<p>ಬಂಗಾರಪೇಟೆ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಅಂಬೇಡ್ಕರ್ ಪ್ರತಿಮೆ ಮುಂದೆ ಧರಣಿ ನಡೆಸಿದರು.<br /> <br /> ಕೋಲಾರ ಜಿಲ್ಲೆ ಬರಗಾಲ ಪೀಡಿತ ಪ್ರದೇಶ ಆಗಿದ್ದು, ಜನ, ಜಾನುವಾರು ನೀರಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಈ ಪದೇಶದಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕೆಲವು ಕಡೆ 1200 ಅಡಿ ಕೊಳವೆ ಬಾವಿ ಕೊರೆದರೂ ನೀರು ದೊರೆಯುತ್ತಿಲ್ಲ. <br /> <br /> ನೀರಿಲ್ಲದೆ ರೈತರು ಬೆಳೆ ಬೆಳೆಯಲು ಆಗುತ್ತಿಲ್ಲ. ಪರಿಣಾಮ ಆಹಾರ ಪದಾರ್ಥಗಳ ಬೆಲೆ ದಿನೇ ದಿನೇ ಏರುತ್ತಿದ್ದು, ಸಾಮಾನ್ಯ ಜನರು ತೊಂದರೆ ಅನುಭವಿಸುವಂತೆ ಆಗಿದೆ. ಸತತವಾಗಿ 10 ವರ್ಷಗಳಿಂದ ಸರಾಸರಿ ಮಳೆ ಕಡಿಮೆಯಾಗುತ್ತಾ ಬಂದಿದ್ದು, ಈ ಬಾರಿ ಮುಂಗಾರು ಮಳೆ ಕೈ ಕೊಟ್ಟಿರುವುದರಿಂದ ರೈತರ ಬದಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.<br /> <br /> ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಯರಗೋಳು ಜಲಾಶಯ ನಿರ್ಮಿಸುವ ಪ್ರಯತ್ನ ಮಾಡುತ್ತಿರುವುದು ಸ್ವಾಗತಾರ್ಹ. ಆದರೆ ಈ ಯೋಜನೆ ಪ್ರಾರಂಭವಾಗಿ ಆರೇಳು ವರ್ಷ ಕಳೆದರೂ ಜಲಾಶಯದ ಕಾಮಗಾರಿ ಸಂಪೂರ್ಣವಾಗಿ ನಡೆದಿಲ್ಲ. <br /> <br /> ಮಳೆಗಾಲದಲ್ಲಿ ಪಶ್ಚಿಮ ಘಟ್ಟದಿಂದ ಸುಮಾರು 900 ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಈ ನೀರು ಕಾಲುವೆ ಮೂಲಕ ಹರಿಸಿದರೆ ಸಮಾರು ಏಳು ಜಿಲ್ಲೆಯ 34 ತಾಲ್ಲೂಕುಗಳಿಗೆ ನೀರು ಪೂರೈಸಬಹುದು ಎಂದು ಡಾ.ಪರಮಶಿವಯ್ಯ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಆದರೆ ಈ ಬಗ್ಗೆ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯರಗೋಳು ಯೋಜನೆ ಶೀಘ್ರ ಪೂರ್ಣಗೊಳಿಸಿ, ಡಾ.ಪರಮಶಿವಯ್ಯ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. <br /> <br /> ದಲಿತ ಮುಖಂಡರಾದ ಎಸ್.ಅರ್.ಸಂಜೀವಪ್ಪ, ಅಶೋಕ್, ಬಿಆರ್ಎಸ್ ಮುಖಂಡರಾದ ಗುಟ್ಟಹಳ್ಳಿ ರವಿಕುಮಾರ್, ಮಧುಚಂದ್ರ, ಶೇಖರ್, ಎಂ.ಎನ್.ಭಾರದ್ವಾಜ್, ಬಾಲಕೃಷ್ಣ, ಅಸ್ಗರ್, ಆನಂದ್, ವಿಜಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಅಂಬೇಡ್ಕರ್ ಪ್ರತಿಮೆ ಮುಂದೆ ಧರಣಿ ನಡೆಸಿದರು.<br /> <br /> ಕೋಲಾರ ಜಿಲ್ಲೆ ಬರಗಾಲ ಪೀಡಿತ ಪ್ರದೇಶ ಆಗಿದ್ದು, ಜನ, ಜಾನುವಾರು ನೀರಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಈ ಪದೇಶದಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕೆಲವು ಕಡೆ 1200 ಅಡಿ ಕೊಳವೆ ಬಾವಿ ಕೊರೆದರೂ ನೀರು ದೊರೆಯುತ್ತಿಲ್ಲ. <br /> <br /> ನೀರಿಲ್ಲದೆ ರೈತರು ಬೆಳೆ ಬೆಳೆಯಲು ಆಗುತ್ತಿಲ್ಲ. ಪರಿಣಾಮ ಆಹಾರ ಪದಾರ್ಥಗಳ ಬೆಲೆ ದಿನೇ ದಿನೇ ಏರುತ್ತಿದ್ದು, ಸಾಮಾನ್ಯ ಜನರು ತೊಂದರೆ ಅನುಭವಿಸುವಂತೆ ಆಗಿದೆ. ಸತತವಾಗಿ 10 ವರ್ಷಗಳಿಂದ ಸರಾಸರಿ ಮಳೆ ಕಡಿಮೆಯಾಗುತ್ತಾ ಬಂದಿದ್ದು, ಈ ಬಾರಿ ಮುಂಗಾರು ಮಳೆ ಕೈ ಕೊಟ್ಟಿರುವುದರಿಂದ ರೈತರ ಬದಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.<br /> <br /> ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಯರಗೋಳು ಜಲಾಶಯ ನಿರ್ಮಿಸುವ ಪ್ರಯತ್ನ ಮಾಡುತ್ತಿರುವುದು ಸ್ವಾಗತಾರ್ಹ. ಆದರೆ ಈ ಯೋಜನೆ ಪ್ರಾರಂಭವಾಗಿ ಆರೇಳು ವರ್ಷ ಕಳೆದರೂ ಜಲಾಶಯದ ಕಾಮಗಾರಿ ಸಂಪೂರ್ಣವಾಗಿ ನಡೆದಿಲ್ಲ. <br /> <br /> ಮಳೆಗಾಲದಲ್ಲಿ ಪಶ್ಚಿಮ ಘಟ್ಟದಿಂದ ಸುಮಾರು 900 ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಈ ನೀರು ಕಾಲುವೆ ಮೂಲಕ ಹರಿಸಿದರೆ ಸಮಾರು ಏಳು ಜಿಲ್ಲೆಯ 34 ತಾಲ್ಲೂಕುಗಳಿಗೆ ನೀರು ಪೂರೈಸಬಹುದು ಎಂದು ಡಾ.ಪರಮಶಿವಯ್ಯ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಆದರೆ ಈ ಬಗ್ಗೆ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯರಗೋಳು ಯೋಜನೆ ಶೀಘ್ರ ಪೂರ್ಣಗೊಳಿಸಿ, ಡಾ.ಪರಮಶಿವಯ್ಯ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. <br /> <br /> ದಲಿತ ಮುಖಂಡರಾದ ಎಸ್.ಅರ್.ಸಂಜೀವಪ್ಪ, ಅಶೋಕ್, ಬಿಆರ್ಎಸ್ ಮುಖಂಡರಾದ ಗುಟ್ಟಹಳ್ಳಿ ರವಿಕುಮಾರ್, ಮಧುಚಂದ್ರ, ಶೇಖರ್, ಎಂ.ಎನ್.ಭಾರದ್ವಾಜ್, ಬಾಲಕೃಷ್ಣ, ಅಸ್ಗರ್, ಆನಂದ್, ವಿಜಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>