<p>ಚಾಮರಾಜನಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಡಿ ಕಾಂಗ್ರೆಸ್ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಕಾಮಗಾರಿಗಳಿಗೆ ತರಾತುರಿಯಲ್ಲಿ ಚಾಲನೆ ನೀಡುತ್ತಿದ್ದ ಬೆನ್ನಲ್ಲೇ ಜಿಲ್ಲೆಯ ಯಳಂದೂರು ಪಟ್ಟಣದಲ್ಲಿ ಬುಧವಾರ ನೀತಿಸಂಹಿತೆ ಉಲ್ಲಂಘಿಸಿದ ಆರೋಪವೂ ಕೇಳಿಬಂದಿದೆ.<br /> <br /> ಲೋಕಸಭಾ ಚುನಾವಣೆಯನ್ನು ಗುರಿಯಾಗಿಟ್ಟು ಕೊಂಡೇ ಈಚೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸುಮಾರು ₨ 800 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಇತ್ತೀಚೆಗೆ ಕೇಂದ್ರ ಸಚಿವ ಸಂಪುಟ ದೇಶದ ವಿವಿಧ ಜಿಲ್ಲೆಗಳಿಗೆ ಕೇಂದ್ರೀಯ ವಿದ್ಯಾಲಯ ಗಳನ್ನು ಮಂಜೂರು ಮಾಡಿತ್ತು. ಚಾಮರಾಜನಗರ ಜಿಲ್ಲೆಗೂ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದೆ.<br /> <br /> ವಿದ್ಯಾಲಯ ಆರಂಭಿಸಲು ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅದರ ಉದ್ಘಾಟನೆ ಬುಧವಾರ ನೆರವೇರಬೇಕಿತ್ತು. ಆದರೆ, ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ವೇಳೆಪಟ್ಟಿಯನ್ನು ಬಿಡುಗಡೆಗೊಳಿಸಿದ ಹಿನ್ನೆಲೆಯಲ್ಲಿ ಉದ್ಘಾಟನೆ ಮುಂದೂಡಲ್ಪಟ್ಟಿದೆ.<br /> <br /> ಯಳಂದೂರು ಪಟ್ಟಣದಲ್ಲಿ ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಬುಧವಾರ ಬೆಳಿಗ್ಗೆ 11ಗಂಟೆಗೆ ದಿವಾನ್ ಪೂರ್ಣಯ್ಯ ಸರ್ಕಾರಿ ವಸ್ತು ಸಂಗ್ರಹಾಲಯದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು. ಆ ವೇಳೆಗೆ ಚುನಾವಣಾ ನೀತಿಸಂಹಿತೆಯೂ ಜಾರಿಗೊಂಡಿತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸಿದರು.<br /> <br /> ಆರ್. ಧ್ರುವನಾರಾಯಣ, ಶಾಸಕ ಎಸ್. ಜಯಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋದಾ ಪ್ರಭುಸ್ವಾಮಿ ಸೇರಿದಂತೆ ಸ್ಥಳೀಯ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.<br /> <br /> ಆದರೆ, ತಾಲ್ಲೂಕು ಚುನಾವಣಾಧಿಕಾರಿ ಸ್ಥಳಕ್ಕೆ ಆಗಮಿಸಿ ಉದ್ಘಾಟನಾ ಕಾರ್ಯಕ್ರಮವನ್ನು ತಡೆಹಿಡಿಯುವ ಕೆಲಸ ಮಾಡಲಿಲ್ಲ.<br /> ಸಚಿವ ಮಹದೇವಪ್ರಸಾದ್ ಪತ್ರಕರ್ತರೊಂದಿಗೆ ಮಾತನಾಡಿ, ‘ಚುನಾವಣಾ ಆಯೋಗವೂ ಎಷ್ಟು ಗಂಟೆಗೆ ಲೋಕಸಭೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ ಎಂಬುದು ತಮಗೆ ಗೊತ್ತಿಲ್ಲ. ಚುನಾವಣಾ ಅಧಿಕಾರಿಗಳು ಕೂಡ ನಮಗೆ ಮಾಹಿತಿ ನೀಡಿಲ್ಲ. ಕಾರ್ಯಕ್ರಮ ಪೂರ್ವ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ವಸ್ತು ಸಂಗ್ರಹಾಲಯದ ಉದ್ಘಾಟನೆ ನೆರವೇರಿಸಲಾಗಿದೆ’ ಎಂದು ಪ್ರತಿಕ್ರಿಯಿಸಿದರು.<br /> <br /> ಅದೇ ವೇಳೆಗೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಆರ್. ಸಿದ್ದಪ್ಪ ಮಾತನಾಡಿ, ‘ನೀತಿಸಂಹಿತೆ ಬಗ್ಗೆ ತಿಳಿಸಲು ಸ್ಥಳಕ್ಕೆ ಬಂದಿದ್ದೆವು. ಆ ವೇಳೆಗೆ ಕಾರ್ಯಕ್ರಮ ಮುಗಿದುಹೋಗಿತ್ತು’ ಎಂದು ಉತ್ತರಿಸಿದರು.<br /> <br /> ಬಳಿಕ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನೀಡಿದ್ದ ಸರ್ಕಾರಿ ವಾಹನಗಳನ್ನು ತಮ್ಮ ಸುಪರ್ದಿಗೆ ಪಡೆದರು. ಜನಪ್ರತಿನಿಧಿಗಳು ಸ್ವಂತ ವಾಹನಗಳಲ್ಲಿ ಮರಳುವಂತಾಯಿತು.<br /> <br /> ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ, ‘ನೀತಿಸಂಹಿತೆ ಬಗ್ಗೆ ಕಾರ್ಯಕ್ರಮದ ಸಂಘಟಕರ ಗಮನಕ್ಕೆ ತಂದಿದ್ದೇನೆ. ಆ ವೇಳೆ ಟೇಪ್ ಕತ್ತರಿಸಲಾಗಿತ್ತು. ನಂತರ, ಕಾರ್ಯಕ್ರಮ ಮುಂದುವರಿಸಲು ಅವಕಾಶ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಡಿ ಕಾಂಗ್ರೆಸ್ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಕಾಮಗಾರಿಗಳಿಗೆ ತರಾತುರಿಯಲ್ಲಿ ಚಾಲನೆ ನೀಡುತ್ತಿದ್ದ ಬೆನ್ನಲ್ಲೇ ಜಿಲ್ಲೆಯ ಯಳಂದೂರು ಪಟ್ಟಣದಲ್ಲಿ ಬುಧವಾರ ನೀತಿಸಂಹಿತೆ ಉಲ್ಲಂಘಿಸಿದ ಆರೋಪವೂ ಕೇಳಿಬಂದಿದೆ.<br /> <br /> ಲೋಕಸಭಾ ಚುನಾವಣೆಯನ್ನು ಗುರಿಯಾಗಿಟ್ಟು ಕೊಂಡೇ ಈಚೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸುಮಾರು ₨ 800 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಇತ್ತೀಚೆಗೆ ಕೇಂದ್ರ ಸಚಿವ ಸಂಪುಟ ದೇಶದ ವಿವಿಧ ಜಿಲ್ಲೆಗಳಿಗೆ ಕೇಂದ್ರೀಯ ವಿದ್ಯಾಲಯ ಗಳನ್ನು ಮಂಜೂರು ಮಾಡಿತ್ತು. ಚಾಮರಾಜನಗರ ಜಿಲ್ಲೆಗೂ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದೆ.<br /> <br /> ವಿದ್ಯಾಲಯ ಆರಂಭಿಸಲು ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅದರ ಉದ್ಘಾಟನೆ ಬುಧವಾರ ನೆರವೇರಬೇಕಿತ್ತು. ಆದರೆ, ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ವೇಳೆಪಟ್ಟಿಯನ್ನು ಬಿಡುಗಡೆಗೊಳಿಸಿದ ಹಿನ್ನೆಲೆಯಲ್ಲಿ ಉದ್ಘಾಟನೆ ಮುಂದೂಡಲ್ಪಟ್ಟಿದೆ.<br /> <br /> ಯಳಂದೂರು ಪಟ್ಟಣದಲ್ಲಿ ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಬುಧವಾರ ಬೆಳಿಗ್ಗೆ 11ಗಂಟೆಗೆ ದಿವಾನ್ ಪೂರ್ಣಯ್ಯ ಸರ್ಕಾರಿ ವಸ್ತು ಸಂಗ್ರಹಾಲಯದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು. ಆ ವೇಳೆಗೆ ಚುನಾವಣಾ ನೀತಿಸಂಹಿತೆಯೂ ಜಾರಿಗೊಂಡಿತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸಿದರು.<br /> <br /> ಆರ್. ಧ್ರುವನಾರಾಯಣ, ಶಾಸಕ ಎಸ್. ಜಯಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋದಾ ಪ್ರಭುಸ್ವಾಮಿ ಸೇರಿದಂತೆ ಸ್ಥಳೀಯ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.<br /> <br /> ಆದರೆ, ತಾಲ್ಲೂಕು ಚುನಾವಣಾಧಿಕಾರಿ ಸ್ಥಳಕ್ಕೆ ಆಗಮಿಸಿ ಉದ್ಘಾಟನಾ ಕಾರ್ಯಕ್ರಮವನ್ನು ತಡೆಹಿಡಿಯುವ ಕೆಲಸ ಮಾಡಲಿಲ್ಲ.<br /> ಸಚಿವ ಮಹದೇವಪ್ರಸಾದ್ ಪತ್ರಕರ್ತರೊಂದಿಗೆ ಮಾತನಾಡಿ, ‘ಚುನಾವಣಾ ಆಯೋಗವೂ ಎಷ್ಟು ಗಂಟೆಗೆ ಲೋಕಸಭೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ ಎಂಬುದು ತಮಗೆ ಗೊತ್ತಿಲ್ಲ. ಚುನಾವಣಾ ಅಧಿಕಾರಿಗಳು ಕೂಡ ನಮಗೆ ಮಾಹಿತಿ ನೀಡಿಲ್ಲ. ಕಾರ್ಯಕ್ರಮ ಪೂರ್ವ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ವಸ್ತು ಸಂಗ್ರಹಾಲಯದ ಉದ್ಘಾಟನೆ ನೆರವೇರಿಸಲಾಗಿದೆ’ ಎಂದು ಪ್ರತಿಕ್ರಿಯಿಸಿದರು.<br /> <br /> ಅದೇ ವೇಳೆಗೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಆರ್. ಸಿದ್ದಪ್ಪ ಮಾತನಾಡಿ, ‘ನೀತಿಸಂಹಿತೆ ಬಗ್ಗೆ ತಿಳಿಸಲು ಸ್ಥಳಕ್ಕೆ ಬಂದಿದ್ದೆವು. ಆ ವೇಳೆಗೆ ಕಾರ್ಯಕ್ರಮ ಮುಗಿದುಹೋಗಿತ್ತು’ ಎಂದು ಉತ್ತರಿಸಿದರು.<br /> <br /> ಬಳಿಕ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನೀಡಿದ್ದ ಸರ್ಕಾರಿ ವಾಹನಗಳನ್ನು ತಮ್ಮ ಸುಪರ್ದಿಗೆ ಪಡೆದರು. ಜನಪ್ರತಿನಿಧಿಗಳು ಸ್ವಂತ ವಾಹನಗಳಲ್ಲಿ ಮರಳುವಂತಾಯಿತು.<br /> <br /> ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ, ‘ನೀತಿಸಂಹಿತೆ ಬಗ್ಗೆ ಕಾರ್ಯಕ್ರಮದ ಸಂಘಟಕರ ಗಮನಕ್ಕೆ ತಂದಿದ್ದೇನೆ. ಆ ವೇಳೆ ಟೇಪ್ ಕತ್ತರಿಸಲಾಗಿತ್ತು. ನಂತರ, ಕಾರ್ಯಕ್ರಮ ಮುಂದುವರಿಸಲು ಅವಕಾಶ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>