<p><strong>ಮುದ್ದೇಬಿಹಾಳ:</strong> ‘ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕುಡಿಯುವ ನೀರು ಪೂರೈಸುವಂತೆ ಹಾಗೂ ಚರಂಡಿ ಸ್ವಚ್ಛ ಮಾಡುವಂತೆ ಸೂಚಿಸಲು ಬರುವುದಿಲ್ಲ’ ಎಂದು ಪುರಸಭೆಯ ಮುಖ್ಯಾಧಿಕಾರಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ ಪ್ರಸಂಗ ಶುಕ್ರವಾರ ನಡೆಯಿತು.<br /> <br /> ಇದರಿಂದ ಆಕ್ರೋಶಗೊಂಡ ಪಟ್ಟಣದ ಕಿಲ್ಲಾ ಬಡಾವಣೆಯ ನಿವಾಸಿಗಳು ಪುರಸಭೆ ಮುಂದೆ ಧರಣಿ ನಡೆಸಿದ್ದು, ನಂತರ ಈ ಬಗ್ಗೆ ತಹಶೀಲ್ದಾರ್ ಎಂ.ಬಿ.ಪಾಟೀಲ ಅವರೇ ಪುರಸಭೆ ಮುಖ್ಯಾಧಿಕಾರಿಗಳ ಪರವಾಗಿ ಕ್ಷಮೆ ಕೇಳಿದರು. <br /> <br /> ಐದು ತಿಂಗಳ ಹಿಂದೆಯೇ ಮೂಲಸೌಲಭ್ಯ ಒದಗಿಸುವಂತೆ ಸಾರ್ವಜನಿಕರು ಪುರಸಭೆಗೆ ಲಿಖಿತ ಮನವಿ ನೀಡಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದ್ದರಿಂದ ಬಡಾವಣೆಯ ನಿವಾಸಿಗಳು ಮತ್ತೊಮ್ಮೆ ಮನವಿ ಸಲ್ಲಿಸಲು ಬಂದಾಗ ಮುಖ್ಯಾಧಿಕಾರಿ ಆಡಿದ ಮಾತು ಗೊಂದಲ ಸೃಷ್ಟಿಸಿತು.<br /> <br /> ಕೊನೆಗೆ ಮುಖ್ಯಾಧಿಕಾರಿಗಳು ಕುಡಿಯುವ ನೀರು ಪೂರೈಸುವ ಬಗ್ಗೆ ಭರವಸೆ ನೀಡಿದ ನಂತರ ಧರಣಿ ಹಿಂದಕ್ಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ:</strong> ‘ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕುಡಿಯುವ ನೀರು ಪೂರೈಸುವಂತೆ ಹಾಗೂ ಚರಂಡಿ ಸ್ವಚ್ಛ ಮಾಡುವಂತೆ ಸೂಚಿಸಲು ಬರುವುದಿಲ್ಲ’ ಎಂದು ಪುರಸಭೆಯ ಮುಖ್ಯಾಧಿಕಾರಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ ಪ್ರಸಂಗ ಶುಕ್ರವಾರ ನಡೆಯಿತು.<br /> <br /> ಇದರಿಂದ ಆಕ್ರೋಶಗೊಂಡ ಪಟ್ಟಣದ ಕಿಲ್ಲಾ ಬಡಾವಣೆಯ ನಿವಾಸಿಗಳು ಪುರಸಭೆ ಮುಂದೆ ಧರಣಿ ನಡೆಸಿದ್ದು, ನಂತರ ಈ ಬಗ್ಗೆ ತಹಶೀಲ್ದಾರ್ ಎಂ.ಬಿ.ಪಾಟೀಲ ಅವರೇ ಪುರಸಭೆ ಮುಖ್ಯಾಧಿಕಾರಿಗಳ ಪರವಾಗಿ ಕ್ಷಮೆ ಕೇಳಿದರು. <br /> <br /> ಐದು ತಿಂಗಳ ಹಿಂದೆಯೇ ಮೂಲಸೌಲಭ್ಯ ಒದಗಿಸುವಂತೆ ಸಾರ್ವಜನಿಕರು ಪುರಸಭೆಗೆ ಲಿಖಿತ ಮನವಿ ನೀಡಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದ್ದರಿಂದ ಬಡಾವಣೆಯ ನಿವಾಸಿಗಳು ಮತ್ತೊಮ್ಮೆ ಮನವಿ ಸಲ್ಲಿಸಲು ಬಂದಾಗ ಮುಖ್ಯಾಧಿಕಾರಿ ಆಡಿದ ಮಾತು ಗೊಂದಲ ಸೃಷ್ಟಿಸಿತು.<br /> <br /> ಕೊನೆಗೆ ಮುಖ್ಯಾಧಿಕಾರಿಗಳು ಕುಡಿಯುವ ನೀರು ಪೂರೈಸುವ ಬಗ್ಗೆ ಭರವಸೆ ನೀಡಿದ ನಂತರ ಧರಣಿ ಹಿಂದಕ್ಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>