಧಿಕಾರಿಗಳು ಫಲಾನುಭವಿಗಳು ಸಿಗುತ್ತಿಲ್ಲ ಎನ್ನುವುದು ಎಷ್ಟು ಸರಿ?~ ಎಂದು ಪ್ರಶ್ನಿಸುತ್ತಾರೆ ಡಿವೈಎಫ್ಐ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ. <br /> <strong>ಕಡಿಮೆ ಹಣ: </strong>ಪ್ರತಿ ಮನೆಗೆ ರೂ ಒಂದು ಲಕ್ಷ ರೂಪಾಯಿ ನೀಡಲಾಗುತ್ತಿದೆ. ಈ ಮೊತ್ತದಲ್ಲಿ ಇಲ್ಲಿ ಮನೆ ನಿರ್ಮಿಸುವುದು ಕಷ್ಟಸಾಧ್ಯ. ಕರಾವಳಿಯಲ್ಲಿ ಮೇಸ್ತ್ರಿಗೆ ದಿನಕ್ಕೆ 450 ರೂಪಾಯಿ ಹಾಗೂ ಕೂಲಿಯಾಳುಗಳಿಗೆ 300 ರೂಪಾಯಿ ಸಂಬಳ ನೀಡಬೇಕು.<br /> <br /> ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಬಡವರು ಇಷ್ಟು ಕಡಿಮೆ ಹಣದಲ್ಲಿ ಮನೆ ಕಟ್ಟುವುದು ಹೇಗೆ. ಹಾಗಾಗಿ ಮಂಜೂರಾದ ಮನೆಗಳ ಪೈಕಿ ಶೇ 40ರಷ್ಟು ಪೂರ್ಣಗೊಳ್ಳುವುದಿಲ್ಲ~ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ತಿಳಿಸಿದರು.<br /> ಉಡುಪಿ ಜಿಲ್ಲೆಯಲ್ಲೂ ಇದೇ ಸ್ಥಿತಿ ಇದೆ. <br /> <br /> ಬಸವ ವಸತಿ ಯೋಜನೆಯಲ್ಲಿ 2011-12ನೇ ಸಾಲಿನಲ್ಲಿ ಒಟ್ಟು 6,684 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಇದರಲ್ಲಿ 5312 ಮನೆಗಳ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗಿದೆ. ಆದರೆ, ಪೂರ್ಣಗೊಂಡಿರುವ ಮನೆಗಳ ಸಂಖ್ಯೆ 1,716 ಮಾತ್ರ. 3596 ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. <br /> <strong><br /> ಸರ್ಕಾರಿ ಭೂಮಿ ಇಲ್ಲ: </strong>ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಸವ ವಸತಿ ಯೋಜನೆಯ ಫಲಾನುಭವಿಗಳಿಗೆ ನಿವೇಶನ ನೀಡಲು ಒಂದೇ ಒಂದು ಗುಂಟೆ ಸರ್ಕಾರಿ ಭೂಮಿ ಖಾಲಿ ಇಲ್ಲ. ಆದರೆ, ಬಾಲಸುಬ್ರಹ್ಮಣ್ಯ ನೇತೃತ್ವದ ಸಮಿತಿ ವರದಿ ಪ್ರಕಾರ ಜಿಲ್ಲೆಯಲ್ಲಿ ಅಂದಾಜು 1.60 ಲಕ್ಷ ಹೆಕ್ಟೇರ್ಗೂ ಅಧಿಕ ಸರ್ಕಾರಿ ಭೂಮಿ ಒತ್ತುವರಿಯಾಗಿದೆ!<br /> <br /> ಕಳೆದ ವರ್ಷ ಆಶ್ರಯ ನಿವೇಶನಕ್ಕಾಗಿಯೇ ಜಿಲ್ಲಾಧಿಕಾರಿ ಖಾತೆಗೆ 3.12 ಕೋಟಿ ರೂಪಾಯಿ ಅನುದಾನ ಬಂದಿದೆ. ಈ ಹಣ ಇನ್ನೂ ವಿನಿಯೋಗ ಆಗಿಲ್ಲ. ಭೂಮಿಗೆ ಸರ್ಕಾರ ನಿಗದಿಪಡಿಸಿರುವ ಬೆಲೆಗೂ ಮತ್ತು ಮಾರುಕಟ್ಟೆ ಬೆಲೆಗೂ ಅಜಗಜಾಂತರವಿದೆ.<br /> <br /> ಜಮೀನು ಇರುವವರು ಸರ್ಕಾರಿ ಬೆಲೆಗೆ ಭೂಮಿ ಕೊಡಲು ಸಿದ್ಧರಿಲ್ಲ. ಈ ವರ್ಷ ಜಿಲ್ಲೆಯಲ್ಲಿ ಬಸವ ವಸತಿ ಯೋಜನೆಗೆ 10,793 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ 1,811 ಮನೆಗಳು ಪೂರ್ಣಗೊಂಡಿವೆ. 5,570 ಮನೆಗಳು ಪ್ರಗತಿಯಲ್ಲಿವೆ. 3412 ಮನೆಗಳ ನಿರ್ಮಾಣ ಇನ್ನಷ್ಟೆ ಶುರುವಾಗಬೇಕಿದೆ.<br /> <br /> ಆದರೆ, ವಾಸ್ತವವೇ ಬೇರೆ. ಮೂಡಿಗೆರೆ ತಾಲ್ಲೂಕಿನಲ್ಲಿ ಸುಮಾರು 6ರಿಂದ 7 ಸಾವಿರ ಮಂದಿ ಅರ್ಹರು ವಸತಿ ಯೋಜನೆಯಿಂದ ವಂಚಿತರಾಗಿದ್ದಾರೆ. ಮೂಡಿಗೆರೆ ತಾಲ್ಲೂಕಿನಲ್ಲಿ ಕಳೆದ 15 ವರ್ಷಗಳಿಂದ ಒಂದೇ ಒಂದು ನಿವೇಶನ ವಿತರಿಸಿಲ್ಲ. <br /> <br /> ಫಲಾನುಭವಿಗಳು ಯಾವ ನಿವೇಶನ ತೋರಿಸಿ ಮನೆ ಪಡೆಯಬೇಕು? ಜಿಲ್ಲೆಯಲ್ಲಿ ಕನಿಷ್ಠ 25 ಸಾವಿರ ಅರ್ಹ ಕುಟುಂಬಗಳು ವಸತಿ ಯೋಜನೆಯಿಂದ ವಂಚಿತವಾಗಿವೆ ಎನ್ನುತ್ತಾರೆ ಪ್ರಶ್ನಿಸುತ್ತಾರೆ ಸಿಪಿಐ ರಾಜ್ಯ ಸಹಕಾರ್ಯದರ್ಶಿ ಸಾತಿ ಸುಂದರೇಶ್.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>