<p><strong>ತಿಪಟೂರು: </strong>ಸೇವಾ ಮನೋಭಾವದಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಅತ್ಯಲ್ಪ ಜನಪ್ರತಿನಿಧಿಗಳಿಗೆ ಜನತೆ ಬೆಂಬಲವಾಗಿ ನಿಲ್ಲದಿದ್ದರೆ ರಾಜಕೀಯ ನೈತಿಕತೆಯ ಆತ್ಮಸ್ಥೈರ್ಯ ಕುಗ್ಗುತ್ತದೆ ಎಂದು ಪಟ್ಟನಾಯಕನಹಳ್ಳಿಯ ನಂಜಾವದೂತ ಸ್ವಾಮೀಜಿ ತಿಳಿಸಿದರು.<br /> <br /> ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಹತ್ಯಾಳ ನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 1.22 ಕೋಟಿ ರೂಪಾಯಿ ವೆಚ್ಚದಲ್ಲಿ ಚೆಕ್ಡ್ಯಾಂ ನಿರ್ಮಿಸಲು ಭಾನುವಾರ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿರಳವಾಗಿರುವ ಸ್ವಚ್ಛ ಮತ್ತು ಪ್ರಾಮಾಣಿಕ ಜನಪ್ರತಿನಿಧಿಗಳ ಆತ್ಮಸ್ಥೈರ್ಯ ಕುಗ್ಗುವ ಪರಿಸ್ಥಿತಿ ಬಂದರೆ ಸಮಾಜಕ್ಕೆ ಭವಿಷ್ಯವಿಲ್ಲ ಎಂದರು.<br /> <br /> ಕೆ.ಬಿ.ಕ್ರಾಸ್ ರಂಭಾಪುರಿ ಶಾಖಾ ಮಠದ ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ನೆಲಸಂಸ್ಕೃತಿ ಅರ್ಥ ಮಾಡಿಕೊಂಡ ಜನಪ್ರತಿನಿಧಿಗಳು ಮಾತ್ರ ರೈತರ ಶ್ರೇಯಸ್ಸಿಗೆ ದುಡಿಯುತ್ತಾರೆ ಎಂದರು.<br /> <br /> ಶಾಸಕ ಬಿ.ಸಿ.ನಾಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಪಿಎಂಸಿ ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ಮಹಲಿಂಗಯ್ಯ, ಹಾಲು ಒಕ್ಕೂಟದ ನಿರ್ದೇಶಕ ಪ್ರತಾಪ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರಪ್ಪ ಮತ್ತಿತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ಸೇವಾ ಮನೋಭಾವದಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಅತ್ಯಲ್ಪ ಜನಪ್ರತಿನಿಧಿಗಳಿಗೆ ಜನತೆ ಬೆಂಬಲವಾಗಿ ನಿಲ್ಲದಿದ್ದರೆ ರಾಜಕೀಯ ನೈತಿಕತೆಯ ಆತ್ಮಸ್ಥೈರ್ಯ ಕುಗ್ಗುತ್ತದೆ ಎಂದು ಪಟ್ಟನಾಯಕನಹಳ್ಳಿಯ ನಂಜಾವದೂತ ಸ್ವಾಮೀಜಿ ತಿಳಿಸಿದರು.<br /> <br /> ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಹತ್ಯಾಳ ನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 1.22 ಕೋಟಿ ರೂಪಾಯಿ ವೆಚ್ಚದಲ್ಲಿ ಚೆಕ್ಡ್ಯಾಂ ನಿರ್ಮಿಸಲು ಭಾನುವಾರ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿರಳವಾಗಿರುವ ಸ್ವಚ್ಛ ಮತ್ತು ಪ್ರಾಮಾಣಿಕ ಜನಪ್ರತಿನಿಧಿಗಳ ಆತ್ಮಸ್ಥೈರ್ಯ ಕುಗ್ಗುವ ಪರಿಸ್ಥಿತಿ ಬಂದರೆ ಸಮಾಜಕ್ಕೆ ಭವಿಷ್ಯವಿಲ್ಲ ಎಂದರು.<br /> <br /> ಕೆ.ಬಿ.ಕ್ರಾಸ್ ರಂಭಾಪುರಿ ಶಾಖಾ ಮಠದ ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ನೆಲಸಂಸ್ಕೃತಿ ಅರ್ಥ ಮಾಡಿಕೊಂಡ ಜನಪ್ರತಿನಿಧಿಗಳು ಮಾತ್ರ ರೈತರ ಶ್ರೇಯಸ್ಸಿಗೆ ದುಡಿಯುತ್ತಾರೆ ಎಂದರು.<br /> <br /> ಶಾಸಕ ಬಿ.ಸಿ.ನಾಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಪಿಎಂಸಿ ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ಮಹಲಿಂಗಯ್ಯ, ಹಾಲು ಒಕ್ಕೂಟದ ನಿರ್ದೇಶಕ ಪ್ರತಾಪ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರಪ್ಪ ಮತ್ತಿತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>