<p>ಕಾರವಾರ: ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ನಗರದ ವಿವಿಧೆಡೆ ಹಾಕಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಬ್ಯಾನರ್ ಹಾಗೂ ಬಂಟಿಂಗ್ಸ್ಗಳನ್ನು ಶುಕ್ರವಾರ ತೆರವು ಮಾಡಲಾಯಿತು.<br /> <br /> ನಗರದ ಜಿಲ್ಲಾಧಿಕಾರಿ ಕಚೇರಿ, ವಾರ್ತಾ ಇಲಾಖೆ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳ ಮುಂದೆ ಹಾಕಲಾಗಿದ್ದ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ವಿವರಗಳುಳ್ಳ ಜಾಹೀರಾತು ಫಲಕವನ್ನು ತೆರವುಗೊಳಿಸಲಾಯಿತು.<br /> <br /> ಇನ್ನೂ ರಾರಾಜಿಸುತ್ತಿರುವ ಬ್ಯಾನರ್ಗಳು:<br /> ಕೆಲ ಖಾಸಗಿ ವ್ಯಕ್ತಿಗಳು ನಗರಸಭೆಯಿಂದ ಅನುಮತಿ ಪಡೆದು ನಗರದ ವಿವಿಧೆಡೆ ಹಾಕಿರುವ ತಮ್ಮ ಪಕ್ಷಗಳ ನಾಯಕರ ಭಾವಚಿತ್ರವಿರುವ ಬ್ಯಾನರ್ಗಳು ತೆರವುಗೊಂಡಿಲ್ಲ. ಈ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಬಗ್ಗೆ ಜಿಲ್ಲಾಡಳಿತದಿಂದ ಯಾವುದೇ ಸೂಚನೆ ಬಂದಿಲ್ಲವಾದ್ದರಿಂದ ನಗರಸಭೆ ಸಿಬ್ಬಂದಿ ಅವುಗಳ ತೆರವಿಗೆ ಮುಂದಾಗಿಲ್ಲ.<br /> <br /> ಖಾಸಗಿಯಾಗಿ ವಿವಿಧ ಪಕ್ಷಗಳ ಕಾರ್ಯಕರ್ತರು ನಗರದ ವಿವಿಧೆಡೆ ಹಾಕಿರುವ ಬ್ಯಾನರ್, ಬಂಟಿಂಗ್ಸ್ಗಳನ್ನು ತೆರವುಗೊಳಿಸಲು ಸುತ್ತೋಲೆ ಹೊರಡಿಸುವ ಬಗ್ಗೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ನಗರದ ವಿವಿಧೆಡೆ ಹಾಕಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಬ್ಯಾನರ್ ಹಾಗೂ ಬಂಟಿಂಗ್ಸ್ಗಳನ್ನು ಶುಕ್ರವಾರ ತೆರವು ಮಾಡಲಾಯಿತು.<br /> <br /> ನಗರದ ಜಿಲ್ಲಾಧಿಕಾರಿ ಕಚೇರಿ, ವಾರ್ತಾ ಇಲಾಖೆ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳ ಮುಂದೆ ಹಾಕಲಾಗಿದ್ದ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ವಿವರಗಳುಳ್ಳ ಜಾಹೀರಾತು ಫಲಕವನ್ನು ತೆರವುಗೊಳಿಸಲಾಯಿತು.<br /> <br /> ಇನ್ನೂ ರಾರಾಜಿಸುತ್ತಿರುವ ಬ್ಯಾನರ್ಗಳು:<br /> ಕೆಲ ಖಾಸಗಿ ವ್ಯಕ್ತಿಗಳು ನಗರಸಭೆಯಿಂದ ಅನುಮತಿ ಪಡೆದು ನಗರದ ವಿವಿಧೆಡೆ ಹಾಕಿರುವ ತಮ್ಮ ಪಕ್ಷಗಳ ನಾಯಕರ ಭಾವಚಿತ್ರವಿರುವ ಬ್ಯಾನರ್ಗಳು ತೆರವುಗೊಂಡಿಲ್ಲ. ಈ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಬಗ್ಗೆ ಜಿಲ್ಲಾಡಳಿತದಿಂದ ಯಾವುದೇ ಸೂಚನೆ ಬಂದಿಲ್ಲವಾದ್ದರಿಂದ ನಗರಸಭೆ ಸಿಬ್ಬಂದಿ ಅವುಗಳ ತೆರವಿಗೆ ಮುಂದಾಗಿಲ್ಲ.<br /> <br /> ಖಾಸಗಿಯಾಗಿ ವಿವಿಧ ಪಕ್ಷಗಳ ಕಾರ್ಯಕರ್ತರು ನಗರದ ವಿವಿಧೆಡೆ ಹಾಕಿರುವ ಬ್ಯಾನರ್, ಬಂಟಿಂಗ್ಸ್ಗಳನ್ನು ತೆರವುಗೊಳಿಸಲು ಸುತ್ತೋಲೆ ಹೊರಡಿಸುವ ಬಗ್ಗೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>