<p>ಶಿರಸಿ: ಲೋಕಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿ ಕರೆದಿದ್ದ ತಾಲ್ಲೂಕು ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆ 15 ನಿಮಿಷಗಳಲ್ಲಿ ಮುಕ್ತಾಯ ಗೊಂಡಿತು.<br /> <br /> ಚುನಾವಣೆ ಘೋಷಣೆಯಾಗಬಹು ದೆಂಬ ಆತಂಕದಲ್ಲಿ ಸರಿಯಾಗಿ 11 ಗಂಟೆಗೆ ಪ್ರಾರಂಭವಾದ ಸಭೆಯಲ್ಲಿ ಒಂದೆರಡು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವಷ್ಟರದಲ್ಲಿ ನೀತಿ ಸಂಹಿತೆ ಜಾರಿಯಾದ ಮಾಹಿತಿ ಲಭ್ಯವಾಯಿತು. ತಕ್ಷಣವೇ ಸಭೆಯನ್ನು ಮೊಟಕುಗೊಳಿಸಲಾಯಿತು.<br /> <br /> ‘ತಾಲ್ಲೂಕು ಪಂಚಾಯ್ತಿ ಯೋಜನೆ ಅಡಿಯಲ್ಲಿ ವಿವಿವಿಧ ಇಲಾಖೆಗಳು ಕೈಗೆತ್ತಿಕೊಂಡಿರುವ ಕಾಮಗಾರಿಗಳ ಬಿಲ್ ಅನ್ನು ಇದೇ 29ರ ಒಳಗಾಗಿ ಸಂಬಂಧಿಸಿದ ವಿಭಾಗಕ್ಕೆ ತಲುಪಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು’ ಎಂದು ಅಧ್ಯಕ್ಷ ಗುರುಪಾದ ಹೆಗಡೆ ಸೂಚಿಸಿದರು.<br /> <br /> ‘ತಾಲ್ಲೂಕಿನ ಗದ್ದೆಮನೆ ಸಮೀಪ ವಿದ್ಯುತ್ ವಿತರಕ ದಲ್ಲಿ ಸಮಸ್ಯೆ ಉಂಟಾಗಿದ್ದು, ತಕ್ಷಣ ಸರಿಪಡಿಸಬೇಕು. ಅಗತ್ಯವಿದ್ದಲ್ಲಿ ಹೊಸ ವಿತರಕ ಅಳವಡಿಸಬೇಕು’ ಎಂದು ಅವರು ಹೆಸ್ಕಾಂ ಅಧಿಕಾರಿಗೆ ತಿಳಿಸಿದರು.<br /> <br /> ‘ತಾಲ್ಲೂಕಿಗೆ ಮುದ್ರಾಂಕ ಶುಲ್ಕದಿಂದ ಬಂದಿರುವ ₨ 37 ಲಕ್ಷ ಮೊತ್ತ ಬಾಕಿ ಉಳಿದಿದ್ದು, ಸದ್ಯ ಈ ಹಣ ಬಳಕೆ ಸಾಧ್ಯವಿಲ್ಲ. ಲೋಕಸಭೆ ಚುನಾವಣೆ ನಂತರದಲ್ಲಿ ಇದನ್ನು ಸದ್ಬಳಕೆ ಮಾಡಿಕೊಳ್ಳಬಹುದು’ ಎಂದರು.<br /> <br /> ‘ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಜಾತಿವಾರು ಮಾಹಿತಿ ಸಂಗ್ರಹ ಮಾಡುತ್ತಿರುವುದು ಯಾಕೆ’ ಎಂದು ಉಪಾಧ್ಯಕ್ಷ ಸಂತೋಷ ಗೌಡರ್ ಪ್ರಶ್ನಿಸಿದರು. ‘ತಹಶೀಲ್ದಾರ್ ಕಚೇರಿಯ ಸೂಚನೆ ಯಂತೆ ಮಕ್ಕಳ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಅರ್ಜಿ ತುಂಬಿಸಿಕೊಳ್ಳಲಾಗುತ್ತಿದೆ’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಲೋಕಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿ ಕರೆದಿದ್ದ ತಾಲ್ಲೂಕು ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆ 15 ನಿಮಿಷಗಳಲ್ಲಿ ಮುಕ್ತಾಯ ಗೊಂಡಿತು.<br /> <br /> ಚುನಾವಣೆ ಘೋಷಣೆಯಾಗಬಹು ದೆಂಬ ಆತಂಕದಲ್ಲಿ ಸರಿಯಾಗಿ 11 ಗಂಟೆಗೆ ಪ್ರಾರಂಭವಾದ ಸಭೆಯಲ್ಲಿ ಒಂದೆರಡು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವಷ್ಟರದಲ್ಲಿ ನೀತಿ ಸಂಹಿತೆ ಜಾರಿಯಾದ ಮಾಹಿತಿ ಲಭ್ಯವಾಯಿತು. ತಕ್ಷಣವೇ ಸಭೆಯನ್ನು ಮೊಟಕುಗೊಳಿಸಲಾಯಿತು.<br /> <br /> ‘ತಾಲ್ಲೂಕು ಪಂಚಾಯ್ತಿ ಯೋಜನೆ ಅಡಿಯಲ್ಲಿ ವಿವಿವಿಧ ಇಲಾಖೆಗಳು ಕೈಗೆತ್ತಿಕೊಂಡಿರುವ ಕಾಮಗಾರಿಗಳ ಬಿಲ್ ಅನ್ನು ಇದೇ 29ರ ಒಳಗಾಗಿ ಸಂಬಂಧಿಸಿದ ವಿಭಾಗಕ್ಕೆ ತಲುಪಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು’ ಎಂದು ಅಧ್ಯಕ್ಷ ಗುರುಪಾದ ಹೆಗಡೆ ಸೂಚಿಸಿದರು.<br /> <br /> ‘ತಾಲ್ಲೂಕಿನ ಗದ್ದೆಮನೆ ಸಮೀಪ ವಿದ್ಯುತ್ ವಿತರಕ ದಲ್ಲಿ ಸಮಸ್ಯೆ ಉಂಟಾಗಿದ್ದು, ತಕ್ಷಣ ಸರಿಪಡಿಸಬೇಕು. ಅಗತ್ಯವಿದ್ದಲ್ಲಿ ಹೊಸ ವಿತರಕ ಅಳವಡಿಸಬೇಕು’ ಎಂದು ಅವರು ಹೆಸ್ಕಾಂ ಅಧಿಕಾರಿಗೆ ತಿಳಿಸಿದರು.<br /> <br /> ‘ತಾಲ್ಲೂಕಿಗೆ ಮುದ್ರಾಂಕ ಶುಲ್ಕದಿಂದ ಬಂದಿರುವ ₨ 37 ಲಕ್ಷ ಮೊತ್ತ ಬಾಕಿ ಉಳಿದಿದ್ದು, ಸದ್ಯ ಈ ಹಣ ಬಳಕೆ ಸಾಧ್ಯವಿಲ್ಲ. ಲೋಕಸಭೆ ಚುನಾವಣೆ ನಂತರದಲ್ಲಿ ಇದನ್ನು ಸದ್ಬಳಕೆ ಮಾಡಿಕೊಳ್ಳಬಹುದು’ ಎಂದರು.<br /> <br /> ‘ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಜಾತಿವಾರು ಮಾಹಿತಿ ಸಂಗ್ರಹ ಮಾಡುತ್ತಿರುವುದು ಯಾಕೆ’ ಎಂದು ಉಪಾಧ್ಯಕ್ಷ ಸಂತೋಷ ಗೌಡರ್ ಪ್ರಶ್ನಿಸಿದರು. ‘ತಹಶೀಲ್ದಾರ್ ಕಚೇರಿಯ ಸೂಚನೆ ಯಂತೆ ಮಕ್ಕಳ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಅರ್ಜಿ ತುಂಬಿಸಿಕೊಳ್ಳಲಾಗುತ್ತಿದೆ’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>